ಒಂದು ಹೊತ್ತು ಊಟಕ್ಕೂ ಪರದಾಟ; ಮಲೇಷಿಯಾದಲ್ಲಿ ಸಿಲುಕಿಕೊಂಡ ಕೋಲಾರ ವಿದ್ಯಾರ್ಥಿ ಅಳಲು
ಕೋಲಾರ, ಏಪ್ರಿಲ್ 29: ಲಾಕ್ ಡೌನ್ ನಿಂದಾಗಿ ಮಲೇಷಿಯಾದಲ್ಲಿ ಕೋಲಾರ ಮೂಲದ ವಿದ್ಯಾರ್ಥಿ ಸಿಲುಕಿಕೊಂಡಿದ್ದು, ಊಟ ಮಾಡಲೂ ಹಣವಿಲ್ಲದೇ ಪರದಾಡುತ್ತಿರುವುದಾಗಿ ವಿಡಿಯೋ ಮಾಡಿ ಹರಿಬಿಟ್ಟಿದ್ದಾರೆ. ತಮ್ಮನ್ನು ವಾಪಸ್ ಕರೆಸಿಕೊಳ್ಳಬೇಕೆಂದು ಕೇಳಿಕೊಂಡಿರುವ ವಿಡಿಯೋ ಇದೀಗ ವೈರಲ್ ಆಗಿದೆ.
Recommended Video
ಮಲೇಷಿಶಿಯಾದಲ್ಲಿ ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕು ಮೂಲದ ವಿದ್ಯಾರ್ಥಿ ಭಾರ್ಗವ್ ರಾಮ್ ಸಿಲುಕಿಕೊಂಡಿದ್ದಾರೆ. ವಿದ್ಯಾಭ್ಯಾಸದ ಸಲುವಾಗಿ ಮಲೇಷಿಯಾಗೆ ಹೋಗಿದ್ದವರು ಅಲ್ಲೇ ಲಾಕ್ ಆಗಿದ್ದಾರೆ. ಇದೀಗ ವಿಡಿಯೋ ಮೂಲಕ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.

ಮಲೇಷಿಯಾದಲ್ಲಿ ಸಿಲುಕಿಕೊಂಡ ಕೋಲಾರದ ಭಾರ್ಗವ್
ವಿದ್ಯಾಭ್ಯಾಸದ ಸಲುವಾಗಿ ಕೋಲಾರದ ಶ್ರೀನಿವಾಸಪುರದ ಭಾರ್ಗವ್ ಮಲೇಷಿಯಾಗೆ ಹೋಗಿದ್ದರು. ಆದರೆ ಅಲ್ಲಿ ಲಾಕ್ ಡೌನ್ ಹೇರಿದ್ದರಿಂದ ಕಳೆದ 45 ದಿನಗಳಿಂದ ಅಲ್ಲಿಯೇ ಸಿಲುಕಿಕೊಂಡಿದ್ದಾರೆ. ವಾಪಸ್ ಬರಲೂ ಆಗದೇ ಅಲ್ಲೇ ಪರದಾಡುತ್ತಿದ್ದಾರೆ. "ಇಲ್ಲಿ ಎಲ್ಲದಕ್ಕೂ ಕಷ್ಟವಾಗಿದೆ. ನನ್ನ ರೀತಿಯೇ ಹಲವು ವಿದ್ಯಾರ್ಥಿಗಳು, ಪ್ರವಾಸಿಗರು, ಗರ್ಭಿಣಿಯರು, ವಯಸ್ಸಾದವರು ಇಲ್ಲಿ ಸಿಲುಕಿಕೊಂಡಿದ್ದಾರೆ. ನೆರವಿಗೆ ಬನ್ನಿ" ಎಂದು ಕೇಳಿಕೊಂಡಿದ್ದಾರೆ.

ಊಟ ಮಾಡಲೂ ದುಡ್ಡಿಲ್ಲವೆಂದು ಅಳಲು
45 ದಿನಗಳಿಂದ ಅಲ್ಲಿಯೇ ಉಳಿದುಕೊಂಡಿರುವ ಭಾರ್ಗವ್ ಮೊದಲು ಇರುವ ಸ್ವಲ್ಪ ಹಣದಲ್ಲೇ ವ್ಯವಸ್ಥೆ ಮಾಡಿಕೊಂಡಿದ್ದರು. ಆದರೆ ಅಲ್ಲಿ ಸಾಮಗ್ರಿಗಳು ದುಬಾರಿಯಾಗಿದ್ದು, ಇರುವ ದುಡ್ಡೂ ಖಾಲಿಯಾಗಿದೆ. "ಈಗ ಏನು ಮಾಡಲೂ ತೋಚುತ್ತಿಲ್ಲ. ತುಂಬಾ ಕಷ್ಟ ಅನುಭವಿಸುತ್ತಿದ್ದೇವೆ. ಏನೂ ಸೌಲಭ್ಯ ಸಿಗದೆ ದಿನಕ್ಕೆ ಒಂದು ಬಾರಿ ಊಟ ಮಾಡುತ್ತಿದ್ದೇವೆ" ಎಂದು ವಿಡಿಯೋ ಮಾಡಿದ್ದಾರೆ ಭಾರ್ಗವ್.
"ಕ್ವಾರಂಟೈನ್ ಆಗಲು ಸಿದ್ಧ"
ಕೊರೊನಾ ಲಾಕ್ ಡೌನ್ ಹಿನ್ನೆಲೆ ಅಂತರರಾಷ್ಟ್ರೀಯ ವಿಮಾನ ಯಾನ ಬಂದ್ ಆಗಿದೆ. "ನಮ್ಮನ್ನು ಹೇಗಾದರೂ ವಾಪಸ್ ಕರೆಸಿಕೊಳ್ಳಿ, ನಾವು ಕ್ವಾರಂಟೈನ್ ಆಗಲು ಸಿದ್ಧ" ಎಂದು ಭಾರ್ಗವ್ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಈ ಮೂಲಕ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.

ಶ್ರೀನಿವಾಸಪುರದಲ್ಲಿ ಪೋಷಕರ ಆತಂಕ
ತಮ್ಮ ಮಗನ ಅಳಲು ನೋಡಿ ಭಾರ್ಗವ್ ರಾಮ್ ಪೋಷಕರು ಆತಂಕಗೊಂಡಿದ್ದಾರೆ. ವಿಮಾನ ವ್ಯವಸ್ಥೆ ಮಾಡಿಕೊಟ್ಟು ಭಾರತಕ್ಕೆ ಕರೆತರುವಂತೆ ಮನವಿ ಮಾಡಿದ್ದಾರೆ. ಸಿಎಂ ಯಡಿಯೂರಪ್ಪ ಹಾಗೂ ಕೇಂದ್ರ ಸರ್ಕಾರ ತಮ್ಮ ನೆರವಿಗೆ ಧಾವಿಸಬೇಕೆಂದು ಕೇಳಿಕೊಂಡಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications