ವಿಶ್ವ ಪರಿಸರ ದಿನ: ಕೋಲಾರ ಜಿಲ್ಲೆಗೆ 5 ಲಕ್ಷ ಔಷಧಿ ಸಸಿ
ಕೋಲಾರ, ಜೂನ್ 4: ''ಕೋಲಾರ ಜಿಲ್ಲೆಗೆ 5 ಲಕ್ಷ ಔಷಧಿ ಗುಣವುಳ್ಳ ಸಸಿಗಳನ್ನು ನೀಡಲಾಗುವುದು. ಸಸಿಗಳನ್ನು ಬೆಳೆಸುವುದರಿಂದ ಪರಿಸರ ಸಂರಕ್ಷಣೆ ಮಾಡಬಹುದು ಹಾಗೂ ವಾತಾವರಣವು ತಂಪಾಗಿರುತ್ತದೆ'' ಎಂದು ಕೋಲಾರ ಜಿಲ್ಲೆಯ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷ ಸಾಮ ಪ್ರಸನ್ನ ಕುಮಾರ್ ಅವರು ತಿಳಿಸಿದರು
ಕೋಲಾರ ತಾಲ್ಲೂಕು ಸಭಾಂಗಣದಲ್ಲಿ ಕರ್ನಾಟಕ ಸರ್ಕಾರ, ಕರ್ನಾಟಕ ಜೀವ ವೈವಿಧ್ಯ ಮಂಡಳಿ, ಜಿಲ್ಲಾ ಪಂಚಾಯತ್ ಮತ್ತು ಕೋಲಾರ ತಾಲ್ಲೂಕು ಪಂಚಾಯಿತಿ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಜನತಾ ಜೀವ ಜಾಗೃತಿ ಅಭಿಯಾನ ಕಾರ್ಯಗಾರದ ಆಧ್ಯಕ್ಷತೆಯನ್ನು ವಹಿಸಿ ಪ್ರಸನ್ನ ಅವರು ಮಾತನಾಡಿದರು.
ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಸಹಾಯಕ ಸಂಶೋಧಕರಾದ ಪ್ರೀತಂ ಮಾತನಾಡಿ, ''ಪ್ರತಿ ವರ್ಷ ಮೇ 22 ರಂದು ಜೀವ ವೈವಿಧ್ಯ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಕೋಲಾರದ ಅಂತರಗಂಗೆಯನ್ನು ಶತಶೃಂಗ ಶ್ರೇಣಿ ಎಂದು ಸಹ ಕರೆಯಲಾಗುತ್ತದೆ. ಈ ಬೆಟ್ಟದಲ್ಲಿ ಆನೇಕ ಗುಹೆಗಳು, ವಿವಿಧ ರೀತಿಯ ಪ್ರಾಣಿ ಸಂಕುಲಗಳು ಹಾಗೂ ಸಸ್ಯ ಸಂಕುಲ ನೆಲಸಿವೆ. ಅಂತರಗಂಗೆ ಬೆಟ್ಟವನ್ನು ಜೀವ ವೈವಿಧ್ಯ ಪಾರಂಪರಿಕ ತಾಣ ಎಂದು ಮುಂದಿನ ದಿನಗಳಲ್ಲಿ ಘೋಷಣೆ ಮಾಡುವ ಸಾಧ್ಯತೆ ಇದೆ'' ಎಂದರು.

ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜೀವ ವೈವಿಧ್ಯ ಸಮಿತಿಯನ್ನು ರಚಿಸಲಾಗಿದೆ. ಇವರು ಪ್ರತಿ ಗ್ರಾಮದ ವಿಶಿಷ್ಠ ಪ್ರಾಣಿ ಸಂಕುಲ ಹಾಗೂ ಸಸ್ಯ ರಾಶಿಯನ್ನು ಗುರುತಿಸಿ ಅದನ್ನು ಜನತಾ ಜೀವ ದಾಖಲಾತಿಯಲ್ಲಿ ನೋಂದಣಿ ಮಾಡಬೇಕು. ಆ ದಾಖಲೆಗಳು ಅಪರೂಪದ ಪೀಳಿಗೆಗಳನ್ನು ಸಂರಕ್ಷಣೆ ಮಾಡಲು ಸಹಕಾರಿಯಾಗುತ್ತವೆ. ಜಿಲ್ಲೆಯಲ್ಲಿ ಕೃಷ್ಣಮೃಗಳು ಹೆಚ್ಚಿನ ಸಂಖ್ಯೆಯಲ್ಲಿ ಇದ್ದು ಇದರ ಸಂರಕ್ಷಣೆ ಮಾಡಬೇಕು ಎಂದು ಹೇಳಿದರು.
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾದ ಹರ್ಷವರ್ದನ್ ಅವರು ಮಾತನಾಡಿ, ಮುಳಬಾಗಿಲಿನ ಹನುಮನಹಳ್ಳಿ ಗ್ರಾಮದ ಗುಹೆಗಳಲ್ಲಿ ಎಲೆ ಮೂಗಿನ ಬಾವುಲಿ ಕಂಡುಬಂದಿದೆ. ಇದು ಪ್ರಪಂಚದಲ್ಲಿಯೇ ಅಪರೂಪದ ಪ್ರಾಣಿಯಾಗಿದ್ದು ಇದರ ಸಂರಕ್ಷಣೆ ಮಾಡಲಾಗಿದೆ ಹಾಗೂ ಕೆಂಪು ಹುಣಸೆ (ಸಿಹಿ ಹುಣಸೆ) ಇದನ್ನು ಜಿ ಟ್ಯಾಗ್ಗೆ ಶಿಪಾರಸ್ಸು ಮಾಡಬಹುದು ಎಂದು ತಿಳಿಸಿದರು.

ಗ್ರಾಮ ಪಂಚಾಯಿತಿಗಳು ಸ್ಥಳೀಯ ತಳಿಗಳನ್ನು ಸಂರಕ್ಷಣೆ ಮಾಡಿ ರೈತರು ತಮ್ಮ ಹೊಲಗಳಲ್ಲಿ ಬೆಳೆಯುವಂತೆ ಪ್ರೋತ್ಸಾಹ ನೀಡಬೇಕು. ಇದರಿಂದ ಅದಾಯ ಕೂಡ ಸಿಗುತ್ತದೆ. ಜೀವ ವೈವಿಧ್ಯ ನಿರ್ವಹಣಾ ಸಮಿತಿಯು ಜಿಲ್ಲೆಯಲ್ಲಿ 11 ಗ್ರಾಮಗಳನ್ನು ಸರ್ವೆ ಮಾಡಿದ್ದಾರೆ. ಅದರಲ್ಲಿ 8 ಜೀವ ವೈವಿಧ್ಯಗಳು ದಾಖಲಾಗಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯ ಎಲ್ಲಾ ಗ್ರಾಮಗಳನ್ನು ಸರ್ವೆಗೆ ಒಳಪಡಿಸುತ್ತೇವೆ ಎಂದು ತಿಳಿಸಿದರು.
ಪರಿಸರ ಪ್ರೇಮಿ ತ್ಯಾಗರಾಜು ಅವರು ಮಾತನಾಡಿ ರಾಸಾಯನಿಕಗಳನ್ನು ಬಳಸಿ ಕೃಷಿ ಮಾಡುವುದರಿಂದ ಭೂಮಿಯ ಫಲವತ್ತತೆಯನ್ನು ಕಳೆದುಕೊಳ್ಳುತ್ತದೆ ಇದರ ಬದಲು ಜೈವಿಕ ಕೃಷಿ ಪದ್ದತಿಯನ್ನು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. (ಮಾಹಿತಿ ಕೃಪೆ: ವಾರ್ತಾ ಇಲಾಖೆ)
-
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ












Click it and Unblock the Notifications