ಪ್ರಧಾನಿ ಮೋದಿ ಜನ್ಮದಿನ ಹಿನ್ನೆಲೆ ಮಾಲೂರಿನಲ್ಲಿ 17 ದಿನಗಳ ಕಾಲ ರಕ್ತದಾನ ಶಿಬಿರ
ಬೆಂಗಳೂರು, ಸೆಪ್ಟೆಂಬರ್ 18: ಪ್ರಧಾನಿ ನರೇಂದ್ರ ಮೋದಿವಯವರ ಜನ್ಮದಿನದ ಅಂಗವಾಗಿ ಕೋಲಾರ ಜಿಲ್ಲೆ ಮಾಲೂರಿನಲ್ಲಿ ಬಿಜೆಪಿ ಮುಖಂಡರು ಹಾಗೂ ಸಂಜೀವಿನಿ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷ ಹೂಡಿ ವಿಜಯಕುಮಾರ್ ನೇತೃತ್ವದಲ್ಲಿ ಆಯೋಜಿಸಿದ್ದ ಬೃಹತ್ ರಕ್ತದಾನ ಶಿಬಿರದಲ್ಲಿ ಹೊಸದೊಂದು ದಾಖಲೆಯನ್ನು ಬರೆಯಲಾಗಿದೆ. ರಾಜ್ಯದಲ್ಲಿ ನಡೆದ ಎಲ್ಲಾ ಕಾರ್ಯಕ್ರಮಗಳಿಗಿಂತಲೂ ಅತಿ ಹೆಚ್ಚು 1039 ಯುನಿಟ್ ರಕ್ತವನ್ನು ಸಂಗ್ರಹಿಸಿದ ಹೆಗ್ಗಳಿಕೆ ಈ ಕಾರ್ಯಕ್ರಮದ್ದಾಗಿದೆ.
ಬೆಂಗಳೂರಿನ ರಾಷ್ಟ್ರೋತ್ಥಾನ ರಕ್ತ ನಿಧಿಯ ಮೂಲಕ ಏರ್ಪಡಿಸಿದ್ದ ರಕ್ತದಾನ ಶಿಬಿರದಲ್ಲಿ ಒಂದು ಸಾವಿರ ಯೂನಿಟ್ ರಕ್ತವನ್ನು ಸಂಗ್ರಹಿಸಿ ದೇಶದಲ್ಲಿನ ರಕ್ತಹೀನ ರೋಗಿಗಳ ಪಾಲಿನ ಸಂಜೀವಿನಿ ಆಗುವ ನಿಟ್ಟಿನಲ್ಲಿ ತಾಲ್ಲೂಕು ಬಿಜೆಪಿ ಹಾಗೂ ಸಂಜೀವಿನಿ ಚಾರಿಟೇಬಲ್ ಟ್ರಸ್ಟ್ ನಿಗದಿಪಡಿಸಿದ್ದ ಗುರಿಯನ್ನು ಸಾಧಿಸಿದ್ದೇವೆ. 17 ದಿನಗಳ ಕಾಲ ಸತತ ಸೇವಾ ಕಾರ್ಯಗಳ ಆಯೋಜನೆ ಮಾಡಲಾಗಿದೆ ಎಂದು ಸಂಜೀವಿನಿ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷ ಹೂಡಿ ವಿಜಯಕುಮಾರ್ ತಿಳಿಸಿದರು.

ಮಾಲೂರು ತಾಲ್ಲೂಕಿನ ಎಲ್ಲಾ ಭಾಗಗಳಿಂದ ಆಗಮಿಸಿದ್ದ ಯುವ ಸಮೂಹ ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಿದ ಕಾರಣ ನಿಗದಿತ ಗುರಿಯನ್ನು ಸಾಧಿಸಿದ್ದೇವೆ. ಯಾವುದೇ ಪ್ರತಿಫಲಾಕ್ಷೆ ಇಲ್ಲದೆ 18 ಗಂಟೆಗಳ ಕಾಲ ದೇಶ ಸೇವೆ ಸಲ್ಲಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ದಿನದಂದು ದೇಶಧ ಯುವ ಸಮೂಹ ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡುವ ಮೂಲಕ ಪ್ರಧಾನಿ ಮೋದಿಯವರಿಗೆ ಮತ್ತಷ್ಟು ಹುರುಪು ತುಂಬುವ ಕೆಲಸ ಮಾಡಿದ್ದಾರೆ ಎಂದು ಸಂಜೀವಿನಿ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷ ಹೂಡಿ ವಿಜಯಕುಮಾರ್ ಹೇಳಿದರು.
Recommended Video
ನಿನ್ನೆ ಬೃಹತ್ ರಕ್ತದಾನ ಶಿಬಿರವನ್ನು ನಡೆಸಲಾಗಿದ್ದು, ಮುಂದಿನ ದಿನಗಳಲ್ಲಿ ಉಚಿತವಾಗಿ ಹೆಲ್ಮೆಟ್ ವಿತರಣೆ ಹೀಗೆ ಹತ್ತು ಹಲವು ಸಮಾಜ ಸೇವೆಯ ಕಾರ್ಯಗಳನ್ನು ಹಮ್ಮಿಕೊಂಡು ಬರುತ್ತಿದ್ದೇವೆ ಎಂದು ಹೇಳಿದರು. ರಕ್ತದಾನ ಶಿಬಿರದಲ್ಲಿ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದ ಯುವಕರಿಗೆ ಇದೇ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications