ಶಕ್ತಿ ಮೀರಿ ಪ್ರಯತ್ನಿಸಿದ್ದರಿಂದ ಯಶಸ್ಸು: ಐಎಎಸ್ ಟಾಪರ್ ನಂದಿನಿ
ಬುಧವಾರ ಪ್ರಕಟಗೊಂಡಿದ್ದ ಐಎಎಸ್ 2016ನೇ ಸಾಲಿನ ಪರೀಕ್ಷಾ ಫಲಿತಾಂಶದಲ್ಲಿ ಕೋಲಾರದ ಕೆ.ಆರ್. ನಂದಿನಿ ಮೊದಲ ಸ್ಥಾನ ಗಳಿಸಿ, ಕರ್ನಾಟಕಕ್ಕೆ ಹೆಮ್ಮೆ ತಂದಿದ್ದಾರೆ.
ನವದಹೆಲಿ, ಜೂನ್ 1: ''ಐಎಎಸ್ ನಲ್ಲಿ ಪ್ರಥಮ ಶ್ರೇಯಾಂಕ ಪಡೆಯಲೇಬೇಕೆಂದು ಶಕ್ತಿ ಮೀರಿ ಪ್ರಯತ್ನಿಸಿದ್ದಕ್ಕೆ ಇಂದು ಫಲ ಸಿಕ್ಕಿದೆ. ಮನಸ್ಸಿಗೆ ಖುಷಿಯಾಗಿದೆ. ದೊಡ್ಡ ಕನಸೊಂದನ್ನು ಸಾಧಿಸಿದ ಬಗ್ಗೆ ಹೆಮ್ಮೆಯಾಗುತ್ತಿದೆ''
- ಇದು 2016ರ ಭಾರತೀಯ ಆಡಳಿತಾತ್ಮಕ ಸೇವೆ (ಐಎಎಸ್) ಪರೀಕ್ಷೆಯಲ್ಲಿ ಮೊದಲ ಶ್ರೇಯಾಂಕ ಪಡೆದ ಕೋಲಾರ ಮೂಲದ ಕೆ.ಆರ್. ನಂದಿನಿ ಅವರ ಮನದಾಳದ ಮಾತು.[2016ನೇ ಸಾಲಿನ UPSC ಟಾಪರ್ ಕೋಲಾರದ ನಂದಿನಿ ಕೆ ಆರ್]

ಫಲಿತಾಂಶ ಹೊರಬಿದ್ದ ನಂತರ ಎಎನ್ಐಗೆ ನೀಡಿದ ಸಂದರ್ಶನದಲ್ಲಿ ಅವರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.
ಸದ್ಯಕ್ಕೀಗ ಭಾರತೀಯ ಕಂದಾಯ ಸೇವೆ (ಐಆರ್ ಎಸ್) ನಲ್ಲಿ ಪ್ರೊಬೆಷನರಿ ಅಧಿಕಾರಿಯಾಗಿರುವ ಅವರು, ಐಎಎಸ್ ನಲ್ಲಿ ತಾವು ನಡೆಸಿದ ಮೂರನೇ ಪ್ರಯತ್ನದಲ್ಲಿ ಈ ಸಾಧನೆ ಮಾಡಿದ್ದಾರೆ.
ಕಠಿಣ ಪರಿಶ್ರಮದಿಂದಲೇ ಯಶಸ್ಸು ಸಿಕ್ಕಿದ್ದೆಂದು ಹೇಳಿದ ಅವರು, 2014ರಲ್ಲಿ ಈ ಪರೀಕ್ಷೆ ತೆಗೆದುಕೊಂಡು ಉತ್ತೀರ್ಣಳಾಗಿ ಐಆರ್ ಎಸ್ ಗೆ ಆಯ್ಕೆಯಾಗಿದ್ದೆ. ಆನಂತರ, 2015ರಲ್ಲಿ 2ನೇ ಬಾರಿಗೆ ಐಎಎಸ್ ಪರೀಕ್ಷೆ ತೆಗೆದುಕೊಂಡಿದ್ದೆ. ಆದರೆ, ಆಗ ನನ್ನಿಂದ ಟಾಪರ್ ಸಾಧನೆಯಾಗಲಿಲ್ಲ.
ಆದರೆ, ಇದೀಗ ಮತ್ತೆ ಪರೀಕ್ಷ ಬರೆಯುವ ಮೂಲಕ ಟಾಪರ್ ಸಾಧನೆ ಮಾಡಿದ್ದೇನೆ ಎಂದು ತಿಳಿಸಿದರು.
ಇದೇ ವೇಳೆ, ಐಎಎಸ್ ಅಧಿಕಾರಿಗಳಾಗಬೇಕೆಂದು ಕನಸು ಕಾಣುವ ಎಲ್ಲಾ ಅಭ್ಯರ್ಥಿಗಳಿಗೆ ಕಿವಿಮಾತು ಹೇಳಿದ ಅವರು, ''ನಾವು ನಮ್ಮ ಮೇಲಿನ ವಿಶ್ವಾಸವನ್ನು ಯಾವುದೇ ಕಾರಣಕ್ಕೂ ಕಳೆದುಕೊಳ್ಳಬಾರದು. ಸತತ ಪ್ರಯತ್ನದಿಂದ ಎಲ್ಲವೂ ಸಾಧ್ಯ'' ಎಂದರಲ್ಲದೆ, ಸುತ್ತಲಿನ ಸಮಾಜವೂ ಐಎಎಸ್ ಅಭ್ಯರ್ಥಿಗಳಿಗೆ ಉತ್ತಮ ಸಹಕಾರ ನೀಡಿ ನೆರವಾಗಬೇಕು ಎಂದರು.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು?












Click it and Unblock the Notifications