ಕೋಲಾರ; ಕಾಡಾನೆ ದಾಳಿಗಿಲ್ಲ ಪರಿಹಾರ, ರೈತರು ಹೈರಾಣ
ಕೋಲಾರ, ಏಪ್ರಿಲ್ 20; ಕೋಲಾರ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಮುಂದುವರೆದಿದೆ. ತಮಿಳುನಾಡು ಅರಣ್ಯದಿಂದ ಜಿಲ್ಲೆಯ ಗಡಿಭಾಗಗಳಿಗೆ ಕಾಡಾನೆಗಳ ದಾಳಿ ಮಾಮೂಲಾಗಿದೆ. ಕಾಡಾನೆಗಳನ್ನು ಹತೋಟಿಗೆ ತರಲು ಶಾಶ್ವತವಾದ ಕ್ರಮಗಳು ಸರ್ಕಾರದಲ್ಲಿ ಇಲ್ಲವಾಗಿದೆ. ಕಾಡಾನೆಗಳ ದಾಳಿ ತಪ್ಪಿಸಲು ಜನರು ನಿರೀಕ್ಷಿಸುತ್ತಿರುವ ಕ್ರಮ ಕೈಗೊಳ್ಳಲು ಅರಣ್ಯ ಇಲಾಖೆ ವಿಫಲವಾಗಿದೆ.
ಒಂದು ಕಾಲದಲ್ಲಿ ಕಾಡಾನೆಗಳು ಅಂದರೆ ಕೋಲಾರ ಜಿಲ್ಲೆಯ ಜನರ ಪಾಲಿಗೆ ಅಪರೂಪವಾಗಿತ್ತು. ಆದರೆ, ಐದಾರು ವರ್ಷದಿಂದೀಚೆಗೆ ಕಾಡಾನೆಗಳು ಅಂತ ಹೆಸರು ಹೇಳಿದರೆ ಈ ಜಿಲ್ಲೆಯ ಗಡಿಭಾಗದ ಜನರು ಬೆಚ್ಚಿ ಬೀಳುತ್ತಾರೆ.
ಮಾಲೂರು ಮತ್ತು ಬಂಗಾರಪೇಟೆ ತಾಲೂಕುಗಳ ಗಡಿಭಾಗದ ಹಳ್ಳಿಗಳಲ್ಲಿ ಕಾಡಾನೆಗಳ ಉಪಟಳ ಮಿತಿ ಮೀರಿದೆ. ಹಳ್ಳಿಗರ ಪ್ರಾಣಕ್ಕೂ ಸಂಚಕಾರ ತಂದಿರುವ ಕಾಡಾನೆಗಳು, ಕೋಟ್ಯಾಂತರ ರೂಪಾಯಿ ಮೌಲ್ಯದ ಬೆಳೆಗಳನ್ನು ಹಾನಿ ಮಾಡುತ್ತಿವೆ.

ಬಂಗಾರಪೇಟೆ ತಾಲೂಕಿನ ಕಾಮಸಮುದ್ರ ಮತ್ತು ಬೂದಿಕೋಟೆ ಹೋಬಳಿಗಳು ತಮಿಳುನಾಡಿನ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿದೆ. ಈ ಮೊದಲು ಅಲ್ಲಿನ ಕಾಡಾನೆಗಳು ಯಾವಾಗಲಾದರು ಒಮ್ಮೆ ಆಹಾರ ಮತ್ತು ನೀರನ್ನು ಹುಡುಕಿಕೊಂಡು ಹಳ್ಳಿಗಳಿಗೆ ದಾಳಿಯಿಡುತ್ತಿದ್ದವು.
ಆದರೆ, ಇತ್ತೀಚಿನ ವರ್ಷಗಳಲ್ಲಿ ಈ ಕಾಡಾನೆಗಳ ಹಾವಳಿ ನಿರಂತರವಾಗಿದ್ದು, ಇಲ್ಲಿಯೇ ಬೀಡು ಬಿಟ್ಟಿವೆ. ಈ ಭಾಗದ ಜನರ ಪ್ರಾಣವನ್ನು ತೆಗೆಯುವ ಹಂತಕ್ಕೂ ತಲುಪಿರುವ ಕಾಡಾನೆಗಳಿಂದ ರೈತರು ಬೆಳೆಗಳನ್ನು ಕಳೆದುಕೊಂಡಿದ್ದಾರೆ.

ನಮ್ಮ ಜಿಲ್ಲೆಯ ಗಡಿಭಾಗದ ಹಳ್ಳಿಗಳಿಗೆ ದಾಳಿ ನಡೆಸುತ್ತಿರುವ ಕಾಡಾನೆಗಳನ್ನು ನಿಯಂತ್ರಿಸಲು ಜಿಲ್ಲಾಡಳಿತವು ಕೈಲಾದ ಕ್ರಮವನ್ನು ಜರುಗಿಸಿದೆ. ಅರಣ್ಯ ಪ್ರದೇಶದ 55 ಕಿ. ಮೀ. ದೂರದವರೆಗೂ ಸದ್ಯಕ್ಕೆ ಸೋಲಾರ್ ತಂತಿಬೇಲಿಯನ್ನು ಅಳವಡಿಸುವುದಕ್ಕೆ ತೀರ್ಮಾನಿಸಲಾಗಿದ್ದು, ಶಾಶ್ವತ ಕ್ರಮವಾಗಿ ಕಾರಿಡಾರ್ ನಿರ್ಮಿಸಲು ಸರ್ಕಾರಕ್ಕೆ ಮನವಿ ಮಾಡಲಾಗಿದೆ.
ಒಟ್ಟಿನಲ್ಲಿ ಅನೇಕ ಸಮಸ್ಯೆಗಳಿಂದ ತತ್ತರಿಸುತ್ತಿರುವ ಕೋಲಾರ ಜಿಲ್ಲೆಯ ಕೃಷಿಕರಿಗೆ ಇದೀಗ ಕಾಡಾನೆಯ ಹಾವಳಿಯನ್ನು ಎದುರಿಸುವುದು ಸವಾಲಾಗಿದೆ. ರಾಜ್ಯ ಸರ್ಕಾರವು ಈ ನಿಟ್ಟಿನಲ್ಲಿ ಸೂಕ್ತ ಕ್ರಮವನ್ನು ಜರುಗಿಸಬೇಕಾಗಿದೆ.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications