ಕೋಲಾರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮುನಿಯಪ್ಪನನ್ನು ಸೋಲಿಸಲು ನಾವೆಲ್ಲ ಒಂದಾಗಿದ್ದು: ಜೆಡಿಎಸ್ ಶಾಸಕ

|
Google Oneindia Kannada News

ಕೋಲಾರ, ಮೇ 27: ಸತತ ಏಳು ಬಾರಿ ಸಂಸದರಾಗಿ, ಒಮ್ಮೆ ಯುಪಿಎ ಸರ್ಕಾರದಲ್ಲಿ ಕೇಂದ್ರ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಕೋಲಾರದ ಕಾಂಗ್ರೆಸ್ ಮುಖಂಡ ಕೆ.ಎಚ್. ಮುನಿಯಪ್ಪ ಅವರ ಆಘಾತಕಾರಿ ಸೋಲಿಗೆ ಮೈತ್ರಿ ಸರ್ಕಾರದ ಮಿತ್ರಪಕ್ಷಗಳ ಮುಖಂಡರೇ ಕಾರಣಕರ್ತರೇ?

ರಾಜಕೀಯ ವಲಯದಲ್ಲಿ ಈ ವಿಚಾರ ತೀವ್ರ ಚರ್ಚೆಯಲ್ಲಿ ಇರುವಾಗಲೇ ಜೆಡಿಎಸ್ ಶಾಸಕ ಶ್ರೀನಿವಾಸಗೌಡ ಅವರು ಅದನ್ನು ಒಪ್ಪಿಕೊಂಡಿದ್ದಾರೆ.

ಅಂದು ಹಾಲಿನ ವ್ಯಾಪಾರಿ, ಇಂದು ಕೋಲಾರದ ಬಿಜೆಪಿ ಸಂಸದ! ಅಂದು ಹಾಲಿನ ವ್ಯಾಪಾರಿ, ಇಂದು ಕೋಲಾರದ ಬಿಜೆಪಿ ಸಂಸದ!

ಕೆ.ಎಚ್. ಮುನಿಯಪ್ಪ ಅವರನ್ನು ಸೋಲಿಸುವ ಸಲುವಾಗಿಯೇ ನಾವೆಲ್ಲರೂ ಒಂದಾಗಿದ್ದೆವು ಎಂದು ಅವರು ಹೇಳಿಕೆ ನೀಡಿದ್ದಾರೆ.

we were together to defeat congress muniyappa jds mla srinivas gowda

ಮುನಿಯಪ್ಪ ಅವರನ್ನು ಸೋಲಿಸಲೆಂದೇ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದವರು ಒಂದಾಗಿದ್ದೆವು. ಈಗ ಯಾರೂ ಪಕ್ಷ ಬದಲಿಸುವ ನಿರ್ಧಾರ ಮಾಡಿಲ್ಲ. ಎರಡೂ ಪಕ್ಷದವರು ಆಯಾ ಪಕ್ಷಗಳಲ್ಲಿಯೇ ಮುಂದುವರಿಯಲಿದ್ದಾರೆ. ಎಚ್.ಡಿ. ಕುಮಾರಸ್ವಾಮಿ ಅವರೇ ಐದು ವರ್ಷ ಮುಖ್ಯಮಂತ್ರಿಯಾಗಿ ಅಧಿಕಾರ ಪೂರೈಸಲಿದ್ದಾರೆ ಎಂದು ಶ್ರೀನಿವಾಸಗೌಡ ಹೇಳಿದ್ದಾರೆ.

ಮುನಿಯಪ್ಪ ಅವರು ಕೋಲಾರ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸುವುದರ ವಿರುದ್ಧ ಶ್ರೀನಿವಾಸಗೌಡ, ಕಾಂಗ್ರೆಸ್ ಮುಖಂಡರಾದ ಕೊತ್ತನೂರು ಮಂಜುನಾಥ್, ಎಚ್. ನಾಗೇಶ್ ಮುಂತಾದವರು ಬಹಿರಂಗವಾಗಿಯೇ ಆಕ್ಷೇಪ ವ್ಯಕ್ತಪಡಿಸಿದ್ದರು.

ಕೋಲಾರದಲ್ಲಿ ಮುನಿಯಪ್ಪಗೆ ಹೀನಾಯ ಸೋಲು, ಅರಳಿದ ಕಮಲಕೋಲಾರದಲ್ಲಿ ಮುನಿಯಪ್ಪಗೆ ಹೀನಾಯ ಸೋಲು, ಅರಳಿದ ಕಮಲ

ಮುನಿಯಪ್ಪ ಅವರ ಪರ ಪ್ರಚಾರ ಮಾಡುವಂತೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಸೂಚನೆ ನೀಡಿದ್ದರೂ ಅದಕ್ಕೆ ಕ್ಯಾರೇ ಎನ್ನದೆ ನಿರಾಕರಿಸಿದ್ದರು. ಕೋಲಾರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿಸ್ವಾಮಿ ಅವರ ಗೆಲುವಿಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರ ಕೊಡುಗೆ ದೊಡ್ಡ ಮಟ್ಟದಲ್ಲಿದೆ ಎನ್ನಲಾಗಿದೆ.

English summary
Kolar JDS MLA Srinivas Gowda said that, Congress and JDS leader were worked together to defeat Congress Kolar Lok Sabha candidate KH Muniyappa.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X