ಪೆಟ್ರೋಲ್ ಬಾಟಲಿ ಹಿಡಿದು ಸಮವಸ್ತ್ರದಲ್ಲೇ ಪೋಲೀಸಪ್ಪನ ಧರಣಿ
ಕೋಲಾರ, ಅಕ್ಟೋಬರ್ 2: ಜಮೀನು ವಿವಾದ ಬಗೆಹರಿಸದೆ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಎಎಸ್ಐ ಒಬ್ಬರು ಸಮವಸ್ತ್ರದಲ್ಲಿಯೇ ಕೋಲಾರ ಉಪವಿಭಾಗಾಧಿಕಾರಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ ನಡೆಸಿದ್ದಾರೆ.
ಚಿಕ್ಕಬಳ್ಳಾಪುರದ ಡಿಎಎಆರ್ನಲ್ಲಿ ಕೆಲಸ ಮಾಡುತ್ತಿರುವ ಎಎಸ್ಐ ವೆಂಕಟರೆಡ್ಡಿ, ಪೆಟ್ರೋಲ್ ತುಂಬಿದ ಬಾಟಲಿಯನ್ನು ಜತೆಯಲ್ಲಿ ಇರಿಸಿಕೊಂಡು ಪ್ರತಿಭಟನೆ ನಡೆಸಿದ್ದು, ನ್ಯಾಯ ಸಿಗದೆ ಇದ್ದರೆ ಅತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಒಡ್ಡಿದ್ದಾರೆ.
ಕೋಲಾರದಲ್ಲಿ ಆರಿಕುಂಟೆ ಗ್ರಾಮದಲ್ಲಿರುವ ಸರ್ವೆ ನಂಬರ್ 22ರಲ್ಲಿ ಇರುವ 4 ಎಕರೆ ಜಮೀನು ಪಿತ್ರಾರ್ಜಿತವಾಗಿದೆ. ಆದರೆ, ತಮ್ಮ ನೆರೆಯವರು ನಕಲಿ ದಾಖಲೆ ಸೃಷ್ಟಿಸಿ ಅದನ್ನು ತಮ್ಮ ಹೆಸರಿಗೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ವಿವಾದ ನ್ಯಾಯಾಲಯದ ಮೆಟ್ಟಿಲೇರಿ ಅಲ್ಲಿಯೂ ಬಗೆಹರಿದಿದೆ.

ಆದರೆ, ಸರ್ಕಾರಿ ಇಲಾಖೆಯ ಅಧಿಕಾರಿಗಳು ಇದರೊಂದಿಗೆ ಶಾಮೀಲಾಗಿದ್ದು, ಮೂಲ ದಾಖಲೆ ನೀಡದೆ ಸತಾಯಿಸುತ್ತಿದ್ದಾರೆ. ಸ್ವತಃ ತಮ್ಮ ಇಲಾಖೆಯವರೇ ತಮಗೆ ಕಿರುಕುಳ ನೀಡುತ್ತಿದ್ದಾರೆ ಎಂದು ವೆಂಕಟರೆಡ್ಡಿ ಆರೋಪಿಸಿದ್ದಾರೆ.
'ಜಮೀನಿನಲ್ಲಿ ನನ್ನ ಮೇಲೆ ಹಲ್ಲೆ ನಡೆಸಿ ತಲೆಗೆ ಗಾಯವಾಗಿತ್ತು. ಈ ಬಗ್ಗೆ ಎಸ್ಪಿ ದಿವ್ಯಾ ಗೋಪಿನಾಥ್ ಮೇಡಂ ಅವರಿಗೆ ದೂರಿತ್ತರೂ ಅವರು ಕೂಡ ನನ್ನ ವಿರುದ್ಧವೇ ರೇಗಾಡಿದ್ದರು. ಎಲ್ಲಾ ಮಾಹಿತಿ ಇದ್ದೂ ಹೀಗೆ ಮಾಡುತ್ತಿದ್ದಾರೆ.
ಚುನಾವಣೆ ಬಳಿಕ ಜಮೀನಿಗೆ ಬಂದು ಪರಿಶೀಲನೆ ಮಾಡುವುದಾಗಿ ಉಪವಿಭಾಗಾಧಿಕಾರಿ ಹೇಳಿದ್ದರು. ಈಗ ನಾನೇಕೆ ಬರಬೇಕು ಎಂದು ಕೇಳುತ್ತಾರೆ. ಇದು ತಾತನ ಕಾಲದಿಂದ ಇರುವ ಆಸ್ತಿ. ನ್ಯಾಯ ದೊರಕಿಸಿಕೊಡಿ ಎಂದು ಕೇಳಿದರೆ ನನಗೆ ಬೆದರಿಕೆ ಹಾಕುತ್ತಾರೆ. ಸಸ್ಪೆಂಡ್ ಕೂಡ ಮಾಡುತ್ತಾರೆ' ಎಂದು ಅವರು ಸುದ್ದಿ ವಾಹಿನಿಯೊಂದಕ್ಕೆ ನೀಡಿದ ಹೇಳಿಕೆಯಲ್ಲಿ ತಿಳಿಸಿದರು.

ನಕಲಿ ದಾಖಲೆ ಸೃಷ್ಟಿಸಿ ಜಮೀನು ಕಬಳಿಕೆ ಮಾಡಿರುವವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ದೂರು ನೀಡಿದರೆ ಪ್ರಯೋಜನವಾಗಿಲ್ಲ. ಇದರಲ್ಲಿ ರಾಜಕೀಯ ದುರುದ್ದೇಶ ಇದೆ ಎಂದು ಆರೋಪಿಸಿದರು.
-
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ












Click it and Unblock the Notifications