ನಟಿ ಕಮ್ ಟಿಎಂಸಿ ಸಂಸದೆ ನುಸ್ರತ್ ಜಹಾನ್ ಆಸ್ಪತ್ರೆಗೆ ದಾಖಲು
ಕೋಲ್ಕತಾ, ನವೆಂಬರ್ 18: ಬೆಂಗಾಲಿ ನಟಿ, ತೃಣಮೂಲ ಕಾಂಗ್ರೆಸ್ ಸಂಸದೆ ನುಸ್ರತ್ ಜಹಾನ್ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಮವಾರದಂದು ಆಕೆಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಲಾಯಿತು ಎಂದು ಕುಟುಂಬಸ್ಥರು ಹೇಳಿದರು.
ತೃಣಮೂಲ ಕಾಂಗ್ರೆಸ್ ನಾಯಕಿ ಬಸಿರ್ ಹಾತ್ ಕ್ಷೇತದ ಸಂಸದೆ ಜಹಾನ್
ಅವರನ್ನು ಭಾನುವಾರ ರಾತ್ರಿ 9.30ಕ್ಕೆ ಆಸ್ಪತ್ರೆಗೆ ದಾಖಲಿಸಲಾಯಿತು. ಆಕೆಗೆ ಕೆಲಕಾಲದಿಂದ ಆಸ್ತಮಾದಿಂದ ಬಳಲುತ್ತಿದ್ದರು. ಸದ್ಯ ಆಕೆಗೆ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಆತಂಕ ಪಡಬೇಕಾಗಿಲ್ಲ ಎಂದು ಕುಟುಂಬದವರು ಹೇಳಿದ್ದಾರೆ.

2019ರಲ್ಲಿ ಸಕ್ರಿಯ ರಾಜಕೀಯಕ್ಕೆ ಎಂಟ್ರಿ ಕೊಟ್ಟ ನುಸ್ರತ್ ಅವರು ಲೋಕಸಭೆ ಚುನಾವಣೆಯಲ್ಲಿ ಬಸಿರ್ ಹಾತ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಜಯ ದಾಖಲಿಸಿದರು. ತಮ್ಮ ಬಹುಕಾಲದ ಗೆಳೆಯ ನಿಖಿಲ್ ಜೈನ್ ರನ್ನು ಟರ್ಕಿಯಲ್ಲಿ ವಿವಾಹವಾದರು.
ಲೋಕಸಭೆಯಲ್ಲಿ ಸಾಂಪ್ರದಾಯಿಕ ಉಡುಗೆ ತೊಟ್ಟು ಹಣೆಗೆ ಸಿಂಧೂರ ಇಟ್ಟುಕೊಂಡು, ಮಂಗಳಸೂತ್ರ ಧರಿಸಿ ಹಿಂದೂ ಸಂಸ್ಕೃತಿಯನ್ನು ಎತ್ತಿ ಹಿಡಿದರು. ಇದರಿಂದ ಮುಸ್ಲಿಂ ಮೌಲ್ವಿಗಳ ಕೆಂಗಣ್ಣಿಗೆ ಗುರಿಯಾದರು. ಸ್ನೇಹಿತೆಯರಾದ ನುಸ್ರತ್ ಪಶ್ಚಿಮ ಬಂಗಾಳದ ಬಸಿರ್ಹತ್ ಕ್ಷೇತ್ರದಿಂದ ಗೆದ್ದಿದ್ದರೆ, ಮಿಮಿ ಜಾದವಪುರ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿದ್ದರು. ಸಂಸತ್ಗೆ ಮೊದಲ ದಿನ ಪ್ರವೇಶಿಸಿದ ಸಂದರ್ಭದಲ್ಲಿ ಇಬ್ಬರೂ ಆಧುನಿಕ ಉಡುಗೆ ಧರಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶಕ್ಕೆ ಒಳಗಾಗಿತ್ತು. ಮೊದಲ ಬಾರಿಗೆ ಸಂಸದೆಯರಾಗಿ ಆಯ್ಕೆಯಾದ ಬಳಿಕ ಸಂಸತ್ ಮುಂದೆ ಚಿತ್ರಗಳನ್ನು ತೆಗೆಸಿಕೊಂಡಿದ್ದ ಇಬ್ಬರೂ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಪ್ರಜಾಪ್ರಭುತ್ವದ ದೇಗುಲ ಎಂದೇ ಪರಿಗಣಿಸಿರುವ ಸಂಸತ್ ಒಳಗೆ ಪ್ರವೇಶಿಸುವಾಗ ಸಭ್ಯ ಹಾಗೂ ಸೂಕ್ತ ಉಡುಪುಗಳನ್ನು ಧರಿಸಬೇಕು ಎಂದು ಅಸಮಾಧಾನ ವ್ಯಕ್ತವಾಗಿತ್ತು.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications