ವರ್ತೂರು ಪ್ರಕಾಶ್ ಕಿಡ್ನಾಪ್: ಮಹತ್ವದ ಮಾಹಿತಿ ನೀಡಿದ ಕೋಲಾರ ಎಸ್ಪಿ
ಕೋಲಾರ, ಡಿ 4: ಮಾಜಿ ಸಚಿವ ವರ್ತೂರು ಪ್ರಕಾಶ್ ಅಪಹರಣ ಪ್ರಕರಣ ಹೊಸಹೊಸ ತಿರುವು ಪಡೆಯುತ್ತಿದ್ದು, ಕೋಲಾರದ ಪೊಲೀಸ್ ಆಯುಕ್ತ ಕಾರ್ತಿಕ್ ರೆಡ್ಡಿ ಮಹತ್ವದ ಹೇಳಿಕೆಯನ್ನು ನೀಡಿದ್ದಾರೆ.
ಕೋಲಾರ ಪೊಲೀಸ್ ಕಚೇರಿಗೆ ಭೇಟಿ ನೀಡಿದ್ದ ವರ್ತೂರು ಪ್ರಕಾಶ್, "ತನಿಖೆಯನ್ನು ಆದ್ಯತೆಯಿಂದ ಕೈಗೆತ್ತಿಗೊಂಡು ಪೂರ್ಣಗೊಳಿಸುವಂತೆ ಮನವಿ ಮಾಡಿದ್ದೇನೆ"ಎಂದು ಹೇಳಿದ್ದಾರೆ. ಅಪಹರಣವನ್ನು ರಾಜ್ಯದವರು ಮಾಡಿದವರೋ ಅಥವಾ ಮಹಾರಾಷ್ಟ್ರದವರು ಮಾಡಿದರೋ ಎನ್ನುವುದರ ಬಗ್ಗೆ ಕೋಲಾರ ಎಸ್ಪಿ ಸ್ಪಷ್ಟನೆಯನ್ನು ನೀಡಿದ್ದಾರೆ.
ಫಾರಂ ಮತ್ತು ಡೈರಿ ಉದ್ಯಮವನ್ನು ನಡೆಸುತ್ತಿದ್ದ ವರ್ತೂರು ಪ್ರಕಾಶ್ ಅವರನ್ನು ಮಹಾರಾಷ್ಟ್ರ ಮೂಲದವರು ಬಾಕಿ ಹಣಕ್ಕಾಗಿ ಕಿಡ್ನಾಪ್ ಮಾಡಿರುವ ಸಾಧ್ಯತೆಯ ಬಗ್ಗೆ ವರದಿಯಾಗಿತ್ತು. ಪೊಲೀಸರು ಈ ಆಯಾಮದಲ್ಲೂ ತನಿಖೆ ಆರಂಭಿಸಿದ್ದರು.
ಮಹಾರಾಷ್ಟ್ರದ ಪ್ರಭಾವಿ ರಾಜಕಾರಣಿಯ ಫಾರಂನಿಂದ ಹಸುಗಳನ್ನು ತರಿಸಲಾಗಿತ್ತು. ಆ ಹಸುಗಳಿಗೆ ನೀಡಬೇಕಿದ್ದ ಸುಮಾರು 30 ಕೋಟಿ ರೂಪಾಯಿ ಹಣವನ್ನು ವರ್ತೂರು ಪ್ರಕಾಶ್ ಬಾಕಿ ಉಳಿಸಿಕೊಂಡಿದ್ದರು. ಇದು, ಅಪಹರಣಕ್ಕೆ ಪ್ರಮುಖ ಕಾರಣ ಎಂದೆಲ್ಲಾ ಸುದ್ದಿಯಾಗಿತ್ತು.

ಕೋಲಾರ ಪೊಲೀಸ್ ಮುಖ್ಯಸ್ಥ ಕಾರ್ತಿಕ್ ರೆಡ್ಡಿ
ಮಾಧ್ಯಮದವರೊಂದಿಗೆ ಗುರುವಾರ (ಡಿ 3) ಮಾತನಾಡುತ್ತಿದ್ದ ಕೋಲಾರ ಪೊಲೀಸ್ ಮುಖ್ಯಸ್ಥ ಕಾರ್ತಿಕ್ ರೆಡ್ಡಿ, "ವರ್ತೂರು ಪ್ರಕಾಶ್ ಅವರ ಅಪಹರಣ ತನಿಖೆಗಾಗಿ ತಂಡ ರಚಿಸಲಾಗಿದ್ದು, ಡಿವೈಎಸ್ಪಿ, ಇಬ್ಬರು ಸರ್ಕಲ್ ಇನ್ಸ್ಪೆಕ್ಟರ್, 4 ಮಂದಿ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ತನಿಖೆ ನಡೆಯಲಿದೆ"ಎನ್ನುವ ಮಾಹಿತಿಯನ್ನು ನೀಡಿದ್ದರು.

ವರ್ತೂರು ಪ್ರಕಾಶ್ ಅಪಹರಣ
ಮಹಾರಾಷ್ಟ್ರ ಮೂಲದವರಿಂದ ವರ್ತೂರು ಪ್ರಕಾಶ್ ಅಪಹರಣ ನಡೆದಿರುವ ಸಾಧ್ಯತೆಯ ಬಗ್ಗೆ ಮಾತನಾಡಿದ ಎಸ್ಪಿ ರೆಡ್ಡಿ, "ಇದು ಹೊರಗಿನವರ ಅಥವಾ ಮಹಾರಾಷ್ಟ್ರದವರ ಕೃತ್ಯವಲ್ಲ. ಅಪಹರಣದ ಹಿಂದೆ, ಕರ್ನಾಟಕ ಮೂಲದವರೇ ಇದ್ದಾರೆ"ಎಂದು ಹೇಳುವ ಮೂಲಕ, ಮಹಾರಾಷ್ಟ್ರ, ಡೈರಿ ಫಾರಂ ಮುಂತಾದ ಆಯಾಮಗಳಿಂದ ಕಿಡ್ನಾಪ್ ನಡೆದಿಲ್ಲ ಎನ್ನುವುದು ಸ್ಪಷ್ಟವಾಗುತ್ತದೆ.

ಅಪಹರಣಕಾರರು ಕನ್ನಡ ಮತ್ತು ತಮಿಳು ಭಾಷೆಯನ್ನು ಮಾತನಾಡುತ್ತಿದ್ದರು
ವರ್ತೂರು ಪ್ರಕಾಶ್ ಕೂಡಾ ಪೊಲೀಸರಿಗೆ ದೂರು ನೀಡಿದ ವೇಳೆ, ಅಪಹರಣಕಾರರು ಕನ್ನಡ ಮತ್ತು ತಮಿಳು ಭಾಷೆಯನ್ನು ಮಾತನಾಡುತ್ತಿದ್ದರು ಎಂದು ಹೇಳಿದ್ದರು. ಹಾಗಾಗಿ, ಈ ಅಪಹರಣದ ಹಿಂದೆ ಲೋಕಲ್ ನವರ ಅಥವಾ ಕುಟುಂಬದವರಾ ಕೈವಾಡವಿದೆಯೇ ಎನ್ನುವ ಅನುಮಾನ ಬಲವಾಗುತ್ತಾ ಸಾಗುತ್ತಿದೆ.

ಮಹಿಳೆಗೆ ಇಬ್ಬರು ಮಕ್ಕಳಿದ್ದು, ಅದರಲ್ಲಿ ಮೊದಲನೇ ಮಗ ಅಪಹರಿಸಿರುವ ಸಾಧ್ಯತೆ
ಕೆಲವು ವರ್ಷಗಳ ಹಿಂದೆ ವರ್ತೂರು ಪ್ರಕಾಶ್ ಟೇಕಲ್ ಬಳಿ ಫಾರ್ಮ್ ಹೌಸ್ ಖರೀದಿಸಿದ್ದರು. ಇದರ ಉಸ್ತುವಾರಿಯನ್ನು ನೋಡಿಕೊಳ್ಳಲು ಒಬ್ಬರು ಮಹಿಳೆಯನ್ನು ಇವರು ನೇಮಿಸಿದ್ದರು. ತದನಂತರ, ಈಕೆಯನ್ನು ವರ್ತೂರು ಪ್ರಕಾಶ್ ಮದುವೆಯಾಗಿದ್ದಾರೆ. ಈ ಮಹಿಳೆಗೆ ಇಬ್ಬರು ಮಕ್ಕಳಿದ್ದು, ಅದರಲ್ಲಿ ಮೊದಲನೇ ಮಗ ವರ್ತೂರು ಪ್ರಕಾಶ್ ಅವರನ್ನು ಅಪಹರಿಸಿರುವ ಸಾಧ್ಯತೆಯಿದೆ ಎಂದೂ ಸುದ್ದಿಯಾಗಿತ್ತು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications