ವರ್ತೂರು ಪ್ರಕಾಶ್ ಭದ್ರತೆಗೆ ಪಂಜಾಬ್ ಬೌನ್ಸರ್ಸ್ಗಳು!
ಕೋಲಾರ, ಫೆಬ್ರವರಿ 15; ಅಪಹರಣ ಪ್ರಕರಣದ ಬಳಿಕ ಮಾಜಿ ಸಚಿವ ವರ್ತೂರು ಪ್ರಕಾಶ್ ತಮ್ಮ ಭದ್ರತೆಯನ್ನು ಹೆಚ್ಚಿಸಿಕೊಂಡಿದ್ದಾರೆ. ಪ್ರಕರಣದ ಬಳಿಕ ಇಬ್ಬರು ಪೊಲೀಸ್ ಗನ್ ಮ್ಯಾನ್ಗಳನ್ನು ನೀಡಲಾಗಿತ್ತು. ಆದರೆ, ಈಗ ಬೌನ್ಸರ್ಸ್ಗಳು ಸಹ ಭದ್ರತೆಗೆ ನಿಯೋಜನೆಗೊಂಡಿದ್ದಾರೆ.
ಸೋಮವಾರ ವರ್ತೂರು ಪ್ರಕಾಶ್ ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು. ವರ್ತೂರು ಪ್ರಕಾಶ್ ಬೌನ್ಸರ್ಗಳ ಜೊತೆ ಆಗಮಿಸಿದ್ದನ್ನು ನೋಡಿ ಕ್ಷಣಕಾಲ ಎಲ್ಲರೂ ಅಚ್ಚರಿಗೊಂಡರು. ಬೌನ್ಸರ್ಸ್ಗಳ ಓಡಾಟಕ್ಕೇಂದೇ ಪ್ರತ್ಯೇಕ ಕಾರನ್ನು ಇಡಲಾಗಿದೆ.
ಭದ್ರತೆಗಾಗಿ ವರ್ತೂರು ಪ್ರಕಾಶ್ ಪಂಜಾಬ್ನಿಂದ ಬೌನ್ಸರ್ಸ್ಗಳನ್ನು ಕರೆಸಿಕೊಂಡಿದ್ದಾರೆ. ವರ್ತೂರು ಪ್ರಕಾಶ್ ಮಾತನಾಡಿಸಲು ಬರುವವರನ್ನು ಬೌನ್ಸರ್ಸ್ಗಳು ಪರಿಶೀಲನೆ ಮಾಡಿ ಬಿಡುತ್ತಿರುವುದು ನೋಡಿ ಕಾರ್ಯಕರ್ತರು ಅಚ್ಚರಿಗೊಂಡರು.

ಮಾಜಿ ಸಚಿವ ವರ್ತೂರು ಪ್ರಕಾಶ್ ಅವರನ್ನು 2020ರ ನವೆಂಬರ್ 26ರಂದು ಕೋಲಾರದ ಬೆಗ್ಲಿಹೊಸಹಳ್ಳಿ ತೋಟದ ಮನೆಯ ಬಳಿಯಿಂದ ಅಪಹರಣ ಮಾಡಲಾಗಿತ್ತು. ಡಿಸೆಂಬರ್ 3ರಂದು ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿತ್ತು.
ಕೋಲಾರದ ತಮ್ಮ ಫಾರ್ಮ್ ಹೌಸ್ನಿಂದ ಮದುವೆ ಕಾರ್ಯಕ್ರಮಕ್ಕೆ ಹೋಗಲು ವರ್ತೂರು ಪ್ರಕಾಶ್ ಹೊರಟಿದ್ದರು. ಈ ವೇಳೆ ಎರಡು ಕಾರುಗಳಲ್ಲಿ ಹಿಂಬಾಲಿಸಿ ವರ್ತೂರು ಪ್ರಕಾಶ್ ಮತ್ತು ಅವರ ಚಾಲಕನನ್ನು ಅಪಹರಣ ಮಾಡಲಾಗಿತ್ತು.
ವರ್ತೂರು ಪ್ರಕಾಶ್ ಮತ್ತು ಅವರ ಕಾರು ಚಾಲಕನ ಮೇಲೆ ಹಲ್ಲೆ ಮಾಡಿ ಹಣವನ್ನು ಪಡೆದುಕೊಂಡಿದ್ದರು. ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಈ ಕುರಿತು ತನಿಖೆ ನಡೆಸುತ್ತಿದ್ದು, 6 ಆರೋಪಿಗಳನ್ನು ಬಂಧಿಸಿದ್ದಾರೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications