ಬಿಎಸ್ಎನ್ಎಲ್ ನೆಟ್ ವರ್ಕ್ ಸಮಸ್ಯೆ; ರೈತರಿಂದ ಪ್ರತಿಭಟನೆ
ಕೋಲಾರ, ಜನವರಿ 29: ಕೋಲಾರ ಜಿಲ್ಲೆಯಾದ್ಯಂತ ಬಿಎಸ್ಎನ್ಎಲ್ ಮೊಬೈಲ್ ನೆಟ್ ವರ್ಕ್ ಹಾಗೂ ಬ್ರಾಡ್ ಬ್ಯಾಂಡ್ಗಳು ಸರಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿಲ್ಲ. ಜಿಲ್ಲಾ ರೈತ ಸಂಘದವರು ಈ ಕುರಿತು ಪ್ರತಿಭಟನೆ ನಡೆಸಿದರು.
ಶುಕ್ರವಾರ ಕೋಲಾರದ ಬಿಎಸ್ಎನ್ಎಲ್ ಕಚೇರಿಯ ಮುಂಭಾಗ ಜಿಲ್ಲಾ ರೈತ ಸಂಘದಿಂದ ಪ್ರತಿಭಟನೆ ನಡೆಸಲಾಯಿತು. ಜಿಲ್ಲೆಯಲ್ಲಿ ಬಿಎಸ್ಎನ್ಎನ್ ನೆಟ್ ವರ್ಕ್ ಗ್ರಾಹಕರು ಒಂದಿಲ್ಲೊಂದು ರೀತಿ ಸಮಸ್ಯೆ ಅನುಭವಿಸುತ್ತಿದ್ದಾರೆ ಎಂದು ರೈತರು ಆರೋಪಿಸಿದರು.
ಪಕ್ಕದಲ್ಲೇ ಇದ್ದು ಕರೆ ಮಾಡಿದರೆ ನಾಟ್ ರೀಚಬಲ್ ಅಥವಾ ಸ್ವಿಚ್ ಆಫ್ ಅಂತ ಬರುತ್ತಿದೆ. ಕರೆಸ್ಸಿ ಹಾಕಿಸಿಕೊಂಡಿದ್ದು ಸರಿಯಾಗಿ ಉಪಯೋಗಕ್ಕೆ ಬರುತ್ತಿಲ್ಲ. ಹೀಗಾಗಿ ಅಧಿಕಾರಿಗಳು ಕೂಡಲೇ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಲಾಯಿತು.

ರೈತರು ಕೇಂದ್ರ ಸರ್ಕಾರ ಹಾಗೂ ಬಿಎಸ್ಎನ್ಎಲ್ ಅಧಿಕಾರಿಗಳ ವಿರುದ್ಧ ಅಸಮಾಧಾನವನ್ನು ವ್ಯಕ್ತಪಡಿಸಿದರು. ಪ್ರತಿಕೃತಿ ದಹಿಸುವ ಮೂಲಕ ಆಕ್ರೋಶವನ್ನು ಹೊರ ಹಾಕಿದರು. ಇದೇ ವೇಳೆ ಅಧಿಕಾರಿಯೊಬ್ಬರು ರೈತ ಸಂಘದ ಸದಸ್ಯರನ್ನು ಏಕವಚನದಲ್ಲಿ ಮಾತಾಡಿಸಿದ್ದು, ಆಕ್ರೋಶಕ್ಕೆ ಕಾರಣವಾಯಿತು.
ಪ್ರತಿಭಟನಾನಿರತ ರೈತರು, "ಏಯ್ ಹುಷಾರು ನಾವು ಇಲ್ಲೇ ಬಟ್ಟೆ ಬಿಚ್ಚಿ ಕುಳಿತು ಪ್ರತಿಭಟನೆ ಮಾಡಬೇಕಾಗುತ್ತದೆ. ಕೂಡಲೇ ಕ್ಷಮೆ ಕೇಳು ಎಂದು ಕೂಗಾಡಿದರು".
ಪ್ರತಿಭಟನಾನಿರತ ರೈತರು ಮತ್ತು ಅಧಿಕಾರಿಗಳ ನಡುವೆ ಮಾತಿಗೆ ಮಾತು ಬೆಳೆದು ಗಲಾಟೆ ನಡೆಯಿತು. ಪರಿಸ್ಥಿತಿ ವಿಕೋಪಕ್ಕೆ ತಿರುಗುವ ಮುನ್ನ ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದರು.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications