ಕೋಲಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಒಂದು ವಾರದಲ್ಲಿ ವಿಸ್ಟ್ರಾನ್ ವಿವಾದ ಇತ್ಯರ್ಥ; ಘಟಕ ಆರಂಭ

By ಕೋಲಾರ ಪ್ರತಿನಿಧಿ
|
Google Oneindia Kannada News

ಕೋಲಾರ, ಡಿಸೆಂಬರ್ 28; "ವಿಸ್ಟ್ರಾನ್ ಕಂಪನಿಯ ಘಟನೆಯನ್ನು ಒಂದು ವಾರದಲ್ಲಿ ಇತ್ಯರ್ಥ ಪಡಿಸಿ, ಕಂಪನಿಯನ್ನು ಪುನಃ ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗುವುದು" ಎಂದು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಹೇಳಿದರು.

ಕೋಲಾರ ತಾಲೂಕಿನ ನರಸಾಪುರ ಕೈಗಾರಿಕಾ ಪ್ರದೇಶದ ವಿಸ್ಟ್ರಾನ್ ಕಂಪನಿಗೆ ಸಚಿವ ಶಿವರಾಂ ಹೆಬ್ಬಾರ್ ಭಾನುವಾರ ಭೇಟಿ ನೀಡಿದ್ದರು. ಮಾಧ್ಯಮಗಳ ಜೊತೆ ಮಾತನಾಡಿದ ಅವರು, "ಘಟನೆಗೆ ಸಂಬಂಧಿಸಿದಂತೆ ಪೂರ್ಣ ಪ್ರಮಾಣದ ಮಾಹಿತಿ ಲಭ್ಯವಾಗಿಲ್ಲ ಮುಂದಿನ ವಾರ ವಿಕಾಸಸೌಧದಲ್ಲಿ ಕಂಪನಿಯ ಆಡಳಿತ ಮಂಡಳಿಯ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ವಿವಾದ ಇತ್ಯರ್ಥ ಪಡಿಸಲಾಗುತ್ತದೆ" ಎಂದರು.

ವಿಸ್ಟ್ರಾನ್ ಗಲಭೆ; ತನಿಖೆಯ ಮೇಲ್ವಿಚಾರಣೆಗೆ ಎಡಿಜಿಪಿ ನೇಮಕ ವಿಸ್ಟ್ರಾನ್ ಗಲಭೆ; ತನಿಖೆಯ ಮೇಲ್ವಿಚಾರಣೆಗೆ ಎಡಿಜಿಪಿ ನೇಮಕ

"ರಾಜ್ಯದಲ್ಲಿ ಉದ್ಯೋಗಾವಕಾಶಗಳನ್ನು ನೀಡಲು ಪಕ್ಕದ ರಾಜ್ಯಗಳಿಗಿಂತ ನಮ್ಮ ರಾಜ್ಯಕ್ಕೆ ಕಂಪನಿಗಳು ಪ್ರವೇಶ ಮಾಡಲು ಕೈಗಾರಿಕಾ ನೀತಿ ಸಡಲೀಕರಣ ಮಾಡಲಾಗಿದೆ. ನಿರುದ್ಯೋಗ ಸಮಸ್ಯೆಯನ್ನು ಹೋಗಲಾಡಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಕ್ರಮ ಕೈಗೊಂಡಿದ್ದಾರೆ" ಎಂದು ತಿಳಿಸಿದರು.

ಐಫೋನ್ ಕಂಪೆನಿ ಧ್ವಂಸ: ತಪ್ಪೊಪ್ಪಿಕೊಂಡು ಕಾರ್ಮಿಕರ ಕ್ಷಮೆ ಕೋರಿದ ವಿಸ್ಟ್ರಾನ್ಐಫೋನ್ ಕಂಪೆನಿ ಧ್ವಂಸ: ತಪ್ಪೊಪ್ಪಿಕೊಂಡು ಕಾರ್ಮಿಕರ ಕ್ಷಮೆ ಕೋರಿದ ವಿಸ್ಟ್ರಾನ್

Labour Minister Visits Wistron Unit Narasapura

"ಕಂಪನಿಯಲ್ಲಿ ದಾಂಧಲೆ ನಡೆಸಲು ಕಾರಣವೇನು?, ಇಲ್ಲಿನ ಲೋಪಗಳೇನು? ಎಂಬುದನ್ನು ಪರಿಶೀಲಿಸಲಾಗಿದೆ. ಗೊತ್ತಿದ್ದೋ, ಗೊತ್ತಿಲ್ಲದೆಯೋ ತಪ್ಪು ನಡೆದಿದೆ. ಕಾರ್ಮಿಕರಿಗೆ ನ್ಯಾಯ ಕೊಡಿಸುವುದು ಸರಕಾರದ ಉದ್ದೇಶವಾಗಿದೆ ಸಮಸ್ಯೆಗೆ ಶಾಶ್ವತವಾಗಿ ಪರಿಹಾರ ನೀಡಲಾಗುವುದು" ಎಂದು ಸಚಿವರು ಭರವಸೆ ನೀಡಿದರು.

ವಿಸ್ಟ್ರಾನ್ ಗಲಾಟೆ; ಎಸ್‌ಎಫ್‌ಐ ಸಂಘಟನೆ ಅಧ್ಯಕ್ಷ ಬಿಡುಗಡೆ ವಿಸ್ಟ್ರಾನ್ ಗಲಾಟೆ; ಎಸ್‌ಎಫ್‌ಐ ಸಂಘಟನೆ ಅಧ್ಯಕ್ಷ ಬಿಡುಗಡೆ

"ಕಾರ್ಮಿಕರ ಸಮಸ್ಯೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವ, ಸಂಸದ, ಶಾಸಕರಿಗೆ ಜಿಲ್ಲಾಡಳಿತಕ್ಕೆ ತಿಳಿಸದೇ ಇರುವುದಕ್ಕಾಗಿ ಈ ಘಟನೆ ನಡೆದಿದೆ ಎಂದು ಮೇಲ್ನೋಟಕ್ಕೆ ತಿಳಿದಿದೆ. ಕಂಪನಿಯಲ್ಲಿ ಕಾರ್ಮಿಕರ ಯೂನಿಯನ್ ಸಹ ಮಾಡಿಕೊಂಡಿಲ್ಲ. ಕಂಪನಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಮಿಕರನ್ನು ನೇಮಕ ಮಾಡಿಕೊಳ್ಳಲು ಅವಕಾಶ ಇದೆ. ಅವರಿಗೆ ಕನಿಷ್ಠ ವೇತನ ನೀಡಬೇಕು" ಎಂದು ಸಚಿವರು ಹೇಳಿದರು.

Labour Minister Visits Wistron Unit Narasapura

Recommended Video

ಇಟಲಿಗೆ ಹೋಗ್ತಿರೋದಾದ್ರು ಯಾಕೆ ?? | Rahul Gandhi | Oneindia Kannada

ಜಿಲ್ಲಾ ಉಸ್ತುವಾರಿ ಸಚಿವ ಎಚ್. ನಾಗೇಶ್, ಸಂಸದ ಎಸ್. ಮುನಿಸ್ವಾಮಿ, ಶಾಸಕ ಕೆ. ಶ್ರೀನಿವಾಸ ಗೌಡ, ಜಿಲ್ಲಾಧಿಕಾರಿ ಸಿ.ಸತ್ಯಭಾಮ ಮುಂತಾದವರು ಸಚಿವ ಜೊತೆ ಘಟಕಕ್ಕೆ ಭೇಟಿ ನೀಡಿದ್ದರು.

English summary
Shivaram Hebbar labour minister of Karnataka visited Kolar district Narasapura Wistron unit. Wistron unit in news after the violence on December 12, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X