'ಮೊದಲು ರೋಗಿಗಳಿಗೆ ಟ್ರೀಟ್ ಮೆಂಟ್ ನಂತರವೇ ಪೇಮೆಂಟ್'
ಕೋಲಾರ, ಮೇ 22 : ಆರೋಗ್ಯ ಇಲಾಖೆಯ ಸುಧಾರಣೆ ಹಾಗೂ ಸೇವಾ ವ್ಯವಸ್ಥೆಯನ್ನು ಉನ್ನತೀಕರಿಸಲು ರಾಜ್ಯ ಸರ್ಕಾರ ಹಲವು ಉಪಕ್ರಮಗಳನ್ನು ಕೈಗೊಂಡಿದೆ.
ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳ ಚಿಕಿತ್ಸಾ ಸೇವೆಗಳು ಸಾಮಾನ್ಯರಿಗೂ ದಕ್ಕುವಂತೆ ಯೋಜನೆಗಳನ್ನು ರೂಪಿಸಿದೆ. ಗ್ರಾಮೀಣ ಪ್ರದೇಶದ ಜನರಿಗೂ ಆರೋಗ್ಯ ಸೇವೆಗಳು ಕೈಗೆಟಕುವ ದರದಲ್ಲಿ ಸಿಗುವಂತೆ ಹೊಸ ಕಾಯ್ದೆಯೊಂದನ್ನು ಜಾರಿಗೆ ತರಲು ನಿರ್ಧರಿಸಿದೆ.

ಖಾಸಗಿ ಆಸ್ಪತ್ರೆಗಳು "ಟ್ರೀಟ್ ಮೆಂಟ್ ಫಸ್ಟ್, ಪೇಮೆಂಟ್ ನೆಕ್ಸ್ಟ್" ಎಂಬ ತತ್ವದಡಿ ಕಾರ್ಯನಿರ್ವಹಿಸಬೇಕೆಂದು, ಖಾಸಗಿ ಆಸ್ಪತ್ರೆಗಳ ನಿರ್ವಹಣೆ ಕಾಯ್ದೆಯನ್ನು ತಿದ್ದುಪಡಿಗೆ ಒಳಪಡಿಸಲು ಸರ್ಕಾರ ನಿರ್ಧರಿಸಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಆರ್.ರಮೇಶ್ ಕುಮಾರ್ ಅವರು ತಿಳಿಸಿದರು.
ಸಮಿತಿ ರಚನೆ: ಕಾಯ್ದೆಗೆ ತಿದ್ದುಪಡಿ ತಂದು ಜೂನ್ ನಲ್ಲಿ ನಡೆಯಲಿರುವ ವಿಧಾನಸಭಾ ಅಧಿವೇಶನದಲ್ಲಿ ಮಂಡಿಸಲಾಗುವುದು. ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗುವುದು.
ಕಾಯ್ದೆ ಜಾರಿಯ ನಂತರ ಯಾವ ಚಿಕಿತ್ಸೆಗೆ ಎಷ್ಟು ಹಣ ಎಂಬ ಕುರಿತು ಆಸ್ಪತ್ರೆಗಳ ಮುಂದೆ ಪ್ರಕಟಿಸಬೇಕಾಗಿರುತ್ತದೆ. ಚಿಕಿತ್ಸೆ ನೀಡದೆ ಮೊದಲೇ ಹಣ ಕೇಳುವ ಖಾಸಗಿ ಆಸ್ಪತ್ರೆಗಳ ಲೈಸೆನ್ಸ್ ಅನ್ನು ರದ್ದುಗೊಳಿಸಲಾಗುವುದು ಎಂದರು.
ನಕಲಿ ವೈದ್ಯರ ತಡೆಗೆ ಕಮಿಟಿಯನ್ನು ರಚಿಸಲಾಗಿದೆ. ಸರ್ಕಾರವು ಕಮಿಟಿಯ ಮೂಲಕ ರಾಜ್ಯದಲ್ಲಿನ ನಕಲಿ ವೈದ್ಯರ ನಿರ್ಮೂಲನೆ ಮಾಡಲಾಗುವುದು. ಅದರಂತೆ ಹಿಂದೆಯಿಂದ ಆಯುರ್ವೇದದ ಮೂಲಕ ಚಿಕಿತ್ಸೆ ನೀಡಿಕೊಂಡು ಬಂದವರು ಮುಂದುವರೆಯಬಹುದಾಗಿದೆ ಎಂದು ಹೇಳಿದರು.
-
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
8 ವರ್ಷ ಕೆಲಸ ಮಾಡಿದರೂ ಕ್ಷಣಾರ್ಧದಲ್ಲಿ ವಜಾ: ವೈರಲ್ ಪೋಸ್ಟ್ ನೋಡಿ ನೆಟ್ಟಿಗರು ಶಾಕ್ -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ












Click it and Unblock the Notifications