Kolar: ನೀರಿಗೆ ಇಲಿ ಪಾಷಾಣ ಹಾಕಿದ ವಿದ್ಯಾರ್ಥಿ: ಕಾರಣ ಕೇಳಿ ಪೊಲೀಸರು ಶಾಕ್!
ಕೋಲಾರ ನವೆಂಬರ್ 28: ಶಾಲೆ ರಜೆ ಸಲುವಾಗಿ ವಿದ್ಯಾರ್ಥಿಯೊಬ್ಬ ಮಾಡಿದ ಕೃತ್ಯದಿಂದಾಗಿ ಮೂವರು ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಬಂಗಾರಪೇಟೆ ತಾಲ್ಲೂಕು ದೊಡ್ಡಪೊನ್ನಾಂಡಹಳ್ಳಿ ಗ್ರಾಮದಲ್ಲಿ ನಡೆದಿದೆ. ಈ ಘಟನೆ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ.
ಶಾಲೆ ರಜೆ ಸಲುವಾಗಿ ಒಂಬತ್ತನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿ ನೀರಿಗೆ ಇಲಿ ಪಾಷಾಣ ಹಾಕಿದ್ದಾನೆ. ನೀರನ್ನು ಕುಡಿದ ಶಾಲೆಯ ಮೂವರು ಮಕ್ಕಳು ಅಸ್ವಸ್ಥರಾಗಿದ್ದಾರೆ. ಈ ಮಕ್ಕಳನ್ನು ಸದ್ಯ ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆ ಕಾಮಸಮುದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಪೊಲೀಸರು ವಿದ್ಯಾರ್ಥಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ವಿದ್ಯಾರ್ಥಿಯ ಮಾಸ್ಟರ್ ಮೈಂಡ್ನಿಂದಾಗಿ ಬಡಪಾಯಿ ಮಕ್ಕಳು ಆಸ್ಪತ್ರೆ ಸೇರುವಂತಾಗಿದೆ. ಅಷ್ಟಕ್ಕೂ ವಿದ್ಯಾರ್ಥಿ ಇಥಹದೊಂದು ಪ್ಲ್ಯಾನ್ ಮಾಡಲು ಕಾರಣ ಏನು ಗೊತ್ತಾ? ಸಾಮಾನ್ಯವಾಗಿ ಶಾಲೆಗಳಿಗೆ ರಜೆಯನ್ನು ಕೊಟ್ಟಾಗ ವಿದ್ಯಾರ್ಥಿಗಳು ತಮ್ಮ ಊರುಗಳಿಗೆ ಹೋಗುತ್ತಾರೆ. ತಮ್ಮ ಪೋಷಕರೊಂದಿಗೆ ಕಾಲ ಕಳೆಯುತ್ತಾರೆ. ಇದಕ್ಕೆಲ್ಲಾ ಶಾಲೆಗೆ ರಜೆ ಸಿಗಬೇಕು. ಒಂದು ವೇಳೆ ರಜೆ ಇಲ್ಲವಾದಲ್ಲಿ ರಜೆ ಕೊಡುವವರೆಗೂ ಕಾಯಬೇಕು.
ಆದರೆ ವಿದ್ಯಾರ್ಥಿ ಲೆಕ್ಕಾಚಾರ ಬೇರೆ ಆಗಿತ್ತು. ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಏನಾದರೂ ತೊಂದರೆಯಾದರೆ ಶಾಲೆಗೆ ರಜೆ ನೀಡ್ತಾರೆ. ಆಗ ತಾನೂ ಕೂಡ ರಜೆ ತೆಗೆದುಕೊಂಡು ತಂದೆ-ತಾಯಿಯನ್ನು ಭೇಟಿ ಮಾಡಲು ಊರಿಗೆ ಹೋಗಬಹುದು ಎಂದು ಆತ ಯೋಚಿಸಿದ್ದಾನೆ. ಇದಕ್ಕಾಗಿ ಆತ ಕುಡಿಯುವ ನೀರಿಗೆ ಇಲಿ ಪಾಷಾಣ ಹಾಕಿದ್ದಾನೆ.
ಘಟನೆಯ ಬಳಿಕ ವಿದ್ಯಾರ್ಥಿಯನ್ನು ಪೊಲೀಸರು ವಿಚಾರಣೆ ಮಾಡಿದ್ದಾರೆ. ಈ ವಿದ್ಯಾರ್ಥಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಾನೆ ಎಂದು ಪೊಲೀಸರಿಗೆ ತನಿಖೆ ವೇಳೆ ತಿಳಿದು ಬಂದಿದೆ. ಈ ವಿದ್ಯಾರ್ಥಿಯ ಪೋಷಕರು ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದಾರೆ. ಮಗ ಚೆನ್ನಾಗಿ ಓದಲೆಂದು ಹಾಸ್ಟೆಲ್ ಸೇರಿಸಿದ್ದಾರೆ. ಆದರೆ ಈ ವಿಷಯ ತಿಳಿದು ಪೋಷಕರಿಗೆ ಸಿಡಿಲು ಬಡಿದಂತಾಗಿದೆ. ಸದ್ಯ ವಿದ್ಯಾರ್ಥಿಗೂ ಚಿಕಿತ್ಸೆ ನೀಡಲಾಗುತ್ತಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications