ವಧು-ವರ ಬಡಿದಾಡಿಕೊಂಡು ಸತ್ತ ಕೇಸ್ಗೆ ಟ್ವಿಸ್ಟ್: ಎರಡು ಜೀವ ಬಲಿ ಪಡೆದ ಕಾಣದ ಕೈ ಯಾವುದು?
ಕೋಲಾರ, ಆಗಸ್ಟ್ 08: ಮದುವೆಯಾದ ಕೆಲವೇ ಗಂಟೆಗಳಲ್ಲಿ ನವ ವಧು ಹಾಗೂ ವರ ಬಡಿದಾಡಿಕೊಂಡು ಸಾವನ್ನಪ್ಪಿದ ಘಟನೆ ಕೋಲಾರ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದೆ. ಈ ಪ್ರಕರಣ ತನಿಖೆಯಲ್ಲಿರುವಾಗಲೇ ಕೇಸ್ಗೆ ಬಿಗ್ ಟ್ವಿಸ್ಟ್ ಕೊಡುವಂತಹ ಮಾಹಿತಿಯೊಂದು ಹೊರ ಬಿದ್ದಿದೆ. ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ಚಂಬರಸನಹಳ್ಳಿಯಲ್ಲಿ ನವೀನ್ (29) ಹಾಗೂ ಲಿಖಿತಶ್ರೀ (20) ಸಾವಿಗೆ ಸಂಬಂಧಪಟ್ಟಂತೆ ಮೂರನೇ ವ್ಯಕ್ತಿಯ ಕೈವಾಡ ಇರುವ ಬಗ್ಗೆ ಅನುಮಾನಗಳು ದಟ್ಟವಾಗುತ್ತಿದೆ.
ಕೆಜಿಎಫ್ ತಾಲೂಕಿನ ಚಂಬರಸನಹಳ್ಳಿ ಗ್ರಾಮದ ನವೀನ್ ಹಾಗೂ ಲಿಖಿತಶ್ರೀ ಕೆಲವು ಸಮಯದಿಂದ ಪ್ರೀತಿಸುತ್ತಿದ್ದರು. ಇವರ ಪ್ರೀತಿಗೆ ಕುಟುಂಬಸ್ಥರು ಕೂಡ ಒಪ್ಪಿಗೆ ಸೂಚಿಸಿದ್ದು, ಎರಡು ಕುಟುಂಬದವರನ್ನು ಒಪ್ಪಿಸಿ ನಿನ್ನೆ( ಆಗಸ್ಟ್ 07) ಬುಧವಾರ ಸ್ಥಳೀಯ ದೇವಾಲಯದಲ್ಲಿ ಮದುವೆಯಾಗಿದ್ದರು. ಪ್ರೀತಿಸಿ ಮದುವೆಯಾದ ಖುಷಿಯಲ್ಲಿದ್ದ ನವೀನ್-ಲಿಖಿತಶ್ರೀ ಮದುವೆ ಮುಗಿದ ಬಳಿಕ ಇಬ್ಬರೂ ರೂಮಿಗೆ ಹೋಗಿದ್ದಾರೆ. ಬಳಿಕ ಇಬ್ಬರು ಗಂಭೀರವಾಗಿ ಗಾಯಗೊಂಡ ಸ್ಥಿತಿಯಲ್ಲಿ ಕುಟುಂಬಸ್ಥರಿಗೆ ಕಂಡು ಬಂದಿದ್ದರು.

ಕುಟುಂಬಸ್ಥರು ಕೂಡಲೇ ಇಬ್ಬರನ್ನೂ ಕೋಲಾರದ ಅರ್.ಎಲ್. ಜಾಲಪ್ಪ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ದುರಾದೃಷ್ಟವಶಾತ್ ನಿನ್ನೆ ನವ ವಧುವಾಗಿದ್ದ ಲಿಖಿತಶ್ರೀ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಳು. ಇನ್ನು ಗಂಭೀರವಾಗಿ ಗಾಯಗೊಂಡಿದ್ದ ನವೀನ್ನನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ರವಾನಿಸಲಾಗಿತ್ತು. ಆದರೆ ಈತನೂ ಕೂಡ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಮೊದಲು ನವ ವಧು-ವರರೇ ಬಡಿದಾಡಿಕೊಂಡು ಸಾವನ್ನಪ್ಪಿದ್ದರು ಎಂದು ಸುದ್ದಿ ಹರಿದಾಡಿತ್ತು. ಆದರೆ ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ವ್ಯಕ್ತಿಯ ಕೈವಾಡ ಇರುವ ಬಗ್ಗೆ ವಧು ಲಿಖಿತಶ್ರೀ ಕುಟುಂಬದವರು ಅನುಮಾನ ವ್ಯಕ್ತಪಡಿಸಿದ್ದಾರೆ. ಇಬ್ಬರೂ ಬಹಳಷ್ಟು ಅನ್ಯೋನ್ಯವಾಗಿದ್ದವರು, ಪ್ರೀತಿಸಿ ಮದುವೆಯಾಗಿದ್ದವರು. ಇಬ್ಬರು ಹೊಡೆದಾಡಿಕೊಂಡಿರುವುದು ಅನುಮಾನ. ಯಾರೋ ಮೂರನೇ ವ್ಯಕ್ತಿ ಇದರ ಹಿಂದೆ ಇದ್ದಾರೆ. ನಾವು ಮದುವೆಗೆ ಹೋಗಿದ್ದೆವು. ಇಬ್ಬರೂ ತುಂಬಾ ಖುಷಿಯಾಗಿ ಇದ್ದರು. ಅವರು ಹೊಡೆದಾಡಿಕೊಂಡಿರುವುದು ಸುಳ್ಳು. ಇಬ್ಬರನ್ನು ಯಾರೋ ಹೊಡೆದಿರುವ ಅನುಮಾನ ಇದೆ ಎಂದು ಹೇಳಿದ್ದಾರೆ.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್












Click it and Unblock the Notifications