"ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದವರು ದೇಶದ್ರೋಹಿಗಳು''
ಕೋಲಾರ, ಜನವರಿ ೨೬: ದೆಹಲಿಯ ಕೆಂಪುಕೋಟೆಯಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದವರು ದೇಶದ್ರೋಹಿಗಳು ಎಂದು ಕೋಲಾರ ಸಂಸದ ಎಸ್.ಮುನಿಸ್ವಾಮಿ ವಾಗ್ದಾಳಿ ನಡೆಸಿದರು.
ರೈತರ ಹೆಸರಿನಲ್ಲಿ ಉಗ್ರ ಹೋರಾಟ ಮಾಡುತ್ತಿರುವವರು ರೈತರಲ್ಲ. ನಿಜವಾದ ರೈತ ಹೋರಾಟಗಾರರು ಪೋಲಿಸರು ಮೇಲೆ ಟ್ರಾಕ್ಟರ್ ಹರಿಸುವುದು, ಹಲ್ಲೆ ಮಾಡುವುದು, ಬಸ್ ಗಳನ್ನು ಧ್ವಂಸ ಮಾಡುವ ಸ್ಥಿತಿಗೆ ಹೋಗುವುದಿಲ್ಲ ಎಂದರು.
ದೆಹಲಿಯ ಕೆಂಪುಕೋಟೆಯಲ್ಲಿ ನಡೆದಿರುವ ಘಟನೆ ರಾಜಕೀಯ ಪಿತೂರಿಯಿಂದ ಕೂಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತಪರ ಮಸೂದೆ ಸಹಿಸಿಕೊಳ್ಳದ ವಿರೋಧ ಪಕ್ಷಗಳು ನಡೆಸುತ್ತಿರುವ ಷಡ್ಯಂತ್ರ ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಘರ್ಷಣೆಗೆ ಇಳಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ದೇಶದ ಜನ ನೋಡುತ್ತಿದ್ದಾರೆ, ಅವರು ಯಾವುದನ್ನು ಬೇಕಾದರೂ ಸಹಿಸಿಕೊಳ್ಳತ್ತಾರೆ. ರಾಷ್ಟ್ರಧ್ವಜಕ್ಕೆ ಅಪಮಾನ ಮಾಡುವುದನ್ನು ಸಹಿಸುವುದಿಲ್ಲ ಎಂದು ಹೇಳಿದರು.
ಆದರೆ ದೆಹಲಿಯ ಕೆಂಪುಕೋಟೆಯಲ್ಲಿ ರಾಷ್ಟ್ರಧ್ವಜ ಇಳಿಸಿ ಬೇರೆ ಧ್ವಜ ಹಾರಿಸಿರುವುದು ಸಹಿಸುವುದಿಲ್ಲ. ಅವರೆಲ್ಲ ಭಯೋತ್ಪಾದಕರು. ವಿರೋಧ ಪಕ್ಷಗಳು, ದಲ್ಲಾಳಿಗಳ ಪ್ರಚೋದನೆಗೆ ಒಳಗಾಗಿ ದೆಹಲಿಯಲ್ಲಿ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನೆ ಹಿಂದೆ ಯಾರ ಕೈವಾಡ ಇದೆ ಎಂದು ಮುಂದೆ ಗೊತ್ತಾಗಲಿದೆ ಎಂದರು.
72ನೇ ಗಣರಾಜ್ಯೋತ್ಸವ ಸಂಭ್ರಮ ವಿಶೇಷ ಪುಟ
ಮಾಜಿ ಸಿಎಂ ಸಿದ್ದರಾಮಯ್ಯ ಬಾಯಿಗೆ ಬಂದಂತೆ ಮಾತನಾಡಬಾರದು. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ ಕಾಯ್ದೆಗಳಿಂದ ಇಂದು ನಿಜವಾಗಿ ರೈತರಿಗೆ ಸ್ವಾತಂತ್ರ್ಯ ಸಿಕ್ಕಿದೆ. ಇಂತಹವರ ಮೇಲೆ ಪ್ರಧಾನಿ ಮೋದಿ ಕ್ರಮ ವಹಿಸಿದರೆ ಯಾರು ವಿರೋಧ ಮಾಡುವುದಿಲ್ಲ ಎಂದು ಕೋಲಾರ ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications