ಉಪಚುನಾವಣೆ: ಅಚ್ಚರಿಯ ಘೋಷಣೆ ಮಾಡಿದ ಎಂಟಿಬಿ ನಾಗರಾಜು
Recommended Video
ಬೆಂಗಳೂರು, ಆಗಸ್ಟ್ 29: ಅನರ್ಹ ಶಾಸಕ ಎಂಟಿಬಿ ನಾಗರಾಜು ಅವರು ಬಿಜೆಪಿ ಸೇರುತ್ತಾರೆ ಎಂದೇ ಎಣಿಸಲಾಗಿತ್ತು. ಆದರೆ ಆ ಬಗ್ಗೆ ಅಚ್ಚರಿಯ ಘೊಷಣೆಯೊಂದನ್ನು ಅವರು ಮಾಡಿದ್ದಾರೆ.
ಉಪಚುನಾವಣೆಯಲ್ಲಿ ಪಕ್ಷೇತರವಾಗಿ ಸ್ಪರ್ಧೆ ಮಾಡುವುದಾಗಿ ಅವರು ಇಂದು ಹೇಳಿದ್ದಾರೆ. ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಘೊಷಣೆ ಹೊರಡಿಸಿದರು.
ಕಾಂಗ್ರೆಸ್ ಪಕ್ಷದಿಂದ ಹೊಸಕೋಟೆ ಕ್ಷೇತ್ರದಿಂದ ಆಯ್ಕೆಯಾಗಿ ಮೈತ್ರಿ ಸರ್ಕಾರದಲ್ಲಿ ಮಂತ್ರಿಯೂ ಆಗಿದ್ದ ಅವರು, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಸರ್ಕಾರ ಉರುಳುವುದರಲ್ಲಿ ಪಾತ್ರ ವಹಿಸಿದ್ದರು. ನಾಗರಾಜು ಅವರ ರಾಜೀನಾಮೆ ಹಿಂದೆ ಬಿಜೆಪಿ ಪಾತ್ರ ಇದೆ ಎನ್ನಲಾಗಿತ್ತು. ಹಾಗಾಗಿ ಅವರು ಬಿಜೆಪಿ ಸೇರುತ್ತಾರೆ ಎಂಬ ನಿರೀಕ್ಷೆಯೂ ಇತ್ತು ಆದರೆ ಅದು ಹುಸಿಯಾಗಿದೆ.

ಹೊಸಕೋಟೆಯಲ್ಲಿ ಬಿಜೆಪಿ-ಕಾಂಗ್ರೆಸ್ ಹಾವು-ಮುಂಗುಸಿ
ಎಂಟಿಬಿ ನಾಗರಾಜು ಅವರು ಬಿಜೆಪಿಯ ಪ್ರಬಲ ಎದುರಾಳಿಯ ವಿರುದ್ಧವೇ ಮೂರು ಬಾರಿ ಗೆದ್ದು ಶಾಸಕರಾದವರು, ಹೊಸಕೋಟೆ ಕ್ಷೇತ್ರದಲ್ಲಿ ಬಿಜೆಪಿಯ ಬಿ.ಎನ್.ಬಚ್ಚೇಗೌಡ ಮತ್ತು ಎಂಟಿಬಿ ನಾಗರಾಜು ನಡುವೆ ತೀರದ ದ್ವೇಷ ಪರಿಸ್ಥಿತಿ ಹೀಗಿರುವಾಗ ಎಂಟಿಬಿ ನಾಗರಾಜು ಬಿಜೆಪಿ ಸೇರಿದರೆ ಬಚ್ಚೇಗೌಡ ಒಪ್ಪಿದರೂ ಕಾರ್ಯಕರ್ತರು ಒಪ್ಪುವುದಿಲ್ಲ ಹಾಗಾಗಿ ಎಂಟಿಬಿ ಈ ನಿರ್ಧಾರ ಮಾಡಿರುವ ಸಾಧ್ಯತೆ ಇದೆ.

ಶರತ್ ಬಚ್ಚೇಗೌಡಗೆ ಟಿಕೆಟ್ ತಪ್ಪಿಸುವುದು ಸುಲಭವಿಲ್ಲ
ಹೊಸಕೋಟೆಯಲ್ಲಿ ಬಚ್ಚೇಗೌಡ ಬಿಜೆಪಿಯನ್ನು ಅರಳಿಸಿದ್ದಾರೆ. ಹಾಗಾಗಿ ಅವರ ಮಗ ಶರತ್ ಬಚ್ಚೇಗೌಡ ಅವರಿಗೆ ಬಿಜೆಪಿ ಟಿಕೆಟ್ ತಪ್ಪಿಸುವುದು ಎಂಟಿಬಿಗೆ ಸುಲಭ ಸಾಧ್ಯವಿಲ್ಲ, ಹಾಗಾಗಿ ಪಕ್ಷೇತರವಾಗಿ ಚುನಾವಣೆಗೆ ಸ್ಪರ್ಧೆ ಮಾಡುವ ನಿರ್ಣಯಕ್ಕೆ ಬಂದಿರುವ ಸಾಧ್ಯತೆ ಇದೆ.

ಡಿ.ಕೆ.ಶಿವಕುಮಾರ್ ಸವಾಲುವ ಎದುರಿಸುವ ತಂತ್ರ?
'ನನ್ನ ನಿನ್ನ ಭೇಟಿ ಹೊಸಕೋಟೆ ರಣರಂಗದಲ್ಲಿ' ಎಂದು ಡಿ.ಕೆ.ಶಿವಕುಮಾರ್ ಈಗಾಗಲೇ ಎಂಟಿಬಿಗೆ ಸವಾಲು ಹಾಕಿದ್ದಾರೆ. ಹಾಗಾಗಿ ಕಾಂಗ್ರೆಸ್ ಅನ್ನು ಸೋಲಿಸುವ ಗುರಿಯಿಂದ ಎಂಟಿಬಿ ಪಕ್ಷೇತರವಾಗಿ ಸ್ಪರ್ಧಿಸುತ್ತಿದ್ದಾರೆ ಎನ್ನುವ ಲೆಕ್ಕಾಚಾರವೂ ಕ್ಷೇತ್ರದಲ್ಲಿ ನಡೆಯುತ್ತಿದೆ.

ಹೊಸಕೋಟೆ ಬಿಜೆಪಿಯಲ್ಲಿ ಅಸಮಾಧಾನ
ಹೊಸಕೋಟೆ ಬಿಜೆಪಿಯಲ್ಲಿ ಈಗಾಗಲೇ ಗದ್ದಲ ಪ್ರಾರಂಭವಾಗಿದ್ದು, ಎಂಟಿಬಿ ನಾಗರಾಜು ಅವರನ್ನು ಯಾವುದೇ ಕಾರಣಕ್ಕೂ ಪಕ್ಷಕ್ಕೆ ಸೇರಿಸಿಕೊಳ್ಳಬಾರದು ಎಂದು ಹಠ ಹಿಡಿದಿದ್ದಾರೆ. ಬಚ್ಚೇಗೌಡ ಅವರೂ ಸಹ ಯಡಿಯೂರಪ್ಪ ಬಳಿ ಈ ಬಗ್ಗೆ ಮಾತನಾಡಿದ್ದಾರೆ. ಎಂಟಿಬಿ ಬಿಜೆಪಿಗೆ ಬಂದರೆ ತಾವು ಪಕ್ಷ ತ್ಯಜಿಸುವುದಾಗಿಯೂ ಅವರು ಬೆದರಿಕೆ ಹಾಕಿದ್ದಾರೆ ಎಂಬ ಸುದ್ದಿಯೂ ಇದೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications