20 ವರ್ಷದ ಯುವತಿ ಜೊತೆ ದತ್ತಾತ್ರೇಯ ಅವಧೂತ ಸ್ವಾಮೀಜಿ ಪರಾರಿ?
ಕೋಲಾರ, ಫೆಬ್ರವರಿ 27: ಪಾದ ಪೂಜೆ ಮಾಡುತ್ತಿದ್ದ ಯುವತಿಯ ಜೊತೆ ಕೋಲಾರ ತಾಲೂಕಿನ ಹೊಳಲಿ ಗ್ರಾಮದ ದತ್ತಾತ್ರೇಯ ಅವಧೂತ ಸ್ವಾಮೀಜಿ (40) ನಾಪತ್ತೆಯಾಗಿದ್ದಾರೆ.
Recommended Video
ಕೋಲಾರ ತಾಲ್ಲೂಕಿನ ಹೊಳಲಿ ಗ್ರಾಮದ 20 ವರ್ಷದ ಯುವತಿ ಶಿವರಾತ್ರಿಯ ದಿನವಾದ ಸೋಮವಾರದ ರಾತ್ರಿಯಿಂದ ನಾಪತ್ತೆಯಾಗಿದ್ದು
ಕೋಲಾರ ಗ್ರಾಮಾಂತರ ಠಾಣೆಗೆ ಯುವತಿಯ ಸೋದರ ಮಾವ ಶಂಕರ್ ದೂರು ನೀಡಿದ್ದಾರೆ. ಯುವತಿ ಆಗಾಗ ಮಠಕ್ಕೆ ಬಂದು ಸ್ವಾಮೀಜಿಯ ಪಾದ ಪೂಜೆ ಮತ್ತು ಇತರೆ ಸಹಾಯ ಮಾಡುತ್ತಿದ್ದಳು. ಈಗ ಸ್ವಾಮೀಜಿ ಆ ಯುವತಿಯ ಜೊತೆ ಪರಾರಿಯಾಗಿದ್ದಾರೆಂದು ತಿಳಿದುಬಂದಿದೆ.

ಈ ಸ್ವಾಮೀಜಿ ಯಾರು?
ಹೊಳಲಿ ಗ್ರಾಮದ ಭೀಮಲಿಂಗೇಶ್ವರ ಸೇವಾಶ್ರಮದ ಪೀಠಾಧಿಪತಿ ಸ್ವಾಮೀಜಿ ಮೂಲತಃ ಬಾಗಲಕೋಟೆಯ ಮುಧೋಳದವರು. ಕೆಲವೇ ತಿಂಗಳ ಹಿಂದೆ ಗ್ರಾಮಕ್ಕೆ ಬಂದು ಮಠವನ್ನು ಅಭಿವೃದ್ಧಿಪಡಿಸುತ್ತೇನೆ ಎಂದು ಗ್ರಾಮಸ್ಥರನ್ನು ನಂಬಿಸಿದ್ದು, ಇದೀಗ ಈ ಸ್ವಾಮೀಜಿ ಯುವತಿಯ ಜೊತೆ ಪರಾರಿಯಾಗಿರುವುದು ಬೆಳಕಿಗೆ ಬಂದಿದೆ.

ತಿರುಪತಿಯಲ್ಲಿ ಸ್ವಾಮೀಜಿ ಮದುವೆ?
ಯುವತಿಯ ಅಣ್ಣನೂ ಅದೇ ಮಠದಲ್ಲಿ ಕೆಲಸ ಮಾಡುತ್ತಿದ್ದು, ಸ್ವಾಮೀಜಿ ಇಂದು ಆತನಿಗೆ ದೂರವಾಣಿ ಕರೆ ಮಾಡಿ, ನಾವಿಬ್ಬರೂ ತಿರುಪತಿಗೆ ಬಂದಿದ್ದು, ಅಲ್ಲಿ ಮದುವೆಯನ್ನೂ ಆಗಿದ್ದೇವೆ ಎಂದು ತಿಳಿಸಿದ್ದಾರೆ. ಇನ್ನೆರಡು ದಿನಗಳಲ್ಲಿ ವಾಪಸ್ ಆಗುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.

ದೂರು ದಾಖಲಿಸಿರುವ ಯುವತಿ ಮನೆಯವರು
ಸ್ವಾಮೀಜಿಯೊಂದಿಗೆ ತಮ್ಮ ಮನೆ ಮಗಳು ನಾಪತ್ತೆಯಾಗಿದ್ದಾಳೆ. ಸ್ವಾಮೀಜಿ ಪಾದ ಪೂಜೆಗೆಂದು ಆಕೆ ಆಗಾಗ್ಗೆ ಮಠಕ್ಕೆ ಹೋಗುತ್ತಿದ್ದಳು. ಸ್ವಾಮೀಜಿಯೇ ಆಕೆಯನ್ನು ಕರೆದುಕೊಂಡು ಹೋಗಿದ್ದಾರೆ ಎಂದು ಆ ಯುವತಿ ಮನೆಯವರು ಪೊಲೀಸರಿಗೆ ದೂರು ನೀಡಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೂರು ದಾಖಲಿಸಿ, ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಸ್ವಾಮೀಜಿ ಪತ್ತೆಗೆ ವಿಶೇಷ ತಂಡ ರಚಿಸಿದ್ದಾರೆ.

ಸ್ವಾಮೀಜಿಗಳನ್ನು ನಂಬಿದ್ದ ಜನರು
ಈ ಊರಿನ ಮಠವನ್ನು ಉದ್ಧಾರ ಮಾಡುತ್ತೇನೆ ಎಂದು ದತ್ತಾತ್ರೇಯ ಅವಧೂತ ಸ್ವಾಮೀಜಿ ಇಲ್ಲಿನ ಜನರನ್ನು ನಂಬಿಸಿದ್ದರು. ಜನರೂ ಸ್ವಾಮೀಜಿಯನ್ನು ನಂಬಿ ಪೂಜೆ ಪುನಸ್ಕಾರಗಳನ್ನು ನಡೆಸುತ್ತಿದ್ದರು. ಆದರೆ ಈ ರೀತಿ ಯುವತಿಯೊಂದಿಗೆ ಸ್ವಾಮೀಜಿ ಪರಾರಿಯಾಗಿರುವುದು ಇಡೀ ಊರಿನಲ್ಲೇ ಮಾತಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications