ಕರ್ನಾಟಕದ 3 ಸಾವಿರ ಉದ್ಯೋಗಕ್ಕೆ ಕತ್ತರಿ ಹಾಕಿದ ಕೇಂದ್ರ
ಕೋಲಾರ, ಫೆಬ್ರವರಿ 07 : ಕೇಂದ್ರ ಸರ್ಕಾರ ಬಜೆಟ್ನಲ್ಲಿ ಕರ್ನಾಟಕದ 3 ಸಾವಿರ ಉದ್ಯೋಗಳನ್ನು ಕಿತ್ತುಕೊಂಡಿದೆ. ಕೋಲಾರ ಜಿಲ್ಲೆಯಲ್ಲಿ ಸ್ಥಾಪನೆ ಮಾಡಲು ಉದ್ದೇಶಿಸಿದ್ದ ರೈಲ್ವೆ ಕೋಚ್ ಫ್ಯಾಕ್ಟರಿ ಯೋಜನೆಯಲ್ಲಿ ಬದಲಾವಣೆ ಮಾಡಲಾಗಿದೆ.
ಫೆಬ್ರವರಿ 1ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡಿದ್ದರು. ಬಜೆಟ್ನಲ್ಲಿ ರೈಲ್ವೆ ಇಲಾಖೆಗೆ ನೀಡಿದ ಅನುದಾ, ಹೊಸ ಯೋಜನೆಗಳ ಕುರಿತ ಮಾಹಿತಿ ಈಗ ಬಹಿರಂಗವಾಗಿದೆ.
ಕೋಲಾರದಲ್ಲಿ ರೈಲ್ವೆ ರಿಪೇರಿ ವರ್ಕ್ ಶಾಪ್ ನಿರ್ಮಾಣಕ್ಕೆ 495.3 ಕೋಟಿ ರೂ. ಹಣವನ್ನು ಬಜೆಟ್ನಲ್ಲಿ ನೀಡಲಾಗಿದೆ. ಈ ವರ್ಕ್ಶಾಪ್ನಿಂದ 2 ಸಾವಿರ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಅಂದಾಜಿಸಲಾಗಿದೆ.
ಜಿಲ್ಲೆಯ ಶ್ರೀನಿವಾಸಪುರದಲ್ಲಿ ರೈಲ್ವೆ ಕೋಚ್ ಫ್ಯಾಕ್ಟರಿ ನಿರ್ಮಾಣಕ್ಕೆ ಭೂ ಸ್ವಾಧೀನ ಆಗಿತ್ತು. ಶಂಕು ಸ್ಥಾಪನೆಯನ್ನು ಮಾಡಲಾಗಿತ್ತು. ಆದರೆ, ಬಜೆಟ್ನಲ್ಲಿ ಈ ಯೋಜನೆಯನ್ನು ರೈಲ್ವೆ ವರ್ಕ್ ಶಾಪ್ ಆಗಿ ಬದಲಾಯಿಸಲಾಗಿದೆ.

ಕೋಚ್ ಫ್ಯಾಕ್ಟರಿ ದಶಕಗಳ ಕನಸು
ಕೋಲಾರದ ಸಂಸದ ಕೆ. ಎಚ್. ಮುನಿಯಪ್ಪ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದಾಗ ಕೋಲಾರದಲ್ಲಿ ರೈಲ್ವೆ ಕೋಚ್ ಫ್ಯಾಕ್ಟರಿ ನಿರ್ಮಾಣ ಮಾಡುವ ಪ್ರಸ್ತಾವನೆ ಸಿದ್ಧವಾಯಿತು. 2011-12, 2012-13ನೇ ಸಾಲಿನ ಬಜೆಟ್ನಲ್ಲಿ ಯೋಜನೆಯನ್ನು ಸೇರಿಸುವಂತೆ ನೋಡಿಕೊಂಡರು. ಆದರೆ, ಯೋಜನೆ ಮುಂದುವರೆಯದೇ ಕಾಗದದಲ್ಲೇ ಉಳಿಯಿತು.

2014ರಲ್ಲಿ ಮರುಜೀವ
ಮಲ್ಲಿಕಾರ್ಜುನ ಖರ್ಗೆ ರೈಲ್ವೆ ಖಾತೆ ಸಚಿವರಾದ ಬಳಿಕ ಯೋಜನೆಗೆ ಇದ್ದ ಅಡ್ಡಿಯನ್ನು ನಿವಾರಣೆ ಮಾಡಿದರು. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನಲ್ಲಿ ರೈಲ್ವೆ ಕೋಚ್ ಫ್ಯಾಕ್ಟರಿ ನಿರ್ಮಾಣಕ್ಕೆ
ಶಂಕು ಸ್ಥಾಪನೆ ಸಹ ಆಯಿತು. ಆದರೆ, ಪುನಃ ಯೋಜನೆಗೆ ಗ್ರಹಣ ಹಿಡಿಯಿತು.

ವರ್ಷಕ್ಕೆ 1000 ಕೋಚ್ ಉತ್ಪಾದನೆ
1460 ಕೋಟಿ ವೆಚ್ಚದಲ್ಲಿ ರೈಲ್ವೆ ಕೋಚ್ ಫ್ಯಾಕ್ಟರಿ ನಿರ್ಮಾಣ ಮಾಡಲು ಉದ್ದೇಶಿಸಲಾಗಿತ್ತು. ಇದಕ್ಕಾಗಿ 1123 ಎಕರೆ ಜಾಗವನ್ನು ಸ್ವಾಧೀನ ಪಡಿಸಿಕೊಳ್ಳಲಾಯಿತು. ಈ ಯೋಜನೆ ಪೂರ್ಣಗೊಂಡರೆ ವರ್ಷಕ್ಕೆ 1000 ರೈಲ್ವೆ ಬೋಗಿಗಳು ತಯಾರಾಗಲಿವೆ ಎಂದು ಅಂದಾಜಿಸಲಾಯಿತು. ಈ ಯೋಜನೆಯಿಂದ 5 ಸಾವಿರ ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇತ್ತು.

ಈಗ ರೈಲು ವರ್ಕ್ ಶಾಪ್
ಈಗ ಕೇಂದ್ರ ಸರ್ಕಾರ ಯೋಜನೆಯಲ್ಲಿ ಬದಲಾವಣೆ ಮಾಡಿದೆ. ರೈಲ್ವೆ ಕೋಚ್ ಫ್ಯಾಕ್ಟರಿಗಾಗಿ ಸ್ವಾಧೀನ ಪಡಿಸಿಕೊಂಡಿರುವ ಭೂಮಿಯಲ್ಲಿ ರೈಲ್ವೆ ವರ್ಕ್ ಶಾಪ್ ನಿರ್ಮಾಣವಾಗಲಿದೆ. ಇದಕ್ಕಾಗಿ 495 ಕೋಟಿ ಅನುದಾನವನ್ನು ಬಜೆಟ್ನಲ್ಲಿ ಮೀಸಲಾಗಿಡಲಾಗಿದ್ದು, ಇದರಿಂದಾಗಿ 2 ಸಾವಿರ ಉದ್ಯೋಗ ಸೃಷ್ಟಿಯಾಗಲಿದೆ.

ಸಂಸದರು ಹೇಳುವುದೇನು?
ಕೋಲಾರದ ಬಿಜೆಪಿ ಸಂಸದ ಎಸ್. ಮುನಿಸ್ವಾಮಿ ಈ ಕುರಿತು ಹೇಳಿಕೆ ನೀಡಿದ್ದು, "ರೈಲ್ವೆ ವರ್ಕ್ ಶಾಪ್ 530 ಎಕರೆ ಜಾಗದಲ್ಲಿ ನಿರ್ಮಾಣವಾಗಲಿದೆ. ಇದರಿಂದಾಗಿ 2 ಸಾವಿರ ಉದ್ಯೋಗ ಸೃಷ್ಟಿಯಾಗಲಿದೆ" ಎಂದು ಹೇಳಿದ್ದಾರೆ.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ












Click it and Unblock the Notifications