ಕೋಲಾರ ಸಂಸದರ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ
ಕೋಲಾರ, ಮೇ 6: ಕೋಲಾರ ಸಂಸದ ವಿ.ಮುನಿಸ್ವಾಮಿ ಅವರ ಸಮಯ ಪ್ರಜ್ಞೆಯಿಂದ ಕೋಲಾರ ಜಿಲ್ಲೆಯಲ್ಲಿ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.
ಆಕ್ಸಿಜನ್ ತುಂಬಿಸಿಕೊಂಡು ಬರುವ ಲಾರಿ 24 ಗಂಟೆ ತಡವಾದ ಪರಿಣಾಮ, ಆಕ್ಸಿಜನ್ ಅವಶ್ಯಕತೆ ಎದುರಾಗುವ ಸಾಧ್ಯತೆ ಇದೆ ಎಂದು ರಾತ್ರಿ 10 ಗಂಟೆ ವೇಳೆಗೆ ಕೋಲಾರ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಕರೆ ಮಾಡಿ ಸಂಸದರಿಗೆ ಮಾಹಿತಿ ನೀಡಿದರು.

ಕೂಡಲೇ ಎಚ್ಚೆತ್ತು ನೇರವಾಗಿ ತಾವೇ ಆಕ್ಸಿಜನ್ ತಯಾರಿಕಾ ಘಟಕಕ್ಕೆ ತೆರಳಿದ ಸಂಸದ ಮುನಿಸ್ವಾಮಿ, ಬೆಂಗಳೂರಿನ ಗರುಡಾಚಾರಪಾಳ್ಯದಲ್ಲಿರುವ ಬುರುಕ ಗ್ಯಾಸ್ ಲಿಮಿಟೆಡ್ ಬಳಿ ತೆರಳಿದರು.

ಕರೆ ಮಾಡಿ ಹೇಳಿದರೆ ಸಮಸ್ಯೆ ಬಗೆಹರಿಯೋದಿಲ್ಲ ಎಂದು ನೇರವಾಗಿ ತಾವೇ ತೆರಳಿದ ಸಂಸದರು, ಕಳೆದ 24 ಗಂಟೆಯಿಂದ ಆಕ್ಸಿಜನ್ ತುಂಬಿಸಲು ಕಾಯುತ್ತಿದ್ದ ಲಾರಿ ಸ್ಟ್ರಕ್ ಆಗಿ ನಿಂತಿತ್ತು. ಆಗ ಆಕ್ಸಿಜನ್ ತಯಾರಿಕಾ ಘಟಕದ ಮ್ಯಾನೇಜರ್ ಭೇಟಿಯಾಗಿ ಆಕ್ಸಿಜನ್ ರೀಫಿಲ್ ಮಾಡಿಸಿಕೊಂಡು ಬಂದರು.

Recommended Video
ಮಧ್ಯರಾತ್ರಿ 1 ಗಂಟೆ ವೇಳೆ ಸುಮಾರು 5 KL ನಷ್ಟು ಆಕ್ಸಿಜನ್ ನನ್ನು ಮಾಲೂರಿನ ವೆಂಕಟೇಶ್ವರ ಏರ್ ಪ್ರೊಡಕ್ಟ್ ಕೇಂದ್ರಕ್ಕೆ ಸೇರಿಸಿದ ಸಂಸದ ಮುನಿಸ್ವಾಮಿ, ನಂತರ ತಾವೇ ಮುಂದೆ ನಿಂತು ಆಕ್ಸಿಜನ್ ರೀಫಿಲ್ ಮಾಡಿಸಿದರು. ಪರಿಣಾಮ ಮಾಲೂರಿನ ಆಕ್ಸಿಜನ್ ಘಟಕದಿಂದ ಸಿಲೆಂಡರ್ ನಲ್ಲಿ ತುಂಬಿಸಿ ಸರಬರಾಜು ಮಾಡಲಾಗುತ್ತಿದೆ. ಸರಿಯಾದ ಸಮಯಕ್ಕೆ ಆಕ್ಸಿಜನ್ ಪೂರೈಕೆ ಆಗದೆ ಇದ್ದಿದ್ದರೆ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು. ಸಂಸದರ ಸಮಯ ಪ್ರಜ್ಞೆಗೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications