"ವರ್ತೂರು ಪ್ರಕಾಶ್ ಕಿಡ್ನಾಪ್ ಕೇಸ್: ತನಿಖೆ ನಡೆಸಲು 4 ವಿಶೇಷ ತಂಡ ರಚನೆ''
ಕೋಲಾರ, ಡಿಸೆಂಬರ್ 3: ಕೋಲಾರ ಮಾಜಿ ಶಾಸಕ ವರ್ತೂರು ಪ್ರಕಾಶ್ ಅವರ ಅಪಹರಣ ಪ್ರಕರಣದ ಸಂಬಂಧ ತನಿಖೆ ನಡೆಸಲು 4 ವಿಶೇಷ ತಂಡ ರಚನೆ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಹೇಳಿದ್ದಾರೆ.
ಕೋಲಾರದಲ್ಲಿ ಮಾತನಾಡಿದ ಎಸ್ಪಿ ಕಾರ್ತಿಕ್ ರೆಡ್ಡಿ, ಮಾಜಿ ಶಾಸಕ ವರ್ತೂರು ಪ್ರಕಾಶ್ ಅವರ ಅಪಹರಣ ತನಿಖೆಗಾಗಿ ತಂಡ ರಚಿಸಲಾಗಿದ್ದು, ಡಿವೈಎಸ್ಪಿ, ಇಬ್ಬರು ಸರ್ಕಲ್ ಇನ್ಸ್ಪೆಕ್ಟರ್, 4 ಮಂದಿ ಇನ್ಸ್ಪೆಕ್ಟರ್ ನೇತೃತ್ವದಲ್ಲಿ ತನಿಖೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.
ಅಪಹರಣ ಘಟನೆಯ ಮುಖ್ಯ ಸಾಕ್ಷಿಯಾದ ನಯಾಜ್ ನನ್ನು ಬುಧವಾರದಿಂದ ವಿಚಾರಣೆ ನಡೆಸುತ್ತಿದ್ದು, ಗುರುವಾರ ಕಾರು ಚಾಲಕ ಸುನಿಲ್ ಅವರಿಗೆ ಮೆಡಿಕಲ್ ಟೆಸ್ಟ್ ಮಾಡಿಸಿ ನಂತರ ವಿಚಾರಣೆ ಮಾಡಲಾಗುತ್ತದೆ ಎಂದು ಎಸ್ಪಿ ತಿಳಿಸಿದರು.

ಈ ಪ್ರಕರಣಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡಿ ತನಿಖೆ ನಡೆಸುತ್ತೇವೆ. ಪ್ರಕರಣದಲ್ಲಿ ಕೆಲವು ಸಾಕ್ಷಿ ಸಿಕ್ಕಿದ್ದು, ಹಲವು ಆಯಾಮದಲ್ಲಿ ತನಿಖೆ ಆರಂಭಿಸಿದ್ದೇವೆ ಎಂದು ಕೋಲಾರದ ಎಸ್ಪಿ ಕಚೇರಿಯಲ್ಲಿ ಕಾರ್ತಿಕ್ ರೆಡ್ಡಿ ಹೇಳಿದರು.
ದುಷ್ಕರ್ಮಿಗಳಿಗೆ ತಕ್ಕ ಶಿಕ್ಷೆ ಆಗಬೇಕು
ಕೋಲಾರ ಮಾಜಿ ಶಾಸಕ ವರ್ತೂರು ಪ್ರಕಾಶ್ ಕಿಡ್ನಾಪ್ ಪ್ರಕರಣ ಹಿನ್ನೆಲೆಯಲ್ಲಿ ಕೋಲಾರ ಸಂಸದ ಮುನಿಸ್ವಾಮಿ ಪ್ರತಿಕ್ರಿಯೆ ನೀಡಿ, ದುಷ್ಕರ್ಮಿಗಳಿಗೆ ತಕ್ಕ ಶಿಕ್ಷೆ ಆಗಬೇಕು. ಈ ಸಂಬಂಧ ಗೃಹ ಸಚಿವರಿಗೆ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಮನವಿ ಮಾಡಿದ್ದೇನೆ ಎಂದರು.
ವರ್ತೂರು ಪ್ರಕಾಶ್ ಅವರಿಗೆ ತುಂಬಾನೇ ನೋವಾಗಿದ್ದು, ಎಸ್ಪಿ ಬಳಿ ಘಟನೆ ಕುರಿತು ಮಾಹಿತಿ ನೀಡಿದ್ದಾರೆ. ಅದೆಷ್ಟೇ ಪ್ರಭಾವಿಗಳಾಗಿದ್ದರೂ ಕ್ರಮ ಕೈಗೊಳ್ಳಲಾಗುವುದು, ಹಣಕ್ಕಾಗಿ ವರ್ತೂರು ಪ್ರಕಾಶ್ ನನಗೆ ಕರೆ ಮಾಡಿಲ್ಲ. ಅವರ ಮನೆ ಬಳಿ ಹೋಗಿ, ಅವರ ಯೋಗ ಕ್ಷೇಮ ವಿಚಾರಿಸುತ್ತೇನೆ ಎಂದು ಸಂಸದ ಮುನಿಸ್ವಾಮಿ ತಿಳಿಸಿದರು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications