ಲಾಕ್ಡೌನ್ ಎಫೆಕ್ಟ್: ಮರದಲ್ಲೇ ಕೊಳೆಯುತ್ತಿದೆ ಹಣ್ಣುಗಳ ರಾಜ ಮಾವು
ಕೋಲಾರ, ಜೂನ್ 25: ಹಣ್ಣುಗಳ ರಾಜ ಮಾವಿನ ತವರು ಕೋಲಾರದಲ್ಲಿ ಮಾವು ಮಂಕಾಗಿದ್ದು, ಸೂಕ್ತ ಬೆಲೆ ಇಲ್ಲದೆ ಮಾವಿನ ಹಣ್ಣುಗಳು ಮರದಲ್ಲೇ ಕೊಳೆಯುತ್ತಿವೆ. ರೈತರು ಬೆಲೆ ಇಲ್ಲದೆ ಮಾವಿನ ಹಣ್ಣನ್ನು ಮಾರುಕಟ್ಟೆಗೂ ಹಾಕಲಾಗದೆ, ಮರದಲ್ಲೂ ಬಿಡಲಾಗದೆ ರಸ್ತೆ ಬದಿಯಲ್ಲಿ ತಂದು ಸುರಿಯುತ್ತಿದ್ದಾರೆ. ಮಾವು ಬೆಳೆಗಾರರು ವರ್ಷಕ್ಕೊಂದು ಬೆಳೆಯಲ್ಲಿ ನಷ್ಟ ಅನುಭವಿಸಿ ದಿಕ್ಕು ಕಾಣದಂತಾಗುತ್ತಿದ್ದಾರೆ. ಹೀಗೆ ರಸ್ತೆ ಬದಿಯಲ್ಲಿ ಸುರಿದಿರುವ ರಾಶಿ ರಾಶಿ ಮಾವಿನ ಹಣ್ಣುಗಳು, ಮರದಲ್ಲೇ ಹಣ್ಣಾಗಿ ಕೊಳೆಯುತ್ತಿರುವ ಮಾವಿನ ಹಣ್ಣುಗಳು, ಇದೆಲ್ಲಾ ದೃಶ್ಯಗಳು ಕಂಡು ಬಂದಿದ್ದು ರಾಜ್ಯದ ಮಾವಿನ ತವರು ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ.
ಹೀಗೆ ರಸ್ತೆ ಬದಿಯಲ್ಲಿ ಸುರಿದಿರುವ ರಾಶಿ ರಾಶಿ ಮಾವಿನ ಹಣ್ಣುಗಳು, ಮರದಲ್ಲೇ ಹಣ್ಣಾಗಿ ಕೊಳೆಯುತ್ತಿರುವ ಮಾವಿನ ಹಣ್ಣುಗಳು, ಇದೆಲ್ಲಾ ದೃಶ್ಯಗಳು ಕಂಡು ಬಂದಿದ್ದು ರಾಜ್ಯದ ಮಾವಿನ ತವರು ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ.

48,000 ಹೆಕ್ಟೇರ್ ಪ್ರದೇಶದಲ್ಲಿ ಮಾವು ಬೆಳೆ
ಶ್ರೀನಿವಾಸಪುರ ತಾಲ್ಲೂಕಿನಲ್ಲಿ ರೈತರ ಪ್ರಮುಖ ಕಸುಬು ಮಾವು ಬೆಳೆ, ತಾಲ್ಲೂಕೊಂದರಲ್ಲೇ ಸರಿಸುಮಾರು 48,000 ಹೆಕ್ಟೇರ್ ಪ್ರದೇಶದಲ್ಲಿ ಮಾವು ಬೆಳೆ ಬೆಳೆಯುತ್ತಾರೆ. ವಿಶ್ವದಲ್ಲೇ ಎಲ್ಲೂ ಸಿಗದ ವಿವಿಧ ತಳಿಯ ಮಾವು ಇಲ್ಲಿ ಬೆಳೆಯಲಾಗುತ್ತದೆ. ಹಾಗಾಗಿ ಇಲ್ಲಿನ ಮಾವಿನ ಹಣ್ಣನ್ನು ದೇಶ ಹಾಗೂ ವಿದೇಶಗಳಿಗೂ ರಪ್ತು ಮಾಡಲಾಗುತ್ತಿತ್ತು. ಇಂಥ ಮಾವಿನ ತವರಲ್ಲಿ ಈ ವರ್ಷ ಕೊರೊನಾ ತಂದ ಆಘಾತ ಮಾವು ಬೆಳೆದ ರೈತರಿಗೆ ಹಿಂದೆಂದು ಕಾಣದಷ್ಟು ನಷ್ಟ ಉಂಟಾಗಿದೆ.

ಲಕ್ಷಾಂತರ ರೂಪಾಯಿ ಸಾಲ
ವರ್ಷದೊಂದೇ ಬೆಳೆಯಲ್ಲಿ ಜೀವನ ಸಾಗಿಸುವ ಇಲ್ಲಿನ ರೈತರು, ಲಕ್ಷಾಂತರ ರೂಪಾಯಿ ಸಾಲ ಮಾಡಿ ಸಾಕಷ್ಟು ನಿರೀಕ್ಷೆಯಿಂದ ಮಾವನ್ನು ಬೆಳೆದಿದ್ದರು. ಆದರೆ ಮಾರುಕಟ್ಟೆಯಲ್ಲಿ ಮಾವಿಗೆ ಕನಿಷ್ಠ ಬೆಲೆಯೂ ಸಿಗದ ಹಿನ್ನೆಲೆ ರೈತರು ಆಘಾತಕ್ಕೊಳಗಾಗಿ ದಿಕ್ಕು ತೋಚದಂತಾಗಿದ್ದಾರೆ. ಮಾವನ್ನು ಮರದಿಂದ ಕೀಳುವುದಾ? ಬೇಡವಾ? ಅನ್ನುವ ಪರಿಸ್ಥಿತಿಗೆ ಬಂದಿದ್ದಾರೆ. ಇನ್ನು ಈಗಾಗಲೇ ಕಟಾವು ಮಾಡಿರುವ ಕೆಲವರು ಅಷ್ಟು ಕಡಿಮೆ ಬೆಲೆಗೆ ಮಾರಾಟ ಮಾಡಲಾಗದೆ ರಸ್ತೆ ಬದಿಯಲ್ಲಿ ಸುರಿದು ಹೋಗಿದ್ದಾರೆ.

ಕೆಜಿ ಮಾವು ಬೆಲೆ 6 ರೂಪಾಯಿ
ಇನ್ನು ಶ್ರೀನಿವಾಸಪುರದಲ್ಲಿ ಅರ್ಧದಷ್ಟು ಮಾವು ಕಟಾವು ಮಾಡಬೇಕಿದೆ. ಆದರೆ ಮಾವಿಗೆ ಮಾರುಕಟ್ಟೆಯಲ್ಲಿ ಬೆಲೆ ಇಲ್ಲದೆ ಸದ್ಯ ಜ್ಯೂಸ್ ಪ್ಯಾಕ್ಟರಿಗಳು ಹಾಗೂ ಪಲ್ಪ್ ಇಂಡಸ್ಟ್ರೀಗಳಿಂದಲೂ ಮಾವನ್ನು ಕಡಿಮೆ ಬೆಲೆಗೆ ಖರೀದಿ ಮಾಡುತ್ತಿವೆ. ಸದ್ಯ ಕೆಜಿ ಮಾವು 6 ರೂಪಾಯಿಗೆ ಪಡೆಯುತ್ತಿರುವ ವರ್ತಕರು, ಮಾವನ್ನು ಕಡಿಮೆ ಬೆಲೆಗೆ ಕೇಳುತ್ತಿದ್ದಾರೆ. ಕೊರೊನಾ ಲಾಕ್ಡೌನ್ ಹಿನ್ನೆಲೆಯಲ್ಲಿ ಹೊರ ರಾಜ್ಯಗಳಿಂದ ವ್ಯಾಪಾರಸ್ಥರು ಬರುತ್ತಿಲ್ಲ. ಹೊರ ರಾಜ್ಯಗಳಿಂದ ನಿರೀಕ್ಷೆಯಷ್ಟು ಬೇಡಿಕೆ ಇಲ್ಲದೆ ಇಂದು ಬೆಲೆ ಜಾಸ್ತಿ ಆಗುತ್ತದೆ, ನಾಳೆ ಬೆಲೆ ಜಾಸ್ತಿ ಆಗುತ್ತದೆ ಅನ್ನುವ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು ಮಾರುಕಟ್ಟೆ ಎದುರು ನೋಡುತ್ತಿದ್ದಾರೆ.
Recommended Video

ಲಾಕ್ಡೌನ್ನಿಂದ ಮಾವು ಬೆಳೆಗಾರರಿಗೆ ಸಂಕಷ್ಟ
ಅತ್ತ ಮಾರುಕಟ್ಟೆಗೆ ಬಂದ ಮಾವು ಮಾರುಕಟ್ಟೆಯಲ್ಲೇ ಕೊಳೆಯುತ್ತಿದ್ದು, ಮಾವನ್ನು ವ್ಯಾಪಾರಸ್ಥರು ಬೇರೆ ದಾರಿ ಇಲ್ಲದೆ ತಿಪ್ಪೆಗೆ ಸುರಿಯುತ್ತಿದ್ದಾರೆ. ಈಗಿರುವ ಬೆಲೆಯಲ್ಲಿ ರೈತರು ಕಟಾವು ಮಾಡುವ ಖರ್ಚು ಸಿಗದಂತಾಗಿದೆ. ಈ ವರ್ಷ ಕೊರೊನಾ ನಡುವೆ ಮಾವು ಬೆಳೆಗಾರರು ತೀವ್ರವಾದ ಸಂಕಷ್ಟಕ್ಕೆ ಸಿಲುಕಿದ್ದಾನೆ. ಹಾಗಾಗಿ ಸರ್ಕಾರ ಮಾವು ಬೆಳೆಗಾರರಿಗೆ ಕನಿಷ್ಠ ಬೆಂಬಲ ಬೆಲೆ ಘೋಷಣೆ ಮಾಡುವ ಮೂಲಕ ರೈತರ ನೆರವಿಗೆ ಬರಬೇಕು ಅನ್ನೋದು ವ್ಯಾಪಾರಸ್ಥರು ಹಾಗೂ ರೈತರ ಬೇಡಿಕೆ.
ಒಟ್ಟಿನಲ್ಲಿ ಕೊರೊನಾ ಲಾಕ್ಡೌನ್ನಿಂದ ಮಾವು ಬೆಳೆಗಾರರಿಗೆ ಸಂಕಷ್ಟ ಎದುರಾಗಿದೆ. ರೈತ, ವ್ಯಾಪಾರಸ್ಥರು ಎಲ್ಲರೂ ಬೀದಿಗೆ ಬಿದ್ದಿದ್ದು, ವರ್ಷದೊಂದೇ ಬೆಳೆಯಲ್ಲಿ ಜೀವನ ಕಟ್ಟಿಕೊಳ್ಳುತ್ತಿದ್ದವರ ಪರಿಸ್ಥಿತಿ ಮೂರಾಬಟ್ಟೆಯಾಗಿದೆ. ಸರ್ಕಾರ ಅವರ ನೆರವಿಗೆ ಬಂದು ಸಂಕಷ್ಟದಲ್ಲಿರುವ ರೈತರಿಗೆ ಸಹಾಯ ಹಸ್ತ ಚಾಚಬೇಕಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications