ಕೋಟಿಗಾನಹಳ್ಳಿ ರಾಮಯ್ಯ ಮೇಲೆ ಹಲ್ಲೆ; ಇಬ್ಬರನ್ನು ಬಂಧಿಸಿದ ಪೊಲೀಸರು
ಕೋಲಾರ ಜಿಲ್ಲೆಯ ಹಿರಿಯ ಸಾಹಿತಿ, ದಲಿತ ಚಳವಳಿ ನಾಯಕ ಕೋಟಿಗಾನಹಳ್ಳಿ ರಾಮಯ್ಯ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಕೋಟಿಗಾನಹಳ್ಳಿ ರಾಮಯ್ಯ ಹಾಗೂ ಅವರ ಮಗ ಮೇಘವರ್ಷ ರವರ ಮೇಲೆ ಹಲ್ಲೆ ಘಟನೆಗೆ ಸಂಬಂಧಿಸಿದಂತೆ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತಕ್ಷಣ ಕಾರ್ಯಾಚರಣೆ ನಡೆಸಿದ ಪೊಲೀಸರು ಮಂಜುನಾಥ ಮತ್ತು ಗೋವಿಂದಪ್ಪ ಎಂಬುವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹಲ್ಲೆಗೊಳಗಾಗಿರು ರಾಮಯ್ಯ ಅವರಿಗೆ ಕೋಲಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಸದ್ಯ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಜಿಲ್ಲಾ ಪೊಲೀಸರು ಅವರ ಆರೋಗ್ಯದ ಬಗ್ಗೆ ನಿಗಾವಹಿಸಿದ್ದಾರೆ. ಅವರ ಆರೋಗ್ಯದ ಬಗ್ಗೆ ಯಾವುದೇ ಆತಂಕ ಬೇಡ ಎಂದು ಅವರ ಅಭಿಮಾನಿಗಳಿಗೆ, ಬೆಂಬಲಿಗರಿಗೆ ಮನವಿ ಮಾಡಿದ್ದಾರೆ.
ಸೌಂಡ್ ಕಡಿಮೆ ಮಾಡಿ ಅಂದಿದಕ್ಕೆ ಹಲ್ಲೆ
ಅಂತರಗಂಗೆ ಬೆಟ್ಟದ ಪಾಪರಾಜನಹಳ್ಳಿ ಗ್ರಾಮದ ದೇವಸ್ಥಾನದಲ್ಲಿ ಜೋರು ಧ್ವನಿಯಲ್ಲಿ ಮೈಕ್ ಹಾಕಲಾಗಿತ್ತು, ಶಬ್ದ ಕಡಿಮೆ ಮಾಡುವಂತೆ ರಾಮಯ್ಯ ಅಲ್ಲಿದ್ದವರಿಗೆ ಮನವಿ ಮಾಡಿದ್ದಾರೆ, ಅಷ್ಟಕ್ಕೇ ಅಲ್ಲಿದ್ದವರು ಕೋಪಗೊಂಡು ರಾಮಯ್ಯ ಅವರ ಮೇಲೆ ಹಲ್ಲೆ ಮಾಡಿದ್ದಾರೆ.
ರಾಮಯ್ಯ ಅವರ ಮೇಲೆ ಹಲ್ಲೆ ನಡೆದ ವಿಚಾರ ತಿಳಿಯುತ್ತಿದ್ದಂತೆ ಬೆಂಬಲಿಗರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications