ವರ್ತೂರು ಪ್ರಕಾಶ್ ಅಪಹರಣ ಪ್ರಕರಣ; ಪ್ರಮುಖ ಆರೋಪಿ ಬಂಧನ
ಕೋಲಾರ, ಜನವರಿ 25: ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಇದುವರೆಗೂ 6 ಆರೋಪಿಗಳನ್ನು ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಅಪಹರಣ ಪ್ರಕರಣ ಬೆಳಕಿಗೆ ಬಂದ ನಂತರ ತಲೆಮರೆಸಿಕೊಂಡಿದ್ದ ಆರೋಪಿ ರೋಹಿತ್ನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಆರೋಪಿ ಎ1 ಆಗಿದ್ದಾನೆ. ತಮಿಳುನಾಡಿನ ಹೊಸೂರಿನಿಂದ ಆರೋಪಿ ತಪ್ಪಿಸಿಕೊಂಡಿದ್ದ. ಈಗ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ.
ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ಬೆಂಗಳೂರು ನಗರದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ರೋಹಿತ್ನನ್ನು ಬಂಧಿಸಿದ್ದಾರೆ. ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ 6 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ತನಿಖೆ ಮುಂದುವರೆದಿದೆ.

2020ರ ನವೆಂಬರ್ 26ರಂದು ಕೋಲಾರದ ಬೆಗ್ಲಿಹೊಸಹಳ್ಳಿ ತೋಟದ ಮನೆಯ ಬಳಿಯಿಂದ ವರ್ತೂರು ಪ್ರಕಾಶ್ ಅಪಹರಣ ಮಾಡಲಾಗಿತ್ತು. ಡಿಸೆಂಬರ್ 3ರಂದು ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಕವಿರಾಜ್, ಲಿಖಿತ್, ಮನೋಜ್, ರಾಘವೇಂದ್ರ, ಪ್ರವೀಣ್ ಬಂಧನವಾಗಿದೆ. ಕವಿರಾಜ್ ಅಪಹರಣದ ಯೋಜನೆಯನ್ನು ರೂಪಿಸಿದ್ದಾನೆ ಎಂದು ಪೊಲೀಸರು ಶಂಕಿಸಿದ್ದರು.
ಬೆಂಗಳೂರು, ತಮಿಳುನಾಡು ಸೇರಿದಂತೆ ವಿವಿಧ ಕಡೆ ಕವಿರಾಜ್ ವಿರುದ್ಧ 10 ಅಪಹರಣ ಪ್ರಕರಣ ದಾಖಲಾಗಿದೆ. ವರ್ತೂರು ಪ್ರಕಾಶ್ ಅಪಹರಣ ಮಾಡಿದರೆ ಕೋಟಿ ಕೋಟಿ ಹಣ ಸಿಗುತ್ತದೆ ಎಂದು ಅವರನ್ನು ಅಪಹರಣ ಮಾಡಿರಬಹುದು ಎಂಬ ಶಂಕೆ ಇದ್ದು, ತನಿಖೆ ನಡೆಯುತ್ತಿದೆ.
ಕೋಲಾರ ಜಿಲ್ಲೆಯಲ್ಲಿರುವ ತಮ್ಮ ಫಾರ್ಮ್ ಹೌಸ್ನಿಂದ ಮದುವೆ ಕಾರ್ಯಕ್ರಮವೊಂದಕ್ಕೆ ಹೋಗಲು ವರ್ತೂರು ಪ್ರಕಾಶ್ ಹೊರಟಿದ್ದರು. ತೋಟದ ಮನೆಯಿಂದ ಅರ್ಧ ಕಿ. ಮೀ. ಸಾಗುವ ವೇಳೆಗೆ ಮುಂದೆ ಮತ್ತು ಹಿಂದೆ ಒಂದೊಂದು ಕಾರಿನಲ್ಲಿ ಹಿಂಬಾಲಿಸಿದ್ದ ದುಷ್ಕರ್ಮಿಗಳು ಅವರನ್ನು ಅಪಹರಣ ಮಾಡಿದ್ದರು.
ಕಾರಿನಲ್ಲಿ ವರ್ತರು ಪ್ರಕಾಶ್ ಮತ್ತು ಅವರ ಚಾಲಕನನ್ನು ಸುತ್ತಾಡಿಸಿದ್ದರು. 30 ಕೋಟಿ ಹಣ ನೀಡುವಂತೆ ಚಿತ್ರಹಿಂಸೆ ನೀಡಿದ್ದರು. ಸ್ನೇಹಿತರ ಸಹಾಯದಿಂದ ವರ್ತೂರು ಪ್ರಕಾಶ್ ಅಪಹರಣಕಾರರಿಗೆ 50 ಲಕ್ಷ ನೀಡಿದ್ದರು. ಆದರೆ, ಹೆಚ್ಚಿನ ಹಣ ನೀಡುವಂತೆ ಪುನಃ ಅವರ ಮೇಲೆ ಹಲ್ಲೆ ನಡೆಸಲಾಗಿತ್ತು.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications