ಮುನಿಯಪ್ಪನನ್ನು ಸೋಲಿಸಲು ನಾವೆಲ್ಲ ಒಂದಾಗಿದ್ದು: ಜೆಡಿಎಸ್ ಶಾಸಕ
ಕೋಲಾರ, ಮೇ 27: ಸತತ ಏಳು ಬಾರಿ ಸಂಸದರಾಗಿ, ಒಮ್ಮೆ ಯುಪಿಎ ಸರ್ಕಾರದಲ್ಲಿ ಕೇಂದ್ರ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಕೋಲಾರದ ಕಾಂಗ್ರೆಸ್ ಮುಖಂಡ ಕೆ.ಎಚ್. ಮುನಿಯಪ್ಪ ಅವರ ಆಘಾತಕಾರಿ ಸೋಲಿಗೆ ಮೈತ್ರಿ ಸರ್ಕಾರದ ಮಿತ್ರಪಕ್ಷಗಳ ಮುಖಂಡರೇ ಕಾರಣಕರ್ತರೇ?
ರಾಜಕೀಯ ವಲಯದಲ್ಲಿ ಈ ವಿಚಾರ ತೀವ್ರ ಚರ್ಚೆಯಲ್ಲಿ ಇರುವಾಗಲೇ ಜೆಡಿಎಸ್ ಶಾಸಕ ಶ್ರೀನಿವಾಸಗೌಡ ಅವರು ಅದನ್ನು ಒಪ್ಪಿಕೊಂಡಿದ್ದಾರೆ.
ಕೆ.ಎಚ್. ಮುನಿಯಪ್ಪ ಅವರನ್ನು ಸೋಲಿಸುವ ಸಲುವಾಗಿಯೇ ನಾವೆಲ್ಲರೂ ಒಂದಾಗಿದ್ದೆವು ಎಂದು ಅವರು ಹೇಳಿಕೆ ನೀಡಿದ್ದಾರೆ.

ಮುನಿಯಪ್ಪ ಅವರನ್ನು ಸೋಲಿಸಲೆಂದೇ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದವರು ಒಂದಾಗಿದ್ದೆವು. ಈಗ ಯಾರೂ ಪಕ್ಷ ಬದಲಿಸುವ ನಿರ್ಧಾರ ಮಾಡಿಲ್ಲ. ಎರಡೂ ಪಕ್ಷದವರು ಆಯಾ ಪಕ್ಷಗಳಲ್ಲಿಯೇ ಮುಂದುವರಿಯಲಿದ್ದಾರೆ. ಎಚ್.ಡಿ. ಕುಮಾರಸ್ವಾಮಿ ಅವರೇ ಐದು ವರ್ಷ ಮುಖ್ಯಮಂತ್ರಿಯಾಗಿ ಅಧಿಕಾರ ಪೂರೈಸಲಿದ್ದಾರೆ ಎಂದು ಶ್ರೀನಿವಾಸಗೌಡ ಹೇಳಿದ್ದಾರೆ.
ಮುನಿಯಪ್ಪ ಅವರು ಕೋಲಾರ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸುವುದರ ವಿರುದ್ಧ ಶ್ರೀನಿವಾಸಗೌಡ, ಕಾಂಗ್ರೆಸ್ ಮುಖಂಡರಾದ ಕೊತ್ತನೂರು ಮಂಜುನಾಥ್, ಎಚ್. ನಾಗೇಶ್ ಮುಂತಾದವರು ಬಹಿರಂಗವಾಗಿಯೇ ಆಕ್ಷೇಪ ವ್ಯಕ್ತಪಡಿಸಿದ್ದರು.
ಮುನಿಯಪ್ಪ ಅವರ ಪರ ಪ್ರಚಾರ ಮಾಡುವಂತೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಸೂಚನೆ ನೀಡಿದ್ದರೂ ಅದಕ್ಕೆ ಕ್ಯಾರೇ ಎನ್ನದೆ ನಿರಾಕರಿಸಿದ್ದರು. ಕೋಲಾರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿಸ್ವಾಮಿ ಅವರ ಗೆಲುವಿಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರ ಕೊಡುಗೆ ದೊಡ್ಡ ಮಟ್ಟದಲ್ಲಿದೆ ಎನ್ನಲಾಗಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications