ಕೋಲಾರದಲ್ಲಿ ಶ್ರೀರಾಮ ಸೇನೆಯಿಂದ ಅನೈತಿಕ ಪೊಲೀಸ್ ಗಿರಿ
ಕೋಲಾರ, ಫೆಬ್ರವರಿ 14: ಪ್ರೇಮಿಗಳ ದಿನವನ್ನು ವಿರೋಧಿಸುತ್ತಾ ಬಂದಿರುವ ಬಲಪಂಥೀಯ ಸಂಘಟನೆ ಶ್ರೀರಾಮ ಸೇನೆ ಇಂದು ಕೋಲಾರದಲ್ಲಿ ಪ್ರೇಮಿಗಳಿಗೆ ಬೆದರಿಕೆ ಹಾಕಿದೆ.
ಕೋಲಾರ ಅಂತರಗಂಗೆಯಲ್ಲಿ ಏಕಾಂತದಲ್ಲಿದ್ದ ಪ್ರೇಮಿಗಳ ಮೇಲೆ ಏಕಾ-ಏಕಿ ದಾಳಿ ನಡೆಸಿದ ಕೊಲಾರ ಶ್ರೀರಾಮ ಸೇನಾ ಬಳಗದ ಸದಸ್ಯರು 'ಒಟ್ಟಿಗೆ ಓಡಾಡಿದರೆ ಮದುವೆ ಮಾಡಿಸುತ್ತೇವೆ' ಎಂದು ಭಯಗೊಳಿಸಿ, ಪ್ರೇಮಿಗಳ ಪೋಷಕರ ಮೊಬೈಲ್ ಸಂಖ್ಯೆ ಪಡೆದು ಅವರಿಗೆ ಕರೆ ಮಾಡಿ ಅವರ ಮಕ್ಕಳ ಪ್ರೇಮದ ವಿಷಯ ತಿಳಿಸಿದ್ದಾರೆ.
ಕೋಲಾರದಲ್ಲಿ ಪ್ರೇಮಿಗಳ ಫೇವರೇಟ್ ಸ್ಪಾಟ್ ಆಗಿರುವ ಅಂತರಗಂಗೆಯಲ್ಲಿ ಈ ಹಿಂದೆಯೂ ಶ್ರೀರಾಮ ಸೇನೆ ಗೂಂಡಾಗಳು ಅನೈತಿಕ ಪೊಲೀಸ್ ಗಿರಿ ಮೆರೆದಿದ್ದರು. ಇಂದೂ ಸಹ ಅದು ಮುಂದುವರೆದಿದೆ.

ಅಂತರಗಂಗೆ ಕ್ಷೇತ್ರದ ಸುತ್ತಾ ಪ್ರೇಮಿಗಳಿಗಾಗಿ ಶೋಧ ನಡೆಸಿದ ಕೇಸರಿ ಬಾವುಟ, ಶಾಲು ಹೊದ್ದ 'ಧರ್ಮ ರಕ್ಷಕರು' ಸಿಕ್ಕ ಪ್ರೇಮಿಗಳನ್ನೆಲ್ಲಾ ಹೆದರಿಸಿ- ಬೆದರಿಸಿ ಮನೆಗೆ ಅಟ್ಟಿದ್ದಾರೆ.
ಶ್ರೀರಾಮ ಸೇನೆಯ ಈ ಅನೈತಿಕ ಪೊಲೀಸ್ ಗಿರಿ ಬಗ್ಗೆ ದೂರು ದಾಖಲಾಗಿರುವ ಬಗ್ಗೆ ಮಾಹಿತಿ ಇಲ್ಲ.
More From
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ












Click it and Unblock the Notifications