ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕಿಲ್ಲ: ಹೈಕೋರ್ಟ್
ಬೆಂಗಳೂರು, ಏ.19. ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯ್ತಿ ಸೇರಿದಂತೆ ಯಾವುದೇ ನಗರ ಸ್ಥಳೀಯ ಸಂಸ್ಥೆಗಳ ನಾಮನಿರ್ದೇಶಿತ ಸದಸ್ಯರಿಗೆ ಅಧ್ಯಕ್ಷ/ಉಪಾಧ್ಯಕ್ಷರ ಆಯ್ಕೆಗೆ ನಡೆಸುವ ಸಭೆಗಳಲ್ಲಿ ಮತದಾನದ ಹಕ್ಕಿಲ್ಲ ಎಂದು ಹೈಕೋರ್ಟ್ ಆದೇಶಿದೆ.
ಮಾಲೂರು ಪುರಸಭೆಯ ಕೆ.ಲಕ್ಷ್ಮೀಕಾಂತ ಸೇರಿ ಆರು ನಾಮ ನಿರ್ದೇಶಿತ ಸದಸ್ಯರು ಸಲ್ಲಿಸಿದ್ದ ಮೇಲ್ಮನವಿ ವಜಾಗೊಳಿಸಿರುವ ನ್ಯಾ. ಅಲೋಕ್ ಅರಾಧೆ ಮತ್ತು ನ್ಯಾ. ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ವಿಭಾಗೀಯಪೀಠ ಈ ಆದೇಶ ನೀಡಿದೆ.
ನ್ಯಾಯಾಲಯ ಏನು ಹೇಳಿದೆ?: ಸಂವಿಧಾನದ ಕಲಂ 243ಆರ್(2)(ಎ) ಸಿಂಧುತ್ವನ್ನು ಎತ್ತಿಹಿಡಿದಿರುವ ನ್ಯಾಯಾಲಯ, ನಾಮ ನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕು ಕೇಳುವ ಮೂಲಭೂತ ಹಕ್ಕಿಲ್ಲ ಎಂದು ಸಾರಿದೆ.
ನ್ಯಾಯಾಲಯ ಕರ್ನಾಟಕ ಮುನಿಸಿಪಾಲಿಟಿ ಕಾಯಿದೆ 1964 ರ ಸೆಕ್ಷನ್ 11(1)(ಬಿ) ಸಾಂವಿ'ನಿಕ ಸಿಂಧುತ್ವವನ್ನೂ ಸಹ ಎತ್ತಿಹಿಡಿದಿದೆ. ಸೆಕ್ಷನ್ 11(ಬಿ) ಅನ್ನು 243ಆರ್(2)(ಎ)ಗೆ ಅನುಗುಣವಾಗಿ ರೂಪಿಸಲಾಗಿದೆ. ಹಾಗಾಗಿ ಅದೂ ಕೂಡ ಸಂವಿಧಾನಬಾಹಿರವಾಗುವುದಿಲ್ಲ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.

"ಸ್ಥಳೀಯ ಸಂಸ್ಥೆಗಳ ಸದಸ್ಯರು ಜನಾದೇಶದಿಂದ ಚುನಾಯಿತರಾಗುತ್ತಾರೆ. ಆದರೆ ನಾಮ ನಿರ್ದೇಶಿತ ಸದಸ್ಯರನ್ನು ಕೌನ್ಸಿಲರ್ ಗಳೆಂದು ನೇಮಕ ಮಾಡಲಾಗುವುದು. ಚುನಾಯಿತ ಸದಸ್ಯರು ಮತ್ತು ನಾಮನಿರ್ದೇಶಿತ ಸದಸ್ಯರು ಒಬ್ಬರೂ ಒಂದೇ ವರ್ಗಕ್ಕೆ ಸೇರಿದರೂ ಸಹ ವ್ಯತ್ಯಾಸವಿದೆ. ಅದು ಏಕಪಕ್ಷೀಯವಲ್ಲ ಮತ್ತು ಯಾವುದೇ ಕಾರಣವಿಲ್ಲದೆ ಆ ಅಂಶವನ್ನು ಸೇರಿಸಿಲ್ಲ. ಹಾಗಾಗಿ ಸಾಂವಿಧಾನದ ಕಲಂ 14 ಉಲ್ಲಂಘನೆಯಾಗುತ್ತದೆಂದು ಹೇಳಲಾಗದು" ಎಂದು ನ್ಯಾಯಪೀಠ ಆದೇಶಿಸಿ ಮೇಲ್ಮನವಿಯನ್ನು ವಜಾಗೊಳಿಸಿದೆ.
ಸುಪ್ರೀಂಕೋರ್ಟ್ನ ಹಲವು ತೀರ್ಪುಗಳನ್ನು ಉಲ್ಲೇಖಿಸಿರುವ ನ್ಯಾಯಪೀಠ, ನಾಮ ನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕಿಲ್ಲ, ಆ ಕುರಿತಂತೆ ಸಂವಿಧಾನದ ಕಲಂ 243ಆರ್(2) ನಲ್ಲಿ ಮತ್ತು ಕರ್ನಾಟಕ ಮುನಿಸಿಪಾಲಿಟಿ ಕಾಯಿದೆ 1964ರ ಸೆಕ್ಷನ್ 11(1) ನಲ್ಲಿ ನಿರ್ಬಂಧವಿದೆ. ಹಾಗಾಗಿ ನಾಮನಿರ್ದೇಶಿತ ಸದಸ್ಯರು ಮತದಾನ ಹಕ್ಕು ಕೇಳುವ ಪ್ರಶ್ನೆಯೇ ಇಲ್ಲ ಎಂದು ನ್ಯಾಯಪೀಠ ಹೇಳಿದೆ.
ಪ್ರಕರಣವೇನು?: ಕೆ.ಲಕ್ಷ್ಮೀಕಾಂತ ಮತ್ತಿತರ ಆರು ಮಂದಿ ಮಾಲೂರು ಪುರಸಭೆಗೆ ನಾಮ ನಿರ್ದೇಶಿತ ಸದಸ್ಯರಾಗಿ ನೇಮಕಗೊಂಡಿದ್ದರು. ಅವರು ಕರ್ನಾಟಕ ಮುನಿಸಿಪಾಲಿಟಿ ಕಾಯಿದೆ ಅನ್ವಯ ತಮಗೂ ಮಾಲೂರು ಪುರಸಭೆಯ ಅಧ್ಯಕ್ಷ/ಉಪಾಧ್ಯಕ್ಷ ಆಯ್ಕೆಯಲ್ಲಿ ಮತದಾನ ಮಾಡುವ ಹಕ್ಕು ನೀಡುವಂತೆ ಅವರು ನ್ಯಾಯಾಲಯದ ಮೊರೆ ಹೋಗಿದ್ದರು.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications