ಕೋಲಾರದ ಸಾವಿರಾರು ಎಕರೆ ಭೂಮಿ ಕಬಳಿಸಲು ಪೈಪೋಟಿ
ಕೋಲಾರ, ಜುಲೈ 21: ಕೋಲಾರದ ಭೂಮಿ ಚಿನ್ನದ ಭೂಮಿ. ಆದರೆ ಈ ಚಿನ್ನದಂಥ ಭೂಮಿಯನ್ನು ಕಬಳಿಸಲು ಈಗ ಪೈಪೋಟಿ ಶುರುವಾಗಿದೆ. ಕೋಲಾರ ಜಿಲ್ಲೆ ಕೆಜಿಎಫ್ ನ ಕೃಷ್ಣಾಪುರಂ ಬಳಿ ಚಿನ್ನದ ಗಣಿಗೆ ಸೇರಿದ ನೂರಾರು ಎಕರೆ ಭೂಮಿಯನ್ನು ಪ್ರಭಾವಿಗಳು ಲೂಟಿ ಮಾಡುತ್ತಿರುವ ಸಂಗತಿ ಬೆಳಕಿಗೆ ಬಂದಿದೆ.
Recommended Video
ರಾತ್ರೋರಾತ್ರಿ ಚಿನ್ನದ ಗಣಿಗೆ ಸೇರಿದ ಭೂಮಿಗೆ ಬೇಲಿ ಹಾಕಿಕೊಂಡು ಕೆಲವರು ದೇವಸ್ಥಾನ, ಚರ್ಚ್ ನಿರ್ಮಾಣ ಮಾಡಿ, ಆ ನೆಪದಲ್ಲಿ ನೂರಾರು ಎಕರೆ ಭೂಮಿ ಲಪಟಾಯಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇಲ್ಲಿ ಚಿನ್ನದ ಗಣಿಗೆ ಸೇರಿದ ಸುಮಾರು 12,500 ಎಕರೆ ಭೂಮಿ ಇದೆ. ಹದಿನೈದು ವರ್ಷಗಳ ಹಿಂದೆ 40 ಕೋಟಿ ರೂಪಾಯಿ ಬೆಲೆ ಇದ್ದ ಈ ಭೂಮಿಯ ಬೆಲೆ ಇಂದು 45,000 ಕೋಟಿ ದಾಟಿದೆ.
ಹಾಗಾಗಿಯೇ ಸಾವಿರಾರು ಕೋಟಿ ಬೆಲೆ ಬಾಳುವ, ದಿಕ್ಕು ದೆಸೆಯಿಲ್ಲದ ಭೂಮಿಯ ಮೇಲೆ ಪ್ರಭಾವಿ ವ್ಯಕ್ತಿಗಳ ಕಣ್ಣು ಬಿದ್ದಿದ್ದು, ಪ್ರಭಾವಿ ರಾಜಕೀಯ ಮುಖಂಡರು ಸೇರಿದಂತೆ ಭೂಗಳ್ಳರು ತಮ್ಮ ಬೆಂಬಲಿಗರ ಹೆಸರುಗಳಲ್ಲಿ, ನಕಲಿ ದಾಖಲೆಗಳನ್ನು ಸೃಷ್ಟಿಸಿ ಭೂಮಿ ಕಬಳಿಸುತ್ತಿದ್ದಾರೆ.

ಒಂದು ಅಂದಾಜಿನ ಪ್ರಕಾರ ಈವರೆಗೆ ಸುಮಾರು 2000 ಎಕರೆಯಷ್ಟು ಭೂಮಿ ಕಬಳಿಕೆಯಾಗಿದೆ. ಅದರಲ್ಲೂ ಕಳೆದ ಎರಡು ತಿಂಗಳಲ್ಲಿ ಕೃಷ್ಣಾಪುರಂ, ಘಟ್ಟಕಾಮದೇನಹಳ್ಳಿ, ಪಿಚ್ಚಹಳ್ಳಿ ಗಣಿ ಪ್ರದೇಶದಲ್ಲಿ ನಕಲಿ ದಾಖಲೆ ಸೃಷ್ಟಿಸಿ ನೂರಾರು ಎಕರೆ ಭೂಮಿ ಕಬಳಿಕೆ ಮಾಡಲಾಗಿದೆ. ಇದರಿಂದ ಭೂಮಿಯಷ್ಟೆ ಅಲ್ಲ ಈ ಭಾಗದಲ್ಲಿರುವ ಪ್ರಾಣಿ ಪಕ್ಷಿಗಳಿಗೂ ತೊಂದರೆಯಾಗುತ್ತಿದೆ. ವಿಪರ್ಯಾಸ ಎಂದರೆ, ಈ ಬಗ್ಗೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಯಾವುದೇ ಮಾಹಿತಿ ಇಲ್ಲ.

ಇದೀಗ ಮಾಹಿತಿ ಮೇರೆಗೆ ತನಿಖೆಗೆ ಆದೇಶಿಸಲಾಗಿದೆ. ಜೊತೆಗೆ ಕೆಜಿಎಫ್ ತಹಶೀಲ್ದಾರರಿಗೆ ಸ್ಥಳ ಮಹಜರು ಮಾಡಿ ವರದಿ ನೀಡಲು ಸೂಚಿಸಲಾಗಿದೆ. ಒತ್ತವರು, ನಕಲಿ ದಾಖಲೆ ಸೃಷ್ಟಿಸಿ ಅಕ್ರಮ ಪ್ರವೇಶ ಮಾಡಿದ್ದೇ ಆದಲ್ಲಿ ಅಂತಹವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡುವುದಾಗಿ ಎಚ್ಚರಿಕೆಯನ್ನು ಅಧಿಕಾರಿಗಳು ನೀಡಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications