Breaking: ಕೋಲಾರದ ಮುಳಬಾಗಿಲಿನಲ್ಲಿ ಶ್ರೀರಾಮ ಶೋಭಾಯಾತ್ರೆ ವೇಳೆ ಕಲ್ಲುತೂರಾಟ
ಕೋಲಾರ, ಏಪ್ರಿಲ್ 8: ಶ್ರೀರಾಮ ಶೋಭಾಯಾತ್ರೆಯ ಸಂದರ್ಭದಲ್ಲಿ ದುಷ್ಕರ್ಮಿಗಳ ಗುಂಪೊಂದು ಕಲ್ಲು ತೂರಾಟ ನಡೆಸಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದಲ್ಲಿ ಶುಕ್ರವಾರ ನಡೆದಿದೆ.
ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದಲ್ಲಿ ಶ್ರೀರಾಮನವಮಿ ಅಂಗವಾಗಿ ಬೃಹತ್ ಹಿಂದೂ ಶೋಭಾಯಾತ್ರೆ ಮತ್ತು ಶ್ರೀರಾಮ ಪಟ್ಟಾಭಿಷೇಕ, ಶ್ರೀರಾಮ ಕಲ್ಯಾಣೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕೋಲಾರ; ಶವ ಸಾಗಣೆಗೆ ಅಂಬ್ಯುಲೆನ್ಸ್ ಮಾಲೀಕರ ಗಲಾಟೆ
ಹಿಂದೂ ಶೋಭಾಯಾತ್ರೆ ಹಾಗೂ ಬೃಹತ್ ಶ್ರೀರಾಮ ಮೂರ್ತಿ ಮೆರವಣಿಗೆ ಕಾರ್ಯಕ್ರಮದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಭಾಗವಹಿಸಿದ್ದರು. ಇದೇ ವೇಳೆ ಮುಳಬಾಗಿಲು ನಗರದ ಜಹಾಂಗೀರ್ ಮೊಹಲ್ಲಾ ಬಳಿ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ.
ಪರಿಸ್ಥಿತಿ ನಿಯಂತ್ರಿಸಲು ಲಾಠಿಪ್ರಹಾರ:
Recommended Video
ಶ್ರೀರಾಮ ಶೋಭಾಯಾತ್ರೆ ಸಂದರ್ಭದಲ್ಲಿ ಕಲ್ಲುತೂರಾಟವನ್ನು ಖಂಡಿಸಿ ಮತ್ತೊಂದು ಕೋಮಿನ ಜನರು ಬೈಕಿಗೆ ಬೆಂಕಿ ಹಚ್ಚುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಪೊಲೀಸರು ಅಲರ್ಟ್ ಆದರು. ಪ್ರತಿಭಟನಾಕಾರರನ್ನು ನಿಯಂತ್ರಿಸುವುದಕ್ಕೆ ಲಘು ಲಾಠಿಪ್ರಹಾರ ನಡೆಸಿದರು. ಸದ್ಯ ಕೋಲಾರ ಜಿಲ್ಲೆಯ ಮುಳಬಾಗಿಲು ಪಟ್ಟಣದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ನಗರದಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.