ಪಂಚಾಯಿತಿ ಚುನಾವಣೆ; ಪ್ರಭಾವ ತೋರಿಸಿದ ವರ್ತೂರು ಪ್ರಕಾಶ್
ಕೋಲಾರ, ಡಿಸೆಂಬರ್ 17: ಅಪಹರಣ ಪ್ರಕರಣದ ಮೂಲಕ ರಾಜ್ಯಾದ್ಯಂತ ಸುದ್ದಿಯಾಗಿದ್ದರು ಮಾಜಿ ಸಚಿವ ವರ್ತೂರು ಪ್ರಕಾಶ್. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಅವರು ತಮ್ಮ ಪ್ರಭಾವ ತೋರಿಸಿದ್ದಾರೆ. ವರ್ತೂರು ಬಣದ 15 ಸದಸ್ಯರು ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
"ಕೋಲಾರ ತಾಲೂಕಿನ 10 ಗ್ರಾಮ ಪಂಚಾಯಿತಿಗಳಲ್ಲಿ ನಮ್ಮ ಬಣದ 15 ಮಂದಿ ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ತಮ್ಮ ಬೆಂಬಲಿಗರಾದ 343 ಅಭ್ಯರ್ಥಿಗಳು ಕಣದಲ್ಲಿದ್ದಾರೆ" ಎಂದು ವರ್ತೂರು ಪ್ರಕಾಶ್ ಹೇಳಿದ್ದಾರೆ.
"ಡಿಸೆಂಬರ್ 22ರಂದು ನಡೆಯುವ ಚುನಾವಣೆಯಲ್ಲಿ 23 ಗ್ರಾಮಗಳಲ್ಲಿ 19 ಗ್ರಾಮ ಪಂಚಾಯಿತಿಗಳಲ್ಲಿ ಚುನಾವಣೆ ನಡೆಯಲಿದೆ. ವೇಮಗಲ್, ಶೆಟ್ಟಳ್ಳಿ, ಕುರುಗಲ್, ಚೌಡದೇನಹಳ್ಳಿ ಪಟ್ಟಣ ಪಂಚಾಯಿತಿಯಾಗಿದೆ" ಎಂದು ವರ್ತೂರು ಪ್ರಕಾಶ ತಿಳಿಸಿದ್ದಾರೆ.
"ತಾಲೂಕಿನ ಜನತೆಯ ನಂಬಿಕೆ, ವಿಶ್ವಾಸದಿಂದ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೇ ಅಭ್ಯರ್ಥಿಗಳ ಆಯ್ಕೆಯನ್ನು ಮಾಡಿ ಪಂಚಾಯಿತಿ ಚುನಾವಣೆಯಲ್ಲಿ ನಿಲ್ಲಿಸಿದ್ದಾರೆ. 19 ಗ್ರಾಮ ಪಂಚಾಯಿತಿಗಳಲ್ಲಿ ಸಹ ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳಿಗಿಂತಲೂ ವರ್ತೂರ್ ಪ್ರಕಾಶ್ ಬಣ ಬಲಿಷ್ಠವಾಗಿದೆ" ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾರ್ಯಕರ್ತರಲ್ಲಿ ಹುರುಪು
"ನಮ್ಮ ಕಾರ್ಯಕರ್ತರಲ್ಲಿ ಹುರುಪು ಹೆಚ್ಚಾಗಿದೆ. ಮುಂಬರುವ ಚುನಾವಣೆಗಳಲ್ಲಿ ನಾವು ಹೆಚ್ಚು ಬಲಗೊಳ್ಳಬೇಕು. ಅದಕ್ಕಾಗಿ ಗ್ರಾಮ ಪಂಚಾಯಿತಿ ಚುನಾವಣೆಯೇ ವೇದಿಕೆಯಾಗಿದೆ" ಎಂದು ಮಾಜಿ ಸಚಿವ ವರ್ತೂರು ಪ್ರಕಾಶ್ ಹೇಳಿದರು.

ಟೀಕೆ ಮಾಡುವುದು ಇಷ್ಟವಿಲ್ಲ
"ಬೇರೆ ಪಕ್ಷಗಳ ಬಗ್ಗೆ ಟೀಕೆ ಮಾಡುವುದು ನನಗೆ ಇಷ್ಟವಾಗುವುದಿಲ್ಲ. ಅಭಿವೃದ್ಧಿ ವಿಚಾರ, ದೌರ್ಜನ್ಯ, ದಬ್ಬಾಳಿಕೆಗಳ ಬಗ್ಗೆ ನಾನು ಚಕಾರವೆತ್ತುವುದಿಲ್ಲ" ಎಂದು ವರ್ತೂರು ಪ್ರಕಾಶ್ ತಿಳಿಸಿದರು.

156 ಗ್ರಾಮ ಪಂಚಾಯಿತಿಗಳು
ಕೋಲಾರ ಜಿಲ್ಲೆಯಲ್ಲಿ 156 ಗ್ರಾಮ ಪಂಚಾಯತಿಗಳಿಗೆ ಚುನಾವಣೆ ನಡೆಯಲಿದೆ. ಜಿಲ್ಲೆಯಲ್ಲಿ 2 ಹಂತಗಳಲ್ಲಿ ಚುನಾವಣೆಯನ್ನು ನಡೆಸಲಾಗುತ್ತದೆ. 4,41,885 ಪುರುಷ, 4,36,851 ಮಹಿಳಾ ಮತದಾರರು ಮತ್ತು 52 ಇತರೆ ಮತದಾರರು ಸೇರಿದಂತೆ ಒಟ್ಟು 8,78,788 ಜನರು ಮತದಾನ ಮಾಡುವ ಹಕ್ಕನ್ನು ಹೊಂದಿದ್ದಾರೆ.

ಎರಡು ಹಂತದಲ್ಲಿ ಚುನಾವಣೆ
ಕೋಲಾರ ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ ಕೋಲಾರ, ಮಾಲೂರು, ಶ್ರೀನಿವಾಸಪುರ ತಾಲೂಕಿನಲ್ಲಿ ಡಿಸೆಂಬರ್ 22ರಂದು ಚುನಾವಣೆ ನಡೆಯಲಿದೆ. ಎರಡನೇ ಹಂತದಲ್ಲಿ ಮುಳಬಾಗಿಲು, ಬಂಗಾರಪೇಟೆ, ಕೆ.ಜಿ.ಎಫ್ ತಾಲೂಕುಗಳಲ್ಲಿ ಡಿಸೆಂಬರ್ 27 ರಂದು ಚುನಾವಣೆ ನಡೆಯಲಿದೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications