Kempegowda Jayanti: ಕೋಲಾರದಲ್ಲಿ ಕೋಲಾಹಲ: ಮಸೀದಿ ಎದುರು ಗಲಾಟೆ!
ಕೋಲಾರ ಜೂನ್ 27: ಕೋಲಾರದಲ್ಲಿಂದು ನಾಡಪ್ರಭು ಕೆಂಪೇಗೌಡರ 515ನೇ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಈ ವೇಳೆ ಮಸೀದಿ ಎದುರು ಗಲಾಟೆ ನಡೆದಿದೆ.
ವಿವಿಧ ವಾದ್ಯಗಳೊಂದಿಗೆ ಕೇಂಪೇಗೌಡರ ಪಲ್ಲಕ್ಕಿಯನ್ನು ಕೋಲಾರ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡಲಾಗುತ್ತಿತ್ತು. ಮೆರವಣಿಗೆ ಮಸೀದಿ ಬಳಿ ಬರುತ್ತಿದ್ದಂತೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ.

ಹೌದು... ಕೋಲಾರದ ಅರಹಳ್ಳಿ ಗೇಟಿ ಬಳಿ ಈ ಘಟನೆ ನಡೆದಿದೆ. ಮಸೀದಿ ಬಳಿ ಡಿಜೆ ಸೌಂಡ್ ಹಾಕಿದ್ದಕ್ಕೆ ಎರಡು ಗುಂಪುಗಳ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ಜೋರಾಗಿ ಗಲಾಟೆ ನಡೆದಿದೆ. ಕೂಡಲೆ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ಶಾಂತಗೊಳಿಸಿದ್ದಾರೆ.
ಇನ್ನೂ ನಾಡಪ್ರಭು ಕೆಂಪೇಗೌಡ ಜಯಂತಿ ಮೆರವಣಿಗೆ ವೇಳೆ ಮಂಗಳಮುಖಿಯರು ಅಸಭ್ಯವಾಗಿ ನೃತ್ಯ ಮಾಡಿದ್ದಾರೆ. ತುಂಡು ಬಟ್ಟೆ ತೊಟ್ಟು ಅಶ್ಲೀಲ ನೃತ್ಯ ಮಾಡಿದ್ದಾರೆ. ಇದರಿಂದ ಮಹಿಳೆಯರು, ಮಕ್ಕಳು, ಹಿರಿಯರಿಗೆ ಮುಜುಗರವಾಗಿದೆ ಎಂಬ ಆಕ್ರೋಶ ಕೇಳಿ ಬಂದಿದೆ. ಇದಲ್ಲದೆ ಮತ್ತೊಂದೆಡೆ ಕೆಂಪೇಗೌಡ ಜಯಂತಿ ಆಚರಣೆಗೆ ಎಚ್.ಡಿ.ದೇವೇಗೌಡ ಹಾಗೂ ಎಚ್.ಡಿ.ಕುಮಾರಸ್ವಾಮಿ ಅವರನ್ನು ಆಹ್ವಾನಿಸಿಲ್ಲ ಎಂದು ಕಾರ್ಯಕರ್ತರು ಆಕ್ರೋಶಗೊಂಡ ಘಟನೆ ನಡೆದಿದೆ.
ಎಚ್ಡಿ ದೇವೇಗೌಡ, ಎಚ್ಡಿಕೆಗೆ ಆಹ್ವಾನ ನೀಡದಿದ್ದಕ್ಕೆ ಆಕ್ರೋಶ!
ಕೆಂಪೇಗೌಡರ ಜಯಂತಿಗೆ ಎಚ್.ಡಿ.ದೇವೇಗೌಡ ಹಾಗೂ ಎಚ್.ಡಿ.ಕುಮಾರಸ್ವಾಮಿ ಅವರನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಆಹ್ವಾನಿಸಿಲ್ಲ ಎಂಬ ವಿಚಾರಕ್ಕೆ ಜೆಡಿಎಸ್ ಕಾರ್ಯಕರ್ತರು ಇಂದು ಕೆಂಪೇಗೌಡ ಸ್ಥಬ್ಧಚಿತ್ರ ಮೆರವಣಿಗೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧಿಕ್ಕಾರ ಕೂಗಿದ್ದಾರೆ.

ಇದರಿಂದಾಗಿ ಶಾಸಕ ಕೆತ್ತೂರು ಮಂಜುನಾಥ್ ಹಾಗೂ ವಿಧಾನ ಪರಿಷತ್ ಸದಸ್ಯ ಎಂ.ಎಲ್. ಅನಿಲ್ ಕುಮಾರ್ ಮುಂದೆಯೇ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಜಗಳ ನಡೆಯಿತು. ಪರಸ್ಪರ ಹೊಡೆದಾಟಕ್ಕೂ ಮುಂದಾದರು. ಪೊಲೀಸರು ಮಧ್ಯ ಪ್ರವೇಶಿಸಿ ಜಗಳ ತಡೆದರು.
ಕಾರ್ಯಕ್ರಮದ ವೇದಿಕೆ ಬಳಿ ಸೇರಿದ ಜೆಡಿಎಸ್ನ ಕೆಲ ಕಾರ್ಯಕರ್ತರು ಕುಮಾರಸ್ವಾಮಿ ಹಾಗೂ ದೇವೇಗೌಡರ ಹೆಸರು ಹೇಳುವಂತೆ ಸಂಘಟಕರ ಬಳಿ ಒತ್ತಾಯಿಸಿದರು. ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಧಿಕ್ಕಾರ ಕೂಗಿದರು. ಆಗ ವೇದಿಕೆಯಿಂದ ಮೇಲೆದ್ದು ಬಂದ ಕಾಂಗ್ರೆಸ್ನ ಎಂಎಲ್ಸಿ ಅನಿಲ್ ಕುಮಾರ್, 'ನೀವಿಲ್ಲಿ ರಾಜಕೀಯ ಮಾಡಲು ಬಂದಿದ್ದರೆ ನನಗೂ ರಾಜಕೀಯ ಮಾಡಲು ಬರುತ್ತದೆ. ನೋಡ್ತೀರಾ'? ಎಂದು ಜೆಡಿಎಸ್ ಮುಖಂಡರಿಗೆ ಅವಾಜ್ ಹಾಕಿದರು.
ಆಗ ಅನಿಲ್ ಕುಮಾರ್ ಅವರತ್ತ ಕೈತೋರಿಸಿ ಜೆಡಿಎಸ್ ಮುಖಂಡರು ಜೋರಾಗಿ ಕೂಗಿದರು. ಆಗ ಕಾಂಗ್ರೆಸ್ ಯುವ ಮುಖಂಡ ಜನಪನಹಳ್ಳಿಯಲ್ಲಿ ನವೀನ್ ಕುಮಾರ್ ಹೊಡೆದಾಟಕ್ಕೆ ಮುಂದಾದರು. ಈ ವೇಳೆ ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರ ನಡುವೆ ತಳ್ಳಾಟ, ನೂಕಾಟ ನಡೆದಿದೆ.
ಕಾರ್ಯಕ್ರಮಕ್ಕೆ ಆದಿಚುಂಚನಗಿರಿ ಶಾಖಾ ಮಠದ ಚಿಕ್ಕಬಳ್ಳಾಪುರದ ಮಂಗಳಾನಂದನಾಥ್ ಸ್ವಾಮೀಜಿ ಚಾಲನೆ ನೀಡಿದರು. 'ಜಯಂತಿಯಲ್ಲಿ ಗೊಂದಲ ಮಾಡಿಕೊಂಡರೆ ಕೆಂಪೇಗೌಡರಿಗೆ ಅಗೌರವ ತೋರಿದಂತೆ. ಸಣ್ಣಪುಟ್ಟ ಸಮಸ್ಯೆಯನ್ನು ಹಿರಿಯರೊಂದಿಗೆ ಚರ್ಚಿಸಿ ಬಗೆಹರಿಸಿಕೊಳ್ಳಿ. ದೇವೇಗೌಡ ಹಾಗೂ ಕುಮಾರಣ್ಣ ಕೊಡಗೆ ಅಪಾರ' ಎಂದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications