ಕೋಲಾರ; ಅವಳಿ ಮಕ್ಕಳಲ್ಲಿ ಒಂದನ್ನು ಆಸ್ಪತ್ರೆಯಲ್ಲೇ ಬಿಟ್ಟುಹೋದ ಅಪ್ಪಅಮ್ಮ
ಕೋಲಾರ, ಜನವರಿ 28: ತಮ್ಮ ಮಕ್ಕಳ ಬದುಕು ಬಂಗಾರವಾಗಬೇಕು ಎಂಬುದು ಎಲ್ಲಾ ಅಪ್ಪ ಅಮ್ಮಂದಿರ ಆಸೆ. ಅದಕ್ಕಾಗಿ ಅವರು ಏನು ಮಾಡಲೂ ಸಿದ್ಧ. ಹುಟ್ಟಿದಂದಿನಿಂದ ಅವರು ಬೆಳೆದು ದೊಡ್ಡವರಾಗುವವರೆಗೂ ಸಾವಿರಾರು ಕನಸುಗಳನ್ನು ಕಟ್ಟಿಕೊಂಡಿರುತ್ತಾರೆ. ಮಕ್ಕಳು ಹೇಗೇ ಇರಲಿ, ಅವರು ಚೆನ್ನಾಗಿ ಬಾಳಬೇಕು ಎಂದು ಅವರಿಗೆ ಬೇಕಾದದ್ದೆಲ್ಲವನ್ನೂ ಕೊಟ್ಟು ಬೆಳೆಸುತ್ತಾರೆ. ಆದರೆ ಈ ಕಂದ ಮಾತ್ರ ಹುಟ್ಟುವಾಗಲೇ ಒಂಟಿಯಾಗಿದೆ.
ಕೋಲಾರದಲ್ಲಿ, ಅವಳಿ ಮಕ್ಕಳಿಗೆ ಜನ್ಮ ನೀಡಿ, ಒಂದನ್ನು ತೆಗೆದುಕೊಂಡು, ಮತ್ತೊಂದು ಪುಟ್ಟ ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟುಹೋಗಿದ್ದಾರೆ ತಂದೆ ತಾಯಿ. ಒಂಟಿಯಾಗಿ ಅಳುತ್ತಿರುವ ಈ ಕಂದನನ್ನು ನೋಡಿದರೆ ಎಂಥವರ ಕರುಳೂ ಹಿಂಡಿದಂತಾಗುತ್ತದೆ.

ಆರೋಗ್ಯದಲ್ಲಿ ಸಮಸ್ಯೆಯಿತ್ತೆಂದು ಹೀಗೆ ಮಾಡುವುದೇ?
ಅವಳಿ ಮಕ್ಕಳಿಗೆ ಜನ್ಮ ಕೊಟ್ಟ ಪೋಷಕರು, ಆರೋಗ್ಯವಂತವಾಗಿರುವ ಒಂದು ಮಗುವನ್ನು ತಮ್ಮ ಬಳಿ ಇಟ್ಟುಕೊಂಡು, ಆರೋಗ್ಯದಲ್ಲಿ ಸಮಸ್ಯೆಯಿದ್ದ ಮತ್ತೊಂದು ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಹೋಗಿರುವ ಅಮಾನವೀಯ ಘಟನೆ ಕೋಲಾರದಲ್ಲಿ ನಡೆದಿದೆ. ಈ ಸಂಗತಿ ತಡವಾಗಿ ಬೆಳಕಿಗೆ ಬಂದಿದೆ. ಕೋಲಾರದ ಎಸ್ ಎನ್ ಆರ್ ಸರ್ಕಾರಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ.

ಒಂದು ಮಗುವಿನಲ್ಲಿ ಬೆನ್ನುಹುರಿ ಸಮಸ್ಯೆ
ಕೋಲಾರ ಜಿಲ್ಲೆಯ ಮಾಲೂರು ಮೂಲದವರು ಈ ಮಗುವಿನ ತಂದೆ ತಾಯಿ. ತಾಯಿ ಹೆರಿಗೆಗೆ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ಅವಳಿ ಗಂಡುಮಕ್ಕಳು ಜನಿಸಿದ್ದವು.
ಹುಟ್ಟಿದ ಇಬ್ಬರು ಗಂಡು ಮಕ್ಕಳಲ್ಲಿ ಒಂದು ಮಗು ಆರೋಗ್ಯವಾಗಿದೆ. ಮತ್ತೊಂದು ಮಗುವಿಗೆ ಬೆನ್ನು ಹುರಿ ಸಮಸ್ಯೆಯಿದ್ದುದಾಗಿ ತಿಳಿದುಬಂದಿತ್ತು. ಇದರಿಂದ ಬೇಸರಗೊಂಡ ಮಗುವಿನ ಪೋಷಕರು ಜನವರಿ 4ರಂದು ಒಂದು ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಮತ್ತೊಂದು ಮಗುವನ್ನು ಮಾತ್ರ ಕೊಂಡೊಯ್ದಿದ್ದಾರೆ.
ಓದಿದವರೇ ಹೀಗೆ ನಡೆದುಕೊಂಡರೆ...
ಮಗುವಿನ ತಾಯಿ ಬಿಎ ಪದವೀಧರೆ. ತಂದೆ ಪಿಯುಸಿ ಓದಿ ಕೃಷಿ ಮಾಡುತ್ತಿದ್ದಾರೆ. ವಿದ್ಯಾವಂತರೇ ಈ ರೀತಿ ಅಮಾನವೀಯವಾಗಿ ನಡೆದುಕೊಂಡಿರುವುದಕ್ಕೆ ಆಸ್ಪತ್ರೆ ಸಿಬ್ಬಂದಿ ಬೇಸರ ವ್ಯಕ್ತಪಡಿಸಿದ್ದಾರೆ. ಇತ್ತ ಪೋಷಕರ ಕಠಿಣ ಮನಸ್ಸಿನಿಂದ ಮಗು ಅನಾಥವಾಗಿದೆ. ಆ ಮಗುವನ್ನು ವಾಪಸ್ಸು ಕೊಂಡೊಯ್ಯಲು ಪೋಷಕರು ನಿರಾಕರಿಸಿದ್ದಾರೆ.

ಮಕ್ಕಳ ಕಲ್ಯಾಣ ಸಮಿತಿ ಸುಪರ್ದಿಯಲ್ಲಿ ಮಗು
ಮಗುವನ್ನು ಬಿಟ್ಟು ತಂದೆ ತಾಯಿ ಹೋದಾಗಿನಿಂದ, ಅಂದರೆ ಸುಮಾರು ಇಪ್ಪತ್ತು ದಿನಗಳಿಂದ ಈ ಮಗು ಮಕ್ಕಳ ಕಲ್ಯಾಣ ಸಮಿತಿ ಸುಪರ್ದಿಯಲ್ಲಿದೆ. ಮಗುವನ್ನು ವಾಪಸ್ ಕೊಂಡೊಯ್ಯಲು ಪೋಷಕರಿಗೆ 60 ದಿನಗಳ ಗಡುವು ನೀಡಲಾಗಿದೆ. ಅವರು ಕೊನೆಗೂ ಒಪ್ಪದಿದ್ದರೆ ಬೆಂಗಳೂರಿನ ಶಿಶು ಮಂದಿರದಲ್ಲಿ ಆರು ವರ್ಷದವರೆಗೂ ಪಾಲನೆ ಮಾಡಲು ಮಕ್ಕಳ ಕಲ್ಯಾಣ ಸಮಿತಿ ನಿರ್ಧರಿಸಿದೆ. ಮುಂದೆ ಆ ತಂದೆ ತಾಯಿ ಮನಸ್ಸು ಕರಗಿ ಮಗುವನ್ನು ಕರೆದುಕೊಂಡು ಹೋಗಬಹುದು ಎಂಬ ನಿರೀಕ್ಷೆಯಲ್ಲಿದ್ದಾರೆ ಸಮಿತಿ ಸಿಬ್ಬಂದಿ.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications