"ಎಸ್ಎಸ್ಎಲ್ ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳಿಲ್ಲ"
ಕೋಲ್ಕತ್ತಾ, ನವೆಂಬರ್.11: ಪಶ್ಚಿಮ ಬಂಗಾಳದಲ್ಲಿ 2020-21ನೇ ಶೈಕ್ಷಣಿಕ ಸಾಲಿನಲ್ಲಿ 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಯಾವುದೇ ರೀತಿ ಪರೀಕ್ಷೆಗಳು ಇರುವುದಿಲ್ಲ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ.
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹಿನ್ನೆಲೆ ವಿದ್ಯಾರ್ಥಿಗಳು ಬೋರ್ಡ್ ಪರೀಕ್ಷೆಗಳನ್ನು ಎದುರಿಸದೇ ಸಾಮಾನ್ಯ ಪರೀಕ್ಷೆಗಳನ್ನೇ ಬರೆದು ಕನಿಷ್ಠ ಅಂಕಗಳಿಂದ ಉತ್ತೀರ್ಣರಾದರೆ ಸಾಕಾಗುತ್ತದೆ. 2021ನೇ ಸಾಲಿನಲ್ಲಿ ಈ ಸಾಮಾನ್ಯ ಪರೀಕ್ಷೆಗಳನ್ನು ನಡೆಸಲಾಗುತ್ತದೆ.
ಪಶ್ಚಿಮ ಬಂಗಾಳದಲ್ಲಿ ಎದುರಾಗಿರುವ ಕೊವಿಡ್-19 ದುಸ್ಥಿತಿ ನಡುವೆ 10 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಮುಖ್ಯ ಪರೀಕ್ಷೆ ನಡೆಸದಿರುವುದಕ್ಕೆ ಶಿಕ್ಷಣ ಇಲಾಖೆಯು ತೀರ್ಮಾನಿಸಿರುವ ಬಗ್ಗೆ ಸಿಎಂ ಮಮತಾ ಬ್ಯಾನರ್ಜಿ ಮಾಹಿತಿ ನೀಡಿದ್ದಾರೆ.

ನವೆಂಬರ್.15ರ ನಂತರ ಶಾಲೆಗಳು ಪುನಾರಂಭ:
ದೇಶಾದ್ಯಂತ ಕಾಲೇಜುಗಳನ್ನು ಆರಂಭಿಸುವುದಕ್ಕೆ ಈಗಾಗಲೇ ಯುಜಿಸಿ ಕೊವಿಡ್-19 ನಿಯಂತ್ರಣ ಮತ್ತು ನಿರ್ವಹಣೆ ಕುರಿತು ಮಾರ್ಗಸೂಚಿಗಳನ್ನು ಹೊರಡಿಸಿದೆ. ಪಶ್ಚಿಮ ಬಂಗಾಳದಲ್ಲಿ ನವೆಂಬರ್.15ರ ಕಾಳಿ ಪೂಜೆ ಬಳಿಕ ಶಾಲಾ-ಕಾಲೇಜುಗಳ ಪುನಾರಂಭದ ಬಗ್ಗೆ ತೀರ್ಮಾನಿಸಲಾಗುತ್ತದೆ. ನವೆಂಬರ್.15ರ ವೇಳೆಗೆ ರಾಜ್ಯದಲ್ಲಿನ ಕೊರೊನಾವೈರಸ್ ಸೋಂಕಿನ ಪರಿಸ್ಥಿತಿ ಮತ್ತು ಸೋಂಕಿತ ಪ್ರಮಾಣ ಗಮನದಲ್ಲಿಟ್ಟುಕೊಂಡು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಬುಧವಾರದ ಅಂಕಿ-ಅಂಶಗಳ ಪ್ರಕಾರ, 4,13,112 ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳಿವೆ. ರಾಜ್ಯದಲ್ಲಿ ಈವರೆಗೂ 3,72,265 ಸೋಂಕಿತರು ಗುಣಮುಖರಾಗಿದ್ದು, 33,444 ಸಕ್ರಿಯ ಪ್ರಕರಣಗಳಿವೆ. ಮಹಾಮಾರಿಗೆ ಈವರೆಗೂ 7403 ಮಂದಿ ಬಲಿಯಾಗಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications