ನೀರಿಲ್ಲದ ನೆಲದಲ್ಲಿ ಸಹಜ ಕೃಷಿಯಿಂದ ಗೆದ್ದ ಕೋಲಾರದ ರೈತ
ಕೋಲಾರ, ಮೇ 31: ಕೋಲಾರ ಜಿಲ್ಲೆ ಅಂದರೆ ಬರದ ನಾಡು ಎಂದೇ ಕರೆಯುತ್ತಾರೆ. ಕೃಷಿಗೆಂದು ನೀರಾವರಿ ವ್ಯವಸ್ಥೆ ಮಾಡುವುದು ಕಷ್ಟಕರವೇ ಎನ್ನುವ ಪರಿಸ್ಥಿತಿ. ಹೀಗಿದ್ದರೂ ಕೋಲಾರದ ಕೆಲ ರೈತರು ಇರುವ ಅಲ್ಪಸ್ವಲ್ಪ ನೀರಲ್ಲೇ ತರಕಾರಿ ಬೆಳೆದು ಬೇರೆ ಬೇರೆ ದೇಶಕ್ಕೂ ರಫ್ತು ಮಾಡುತ್ತಿದ್ದಾರೆ ಎನ್ನುವುದೇ ಹೆಚ್ಚುಗಾರಿಕೆಯ ವಿಷಯ.
ಈ ರೈತರ ನಡುವೆ ಇಲ್ಲೊಬ್ಬರು ಕೈತುಂಬಾ ಸಂಬಳ ಬರುತ್ತಿದ್ದ ಸರ್ಕಾರಿ ಕೆಲಸಕ್ಕೆ ಗುಡ್ ಬಾಯ್ ಹೇಳಿ ಕೃಷಿ ಕಡೆ ವಾಲಿದ್ದಾರೆ. ಅಷ್ಟೇ ಅಲ್ಲ, ಕೃಷಿಯಲ್ಲಿ ಹಲವು ಹೊಸತನಗಳನ್ನು ಕಂಡುಕೊಳ್ಳುತ್ತಾ ಮಾದರಿ ರೈತ ಎಂದೂ ಅನಿಸಿಕೊಂಡಿದ್ದಾರೆ. ಆ ರೈತ ಯಾರು, ಕೃಷಿಯಲ್ಲಿ ಏನೇನು ಪ್ರಯೋಗಗಳನ್ನು ಮಾಡಿದ್ದಾರೆ ಎಂಬುದನ್ನು ಮುಂದೆ ನೋಡೋಣ...

ಉಪನ್ಯಾಸಕ ವೃತ್ತಿಯಿಂದ ಕೃಷಿಯೆಡೆಗೆ ಹೆಜ್ಜೆ...
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ರಾಂಪುರ ಗ್ರಾಮದ ರೈತ ಅಶೋಕ್ ಕುಮಾರ್ ಜಿಲ್ಲೆಯಲ್ಲಿ ಪ್ರಗತಿಪರ ರೈತ ಅನಿಸಿಕೊಂಡಿದ್ದಾರೆ. 19 ವರ್ಷಗಳಿಂದಲೂ ಕೃಷಿಯಲ್ಲಿ ತೊಡಗಿಕೊಂಡಿದ್ದಾರೆ. 13 ವರ್ಷಗಳ ಕಾಲ ಶ್ರೀನಿವಾಸಪುರ ಸರ್ಕಾರಿ ಜ್ಯುನಿಯರ್ ಕಾಲೇಜಿನಲ್ಲಿ ಉಪನ್ಯಾಸಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಆದರೆ ಸಂಪೂರ್ಣ ಕೃಷಿಕನಾಗಬೇಕು ಎಂದು ನಿರ್ಧರಿಸಿ ಸರ್ಕಾರಿ ಕೆಲಸಕ್ಕೆ ರಾಜೀನಾಮೆ ನೀಡಿ ಕೃಷಿಯೆಡೆಗೆ ಬಂದಿದ್ದಾರೆ.

ಸಾವಯವ, ಸಹಜ ಕೃಷಿಯತ್ತ ಆಸಕ್ತಿ
ತಮಗೆ ಬಂದಿದ್ದ ಪಿತ್ರಾರ್ಜಿತ ಆಸ್ತಿ 70 ಎಕರೆ ಭೂಮಿಯಲ್ಲಿ ಸಾವಯವ ಹಾಗೂ ಸಹಜ ಕೃಷಿ ಮಾಡುತ್ತಿದ್ದಾರೆ. ತಮ್ಮ ಭೂಮಿಯನ್ನೇ ಪ್ರಯೋಗ ಶಾಲೆಯನ್ನಾಗಿಸಿಕೊಂಡು ಕೃಷಿ ಕಾರ್ಯಕ್ಕೆ ಇಳಿದಿದ್ದಾರೆ. ಮಾವು, ಬೇವು, ಹೆಬ್ಬೇವು, ನೇರಳೆ ಸೇರಿದಂತೆ ಹತ್ತಾರು ರೀತಿಯ ಸಸ್ಯಸಂಕುಲಗಳನ್ನು ಬೆಳೆಸಿದ್ದಾರೆ.

ಮಳೆಯಾಶ್ರಿತ ಸಹಜ ಕೃಷಿ ಇವರ ವಿಶೇಷತೆ
ಜಮೀನಿನಲ್ಲಿ ಐದಾರು ಕೃಷಿ ಹೊಂಡ, ಇಂಗು ಗುಂಡಿಯನ್ನು ನಿರ್ಮಿಸಿಕೊಂಡಿದ್ದಾರೆ. ಒಂದೇ ಒಂದು ಕೊಳವೆ ಬಾವಿಯನ್ನೂ ಹಾಕಿಸದೇ, ವಿದ್ಯುತ್ ಅನ್ನೂ ಬಳಸದೆ ಕೇವಲ ಮಳೆ ಆಶ್ರಿತ ಸಹಜ ಕೃಷಿ ಮಾಡುತ್ತಿರುವುದು ಇವರ ವಿಶೇಷತೆ.

ಕೃಷಿಗೆ ಜೊತೆಯಾದ ಹೈನುಗಾರಿಕೆ
ಈ ಸಹಜ ಕೃಷಿಯೊಂದಿಗೆ ಹೈನುಗಾರಿಕೆ, ಮೀನುಗಾರಿಕೆಯನ್ನೂ ಕೈಗೊಂಡಿದ್ದಾರೆ. ಪ್ರಯೋಗಶೀಲ ಮನಸ್ಸಿದ್ದರೆ ಎಂತಹ ಕ್ಷೇತ್ರದಲ್ಲೂ ಯಶಸ್ಸನ್ನು ಪಡೆಯಲು ಸಾಧ್ಯ ಎಂಬುದಕ್ಕೆ ಅಶೋಕ್ ಕುಮಾರ್ ಉದಾಹರಣೆಯಾಗಿದ್ದಾರೆ. ತಮ್ಮದೇ ವಿಧಾನದಲ್ಲಿ, ಸಹಜ ಕೃಷಿಯಿಂದ ಲಾಭದೊಂದಿಗೆ ನೆಮ್ಮದಿಯ ಗಳಿಕೆಯನ್ನೂ ಪಡೆದಿರುವುದು ಈ ರೈತನ ಯಶಸ್ಸೇ ಸರಿ...
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications