ಕೋಲಾರದಲ್ಲಿ ಹೂತಿಟ್ಟ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ

ಕೋಲಾರ, ಜೂನ್ 5: ಮರಳಿನ ದಿಬ್ಬ ಕುಸಿದು ವ್ಯಕ್ತಿ ಮೃತಪಟ್ಟ ಘಟನೆಯನ್ನು ಮುಚ್ಚಿಹಾಕುವ ಯತ್ನ ಹಿನ್ನೆಲೆಯಲ್ಲಿ ಹೂತ್ತಿಟ್ಟ ಶವವನ್ನು ಅಧಿಕಾರಿಗಳು ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.

Recommended Video

      ಪ್ರತಿನಿತ್ಯ ಸೈಕಲ್ ತುಳಿಯೋದ್ರಿಂದ ಪರಿಸರ ಹಾಗೂ ಆರೋಗ್ಯಕ್ಕೂ ಪ್ರಯೋಜನ | Oneindia Kannada

      ಕೋಲಾರ ಜಿಲ್ಲೆಯ ಮುಳಬಾಗಿಲು ನಗರದ ಬೂಸಾಲಕುಂಟೆಯಲ್ಲಿ ಘಟನೆ ನಡೆದಿದ್ದು, ಮುಳಬಾಗಿಲು ತಹಶೀಲ್ದಾರ್ ರಾಜಶೇಖರ್ ನೇತೃತ್ವದಲ್ಲಿ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ ಮಾಡಲಾಗಿದೆ.

      ಜೂನ್ 3 ರಂದು ಮುಳಬಾಗಿಲು ತಾಲ್ಲೂಕಿನ ತಾತಿಕಲ್ಲು ಗ್ರಾಮದ ಹೊರವಲಯದಲ್ಲಿ ಮರುಳ ದಿಬ್ಬ ಕುಸಿದು ಅಯೂಬ್(25) ಮೃತಪಟ್ಟು, ಇನ್ನಿಬ್ಬರು ಗಾಯಗೊಂಡಿದ್ದರು.

      Post-Mortem Examination Of The Buried Corpse In Kolar

      ದೇವರಾಜ್ ಎಂಬುವರಿಗೆ ಸೇರಿದ ಜಮೀನಿನಲ್ಲಿ ಅಕ್ರಮವಾಗಿ ಮರಳು ತೆಗೆಯುತ್ತಿದ್ದ ವೇಳೆ ಘಟನೆ ನಡೆದಿದ್ದು, ಪೊಲೀಸರಿಗೆ ವಿಷಯ ತಿಳಿಸದೇ ಘಟನೆ ಮರೆಮಾಚಲು ಅಕ್ರಮ ಮರಳು ದಂಧೆಕೋರರು ಯತ್ನಿಸಿದ್ದಾರೆ.

      ಯಾರಿಗೂ ಗೊತ್ತಾಗದಂತೆ ತರಾತುರಿಯಲ್ಲಿ ಶವವನ್ನು ಬೂಸಾಲಕುಂಟೆಗೆ ಸಾಗಿಸಿದ ದಂಧೆಕೋರರು, ಮೃತನ ಕುಟುಂಬಸ್ಥರಿಗೆ ಹಣದ ಆಮಿಷ ತೋರಿಸಿ ಮೇ 3 ರಂದೇ ಶವಸಂಸ್ಕಾರ ಮಾಡಿದ್ದಾರೆ.

      ಘಟನೆ ಬೆಳಕಿಗೆ ಬರುತ್ತಿದ್ದಂತೆ ಎಚ್ಚೆತ್ತ ಪೊಲೀಸರು, ಜಿಲ್ಲಾ ಎಸ್ಪಿ ಕಾರ್ತಿಕ ರೆಡ್ಡಿ ಆದೇಶದ ಮೇರೆಗೆ ಇಂದು ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸುತ್ತಿದ್ದಾರೆ. ಕಳೆದು ತಿಂಗಳಷ್ಟೇ ಮುಳುಬಾಗಿಲು ತಾಲೂಕಿನ ಕುರುವೆನ್ನೂರು ಗ್ರಾಮದಲ್ಲಿ ಅಕ್ರಮ ಮರಳು ತೆಗೆಯಲು ಹೋಗಿ ದಿಬ್ಬ ಕುಸಿದು ಯುವಕನ್ನೊಬ್ಬ ಮೃತಪಟ್ಟಿದ್ದನು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+