ಒಂದು ಹೊತ್ತು ಊಟಕ್ಕೂ ಪರದಾಟ; ಮಲೇಷಿಯಾದಲ್ಲಿ ಸಿಲುಕಿಕೊಂಡ ಕೋಲಾರ ವಿದ್ಯಾರ್ಥಿ ಅಳಲು
ಕೋಲಾರ, ಏಪ್ರಿಲ್ 29: ಲಾಕ್ ಡೌನ್ ನಿಂದಾಗಿ ಮಲೇಷಿಯಾದಲ್ಲಿ ಕೋಲಾರ ಮೂಲದ ವಿದ್ಯಾರ್ಥಿ ಸಿಲುಕಿಕೊಂಡಿದ್ದು, ಊಟ ಮಾಡಲೂ ಹಣವಿಲ್ಲದೇ ಪರದಾಡುತ್ತಿರುವುದಾಗಿ ವಿಡಿಯೋ ಮಾಡಿ ಹರಿಬಿಟ್ಟಿದ್ದಾರೆ. ತಮ್ಮನ್ನು ವಾಪಸ್ ಕರೆಸಿಕೊಳ್ಳಬೇಕೆಂದು ಕೇಳಿಕೊಂಡಿರುವ ವಿಡಿಯೋ ಇದೀಗ ವೈರಲ್ ಆಗಿದೆ.
Recommended Video
ಮಲೇಷಿಶಿಯಾದಲ್ಲಿ ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕು ಮೂಲದ ವಿದ್ಯಾರ್ಥಿ ಭಾರ್ಗವ್ ರಾಮ್ ಸಿಲುಕಿಕೊಂಡಿದ್ದಾರೆ. ವಿದ್ಯಾಭ್ಯಾಸದ ಸಲುವಾಗಿ ಮಲೇಷಿಯಾಗೆ ಹೋಗಿದ್ದವರು ಅಲ್ಲೇ ಲಾಕ್ ಆಗಿದ್ದಾರೆ. ಇದೀಗ ವಿಡಿಯೋ ಮೂಲಕ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.

ಮಲೇಷಿಯಾದಲ್ಲಿ ಸಿಲುಕಿಕೊಂಡ ಕೋಲಾರದ ಭಾರ್ಗವ್
ವಿದ್ಯಾಭ್ಯಾಸದ ಸಲುವಾಗಿ ಕೋಲಾರದ ಶ್ರೀನಿವಾಸಪುರದ ಭಾರ್ಗವ್ ಮಲೇಷಿಯಾಗೆ ಹೋಗಿದ್ದರು. ಆದರೆ ಅಲ್ಲಿ ಲಾಕ್ ಡೌನ್ ಹೇರಿದ್ದರಿಂದ ಕಳೆದ 45 ದಿನಗಳಿಂದ ಅಲ್ಲಿಯೇ ಸಿಲುಕಿಕೊಂಡಿದ್ದಾರೆ. ವಾಪಸ್ ಬರಲೂ ಆಗದೇ ಅಲ್ಲೇ ಪರದಾಡುತ್ತಿದ್ದಾರೆ. "ಇಲ್ಲಿ ಎಲ್ಲದಕ್ಕೂ ಕಷ್ಟವಾಗಿದೆ. ನನ್ನ ರೀತಿಯೇ ಹಲವು ವಿದ್ಯಾರ್ಥಿಗಳು, ಪ್ರವಾಸಿಗರು, ಗರ್ಭಿಣಿಯರು, ವಯಸ್ಸಾದವರು ಇಲ್ಲಿ ಸಿಲುಕಿಕೊಂಡಿದ್ದಾರೆ. ನೆರವಿಗೆ ಬನ್ನಿ" ಎಂದು ಕೇಳಿಕೊಂಡಿದ್ದಾರೆ.

ಊಟ ಮಾಡಲೂ ದುಡ್ಡಿಲ್ಲವೆಂದು ಅಳಲು
45 ದಿನಗಳಿಂದ ಅಲ್ಲಿಯೇ ಉಳಿದುಕೊಂಡಿರುವ ಭಾರ್ಗವ್ ಮೊದಲು ಇರುವ ಸ್ವಲ್ಪ ಹಣದಲ್ಲೇ ವ್ಯವಸ್ಥೆ ಮಾಡಿಕೊಂಡಿದ್ದರು. ಆದರೆ ಅಲ್ಲಿ ಸಾಮಗ್ರಿಗಳು ದುಬಾರಿಯಾಗಿದ್ದು, ಇರುವ ದುಡ್ಡೂ ಖಾಲಿಯಾಗಿದೆ. "ಈಗ ಏನು ಮಾಡಲೂ ತೋಚುತ್ತಿಲ್ಲ. ತುಂಬಾ ಕಷ್ಟ ಅನುಭವಿಸುತ್ತಿದ್ದೇವೆ. ಏನೂ ಸೌಲಭ್ಯ ಸಿಗದೆ ದಿನಕ್ಕೆ ಒಂದು ಬಾರಿ ಊಟ ಮಾಡುತ್ತಿದ್ದೇವೆ" ಎಂದು ವಿಡಿಯೋ ಮಾಡಿದ್ದಾರೆ ಭಾರ್ಗವ್.
"ಕ್ವಾರಂಟೈನ್ ಆಗಲು ಸಿದ್ಧ"
ಕೊರೊನಾ ಲಾಕ್ ಡೌನ್ ಹಿನ್ನೆಲೆ ಅಂತರರಾಷ್ಟ್ರೀಯ ವಿಮಾನ ಯಾನ ಬಂದ್ ಆಗಿದೆ. "ನಮ್ಮನ್ನು ಹೇಗಾದರೂ ವಾಪಸ್ ಕರೆಸಿಕೊಳ್ಳಿ, ನಾವು ಕ್ವಾರಂಟೈನ್ ಆಗಲು ಸಿದ್ಧ" ಎಂದು ಭಾರ್ಗವ್ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಈ ಮೂಲಕ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.

ಶ್ರೀನಿವಾಸಪುರದಲ್ಲಿ ಪೋಷಕರ ಆತಂಕ
ತಮ್ಮ ಮಗನ ಅಳಲು ನೋಡಿ ಭಾರ್ಗವ್ ರಾಮ್ ಪೋಷಕರು ಆತಂಕಗೊಂಡಿದ್ದಾರೆ. ವಿಮಾನ ವ್ಯವಸ್ಥೆ ಮಾಡಿಕೊಟ್ಟು ಭಾರತಕ್ಕೆ ಕರೆತರುವಂತೆ ಮನವಿ ಮಾಡಿದ್ದಾರೆ. ಸಿಎಂ ಯಡಿಯೂರಪ್ಪ ಹಾಗೂ ಕೇಂದ್ರ ಸರ್ಕಾರ ತಮ್ಮ ನೆರವಿಗೆ ಧಾವಿಸಬೇಕೆಂದು ಕೇಳಿಕೊಂಡಿದ್ದಾರೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ












Click it and Unblock the Notifications