ಈ ಬಿಜೆಪಿ ಅವಧಿಯಲ್ಲಿ ಯಾಕಾದರೂ ಶಾಸಕನಾದೆನೋ ಎನ್ನುವ ನೋವು ಕಾಡುತ್ತಿದೆ!
ಕೋಲಾರ, ಸೆ 5: "ಈ ಬಿಜೆಪಿ ಅವಧಿಯಲ್ಲಿ ಯಾಕಾದರೂ ಶಾಸಕನಾದೆನೋ ಎನ್ನುವ ನೋವು ಕಾಡುತ್ತಿದೆ"ಎಂದು ಮಾಲೂರು ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ಬೇಸರ ವ್ಯಕ್ತ ಪಡಿಸಿದ್ದಾರೆ.
Recommended Video
"ಅಧಿಕಾರದ ದುರಾಸೆಯಿಂದ ಅಧಿಕಾರಕ್ಕೆ ಬಂದಿರುವ ಯಡಿಯೂರಪ್ಪನವರ ನೇತೃತ್ವದ ಸರಕಾರ, ಅಭಿವೃದ್ದಿ ಕೆಲಸಕ್ಕೆ ಚಿಕ್ಕಾಸನ್ನೂ ಬಿಡುಗಡೆ ಮಾಡುತ್ತಿಲ್ಲ"ಎಂದು ನಂಜೇಗೌಡ್ರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
"ಒಂದು ಆರ್ ಒ ಪ್ಲಾಂಟ್, ಬೀದಿ ದೀಪ ಅಳವಡಿಸಲು ನನ್ನಿಂದ ಸಾಧ್ಯವಾಗುತ್ತಿಲ್ಲ. ಯಾವುದಕ್ಕೂ ಹಣವನ್ನು ಬಿಡುಗಡೆ ಮಾಡುತ್ತಿಲ್ಲ. ಸ್ವಾಭಾವಿಕವಾಗಿ, ಬಿಜೆಪಿ ಸರಕಾರದ ವೇಳೆ ಯಾಕಾದರೂ ಶಾಸಕನಾದೆ ಎನ್ನುವ ನೋವು ಕಾಡುತ್ತಿದೆ"ಎಂದು ನಂಜೇಗೌಡ ಹೇಳಿದ್ದಾರೆ.

"ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರಕಾರದ ಆರಂಭದಲ್ಲಿ ದಾಖಲೆಯ ಅನುದಾನವನ್ನು ಕ್ಷೇತ್ರಕ್ಕೆ ಮಂಜೂರು ಮಾಡಿಸಿದ್ದೆ. ಆದರೆ, ಸರಕಾರ ಪತನಗೊಂಡಿತು. ಎಲ್ಲಾ ಬಿಜೆಪಿಯ ದುರಾಸೆಯಿಂದ. ಈಗ ಮಂಜೂರಾಗಿದ್ದ ಹಣ ಬಿಡುಗಡೆಯಾಗುತ್ತಿಲ್ಲ"ಎಂದು ನಂಜೇಗೌಡರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಮಾಲೂರಿನ, ಹಾಲು ಉತ್ಪಾದಕರ ಮತ್ತು ಮಹಿಳಾ ಸಂಘದ ಸದಸ್ಯರಿಗೆ ಸಾಲ ವಿತರಣೆ ಮಾಡಿ ಮಾತನಾಡುತ್ತಿದ್ದ ನಂಜೇಗೌಡ, "ಈಗ ರಾಜ್ಯ ಸರಕಾರ ತೀವ್ರ ಆರ್ಥಿಕ ಸಮಸ್ಯೆಯನ್ನು ಎದುರಿಸುತ್ತಿದೆ. ಮಂಜೂರಾಗಿರುವ ಯೋಜನೆಗಳಿಗೆ ಹಣ ಬಿಡುಗಡೆ ಮಾಡಲು ಸರಕಾರದಲ್ಲಿ ದುಡ್ಡಿಲ್ಲ"ಎಂದು ಆರೋಪಿಸಿದ್ದಾರೆ.
"ಸರಕಾರ ನನ್ನ ಕ್ಷೇತ್ರಕ್ಕೆ ಹಣ ನೀಡದಿದ್ದರೂ, ಡಿಸಿಸಿ ಬ್ಯಾಂಕುಗಳು ಸಾಲ ನೀಡುತ್ತಿರುವುದು ಸಮಾಧಾನದ ವಿಷಯ. ಹಾಲು ಉತ್ಪಾದಕರಿಗೂ ಬ್ಯಾಂಕ್ ಸಾಲ ನೀಡುತ್ತಿರುವುದು ಸಮಾಧಾನಕರ ವಿಚಾರ"ಎಂದು ಶಾಸಕ ಕೆ.ವೈ.ನಂಜೇಗೌಡ ಹೇಳಿದ್ದಾರೆ.
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply












Click it and Unblock the Notifications