ಕೌಟುಂಬಿಕ ಕಲಹ: ಹೆಣ್ಣು ಮಕ್ಕಳಿಗೆ ಬೆಂಕಿ ಹಚ್ಚಿದ ತಾಯಿ, ಆತ್ಮಹತ್ಯೆಗೆ ಯತ್ನ
ಕೋಲಾರ, ಡಿ. 09 : ಕೌಟುಂಬಿಕ ಕಲಹ ಎಂಥವರನ್ನು ಕೆಟ್ಟ ಪರಿಸ್ಥಿತಿಗೆ ತಳ್ಳುತ್ತವೆ ಎಂಬುದಕ್ಕೆ ಕೋಲಾರದ ಘಟನೆ ಸಾಕ್ಷಿಯಾಗಿದೆ. ಇಂತಹ ಕಲಹಗಳ ಹಿನ್ನೆಲೆಯಲ್ಲಿ ಜ್ಯೋತಿ ಎಂಬ ಮಹಿಳೆಯೊಬ್ಬರು ತನ್ನ ಇಬ್ಬರು ಹೆಣ್ಣು ಮಕ್ಕಳಿಗೆ ಬೆಂಕಿ ಹಚ್ಚಿರುವ ಘಟನೆ ಕೋಲಾರದ ಮುಳಬಾಗಿಲಿನಲ್ಲಿ ನಡೆದಿದೆ.
ಈ ದುರಂತ ಘಟನೆಯು ಮುಳಬಾಗಲು ಬಳಿಯ ಅಂಜನಾದ್ರಿ ಬೆಟ್ಟದ ಮೇಲೆ ನಡೆದಿದೆ. ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿದ್ದು, ಅವರಲ್ಲಿ ಆಕೆಯ 6 ವರ್ಷದ ಮಗಳು ಸಾವನ್ನಪ್ಪಿದ್ದಾರೆ. ಮತ್ತೊಂದು ಮಗುವನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಗುವಿಗೆ ತೀವ್ರ ಸುಟ್ಟ ಗಾಯಗಳಾಗಿದ್ದು, ಚಿಂತಾಜನಕವಾಗಿದೆ ಎಂದು ವರದಿಗಳು ತಿಳಿಸಿವೆ.

ಆಂಧ್ರಪ್ರದೇಶದ ನಿವಾಸಿಯಾಗಿರುವ ಜ್ಯೋತಿ ಎಂಬುವವರು ಅಂಜನಾದ್ರಿ ಬೆಟ್ಟದ ಮೇಲೆ ಸಂಶಯ ಬರುವ ರೀತಿಯಲ್ಲಿ ಕುಳಿತಿರುವುದನ್ನು ಗಮನಿಸಿದ್ದಾರೆ. ಅಲ್ಲಿಂದ ಸುಟ್ಟ ವಾಸನೆ ಬರುತ್ತಿರುವುದನ್ನು ಗಮನಿಸಿದ ಕೆಲವು ಸ್ಥಳೀಯರು ನಂತರ ಸ್ಥಳಕ್ಕೆ ಧಾವಿಸಿದ್ದಾರೆ. ಆಗ ಮಹಿಳೆ ತನ್ನ ಇಬ್ಬರು ಮಕ್ಕಳಿಗೆ ತಾನೇ ಬೆಂಕಿ ಹಚ್ಚಿರುವುದಾಗಿ ಸ್ಥಳೀಯರ ಬಳಿ ಒಪ್ಪಿಕೊಂಡಿದ್ದಾಳೆ.
ಮಕ್ಕಳಿಗೆ ಬೆಂಕಿ ಹಚ್ಚಿದ ನಂತರ ತಾನು ಕೂಡ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆ. ಆದರೆ, ಸ್ಥಳೀಯರು ತಕ್ಷಣವೇ ಆಕೆಯನ್ನು ತಡೆದು ಮತ್ತೊಂದು ದುರಂತ ನಡೆಯುವುದನ್ನು ತಡೆದಿದ್ದಾರೆ.
ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಇಬ್ಬರು ಮಕ್ಕಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಬಳಿಕ ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಮಹಿಳೆ ತಾನು ಹೆತ್ತ ಮಕ್ಕಳಿಗೆ ಬೆಂಕಿ ಹಚ್ಚಲು ಕೌಟಂಬಿಕ ಕಲಹಗಳು ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಹೆಚ್ಚಿನ ವಿವರಗಳಿಗಾಗಿ ತನಿಖೆ ನಡೆಸಲಾಗುತ್ತಿದೆ.
COOJ Mental Health Foundation (COOJ)- 0832-2252525, ಪರಿವರ್ತನ್- +91 7676 602 602, Connecting Trust- +91 992 200 1122/+91-992 200 4305 or Sahai- 080-25497777/ [email protected]
ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಬೆಂಗಳೂರಿನಲ್ಲಿ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ SAHAI ಸಹಾಯವಾಣಿ ಇಂತಿದೆ: 080 - 25497777
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications