ಪಶ್ಚಿಮ ಬಂಗಾಳದಲ್ಲಿ ದೀದಿ ಸರ್ಕಾರದ 43 ಸಚಿವರ ಪ್ರಮಾಣವಚನ
ಕೋಲ್ಕತ್ತಾ, ಮೇ 10: ಪಶ್ಚಿಮ ಬಂಗಾಳದಲ್ಲಿ ಮೂರನೇ ಅವಧಿಗೆ ಸರ್ಕಾರ ರಚಿಸುತ್ತಿರುವ ಟಿಎಂಸಿ ಮುಖ್ಯಸ್ಥೆ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಂಪುಟದ 43 ಮಂದಿ ಸಚಿವರು ಸೋಮವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಕೋಲ್ಕತ್ತಾದಲ್ಲಿ ಇರುವ ರಾಜಭವನದಲ್ಲಿ ಬೆಳಗ್ಗೆ 10.45ರ ವೇಳೆಗೆ ರಾಜ್ಯಪಾಲರಾದ ಜಗದೀಪ್ ಧಂಕರ್ ಅವರು ನೂತನ ಸಚಿವರಿಗೆ ಪ್ರಮಾಣವಚನ ಬೋಧಿಸಲಿದ್ದಾರೆ. ಕಳೆದ ಮೇ 5ರಂದಷ್ಟೇ ರಾಜ್ಯದ ಮುಖ್ಯಮಂತ್ರಿ ಆಗಿ ಮಮತಾ ಬ್ಯಾನರ್ಜಿ ಪದಗ್ರಹಣ ಮಾಡಿದ್ದರು.
ರಾಜ್ಯದ 43 ನೂತನ ಸಚಿವರ ಪೈಕಿ 25 ಮಂದಿ ಚಿರಪರಿಚಿತರಿಗೆ ಸಚಿವ ಸ್ಥಾನ ನೀಡಿದ್ದರೆ,18 ಹೊಸ ಮುಖಗಳಿಗೆ ಆದ್ಯತೆ ನೀಡಲಾಗಿದೆ. ಟಿಎಂಸಿ ಹಿರಿಯ ಶಾಸಕ ಸುಬ್ರತ್ ಮುಖರ್ಜಿ, ಪಾರ್ಥ ಚಟರ್ಜಿ, ಫಿರ್ಯಾದ್ ಹಕೀಂ, ಅರೂಪ್ ಬಿಸ್ವಾಸ್, ಸುಜಿತ್ ಬೋಸ್, ಚಂದ್ರಿಮಾ ಭಟ್ಟಾಚಾರ್ಯ ಮತ್ತು ಶಶಿ ಪಂಜಾ ಅವರಿಗೆ ಮತ್ತೊಮ್ಮೆ ಸಚಿವ ಸ್ಥಾನದ ಅವಕಾಶ ನೀಡಲಾಗಿದೆ.

ದೀದಿ ಸಂಪುಟದಲ್ಲಿ ಯಾರಿಗೆಲ್ಲ ಅವಕಾಶ?:
ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ ರಾಜ್ಯಸಭಾ ಸದಸ್ಯ ಮನಸ್ ಭುವಾನ್ ಅವರಿಗೂ ಸಂಪುಟದಲ್ಲಿ ಸ್ಥಾನ ಕಲ್ಪಿಸಲಾಗಿದೆ. ಸುವೇಂದು ಅಧಿಕಾರಿ ಜಿಲ್ಲೆಯಲ್ಲಿ ಗೆಲುವು ದಾಖಲಿಸಿದ ಅಖಿಲ್ ಗಿರಿ ಹಾಗೂ ಮತ್ತೊಬ್ಬ ಬಂಡಾಯ ನಾಯಕ ರಜಿಬ್ ಬ್ಯಾನರ್ಜಿ ಅವರ ಹೌರಾ ಕ್ಷೇತ್ರದಲ್ಲಿ ಪಕ್ಷವನ್ನು ಗೆಲ್ಲಿಸಿದ ಶಾಸಕ ಅರುಪ್ ರಾಯ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗಿದೆ. ಇವರ ಜೊತೆ ಮೊದಲ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿದ ಸ್ಟಾರ್ ನಟ ಬಿರ್ಬಹಾ ಹಂಸ್ದಾ ಅವರಿಗೂ ಸಚಿವ ಸ್ಥಾನ ನೀಡಲಾಗಿದೆ.
ಬಂಗಾಳದಲ್ಲಿ ದೀದಿಗೆ ಫುಲ್ ಮಾರ್ಕ್ಸ್:
ಪಶ್ಚಿಮ ಬಂಗಾಳದಲ್ಲಿ ನಡೆದ 294 ವಿಧಾನಸಭೆ ಕ್ಷೇತ್ರಗಳ ಪೈಕಿ 213 ಸ್ಥಾನಗಳಲ್ಲಿ ಟಿಎಂಸಿ ಜಯಭೇರಿ ಬಾರಿಸಿದೆ. ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ವಿರುದ್ಧ ಸಮರ ಸಾರಿದ್ದ ಬಿಜೆಪಿ ಮೊದಲ ಬಾರಿಗೆ 77 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಮೂರನೇ ಬಾರಿ ದಿಗ್ವಿಜಯ ಸಾಧಿಸಿರುವ ದೀದಿ ರಾಜ್ಯದ ಮುಖ್ಯಮಂತ್ರಿ ಆಗಿ ಈಗಾಗಲೇ ಪ್ರಮಾಣವಚನ ಸ್ವೀಕರಿಸಿದ್ದು, ಸೋಮವಾರದ ಸರ್ಕಾರದ 43 ಸಚಿವರು ಪದಗ್ರಹಣ ಮಾಡಲಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications