ಕೋಲಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೋಲಾರಕ್ಕೂ ಬಂದ ಮಿಡತೆ ಸೈನ್ಯ: ರೈತರಲ್ಲಿ ಆತಂಕ

By ಕೋಲಾರ ಪ್ರತಿನಿಧಿ
|
Google Oneindia Kannada News

ಕೋಲಾರ, ಮೇ 28: ಬೆಳೆಯನ್ನು ಸಂಪೂರ್ಣವಾಗಿ ನಾಶಮಾಡಿ ರೈತರನ್ನು ಸಂಕಷ್ಟಕ್ಕೆ ದೂಡಿರುವ ಮರುಭೂಮಿ ಮಿಡತೆಗಳ ಕಾಟ ಈಗ ಚಿನ್ನದ ನಾಡು ಕೋಲಾರಕ್ಕೂ ಬಂದಿದೆ.

Recommended Video

ಮಿಡಿತೆಗಳ ಅಟ್ಟಹಾಸಕ್ಕೆ ಉತ್ತರ ಭಾರತ ತತ್ತರ

ಕೋಲಾರ ತಾಲೂಕಿನ ದಿಂಬ, ದೊಡ್ಡಹಸಾಳ ಗ್ರಾಮಗಳ ಬಳಿ ಮಿಡತೆಗಳು ಕಾಣಿಸಿಕೊಂಡಿವೆ. ವಿದ್ಯುತ್ ಕಂಬ ಹಾಗೂ ಗಿಡಗಳ ಮೇಲೆ ಮಿಡತೆಗಳ ಸೈನ್ಯವು ಕಾಣಿಸಿಕೊಂಡಿವೆ.

ಮಿಡತೆ ದಾಳಿ ತಡೆಗೆ ರೈತರಿಗೆ ಕೃಷಿ ಇಲಾಖೆ ಸಲಹೆಗಳುಮಿಡತೆ ದಾಳಿ ತಡೆಗೆ ರೈತರಿಗೆ ಕೃಷಿ ಇಲಾಖೆ ಸಲಹೆಗಳು

ಸ್ಥಳಕ್ಕೆ ಕೃಷಿ ಇಲಾಖೆ ವಿಜ್ಞಾನಿಗಳು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಮಿಡತೆಗಳಿಗೆ ಬೆಂಕಿ ಹಚ್ಚಿ ಸ್ಥಳೀಯರು ಸುಟ್ಟಿದ್ದಾರೆ. ಮಿಡತೆಗಳ ಕಾಟಕ್ಕೆ ಸುತ್ತಮುತ್ತಲಿನ ಗ್ರಾಮದ ರೈತರಲ್ಲಿ ಆತಂಕ ಶುರುವಾಗಿದೆ.

Locust Attack In Kolar District: Anxiety Among Farmers

ರಾಜಸ್ಥಾನ ಮತ್ತು ಗುಜರಾತ್ ಭಾಗಗಳಲ್ಲಿ ಮಿಡತೆಗಳಿಗೆ ಸೇವಿಸಲು ಕೀಟಗಳು ಲಭ್ಯವಾಗುತ್ತಿಲ್ಲ. ಹೀಗಾಗಿ, ಭಾರಿ ಗಾಳಿ ಜೊತೆ ಮಿಡತೆಗಳು ದಕ್ಷಿಣ ಭಾರತದ ಇತರೆ ಭಾಗಗಳಿಗೆ ಪ್ರವೇಶಿಸುತ್ತಿವೆ.

Locust Attack In Kolar District: Anxiety Among Farmers

ಮಿಡತೆ ಕಾಟ ತಡೆಯಲು ರೈತರು ತಗಡಿನ ಡಬ್ಬಿ, ಡ್ರಮ್, ತಟ್ಟೆ ಇವುಗಳನ್ನು ಬಾರಿಸುವ ಮೂಲಕ ಭಾರಿ ಶಬ್ದವನ್ನು ಹುಟ್ಟಿಸಬೇಕು. ರೇಡಿಯೋ ಅಥವಾ ಎಲೆಕ್ಟ್ರಾನಿಕ್ ಸೌಂಡ್ ಗಳನ್ನು ಹಾಕಬೇಕು. ಇದರಿಂದ ಮಿಡತೆ ತಂಡಗಳು ಭೂಮಿಯ ಮೇಲಿನ ಬೆಳೆಗಳಿಗೆ ಬರುವುದಿಲ್ಲ.

English summary
The desert locusts that have completely destroyed the crop and are now on the Kolar District.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X