ಮಮತಾ ಬ್ಯಾನರ್ಜಿ ಘೋಷಿಸಿದ ಅಪರೂಪದ ಆಫರ್: ಇದರಿಂದ ಜನಸಾಮಾನ್ಯರಿಗೆ ಏನು ಲಾಭ?
ಕೋಲ್ಕತ್ತಾ, ಮಾರ್ಚ್ 6: ಚುನಾವಣೆಯ ಹೊಸ್ತಿಲಲ್ಲಿರುವ ಪಶ್ಚಿಮ ಬಂಗಾಳದಲ್ಲಿ ಪ್ರಚಾರ ಕಾರ್ಯ ವೇಗ ಪಡೆದುಕೊಂಡಿದೆ. ಪ್ರಮುಖ ಪಕ್ಷಗಳು ಟಿಕೆಟ್ ಹಂಚಿಕೆಯಲ್ಲಿ ನಿರತರಾಗಿದ್ದಾರೆ.
ನಗರದ ಕಾಳಿಘಾಟ್ ನಲ್ಲಿರುವ ಕಿರಿದಾದ ಕೊಠಡಿಯಲ್ಲಿ ಮಮತಾ ಬ್ಯಾನರ್ಜಿಯವರು ತಮ್ಮ ಪಕ್ಷವಾದ ತೃಣಮೂಲ ಕಾಂಗ್ರೆಸ್ಸಿನ 291 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ.
ಪಾರ್ಥ ಚಟ್ಟೋಪಾಧ್ಯಾಯ, ಅಮಿತ್ ಮಿತ್ರಾ ಸೇರಿದಂತೆ ಇಪ್ಪತ್ತು ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಲಾಗಿದೆ. ಈ ಲೀಡರ್ಗಳು ಚುನಾವಣೆಯ ವೇಳೆ ಪಕ್ಷದ ಇಮೇಜ್ ಅನ್ನು ಡ್ಯಾಮೇಜ್ ಮಾಡುವುದಾಗಲಿ ಅಥವಾ ಬೇರೊಂದು ಪಕ್ಷಕ್ಕೆ ಸೇರದಂತೆ ತಡೆಯಲು ಮಮತಾ ಹೊಸ ಭರವಸೆಯನ್ನು ನೀಡಿದ್ದಾರೆ.
"ವಯಸ್ಸು ಮತ್ತು ಬೇರೆ ಬೇರೆ ಕಾರಣಗಳಿಂದ ಅವರಿಗೆ ಟಿಕೆಟ್ ನಿರಾಕರಿಸಲಾಗಿದೆ" ಎಂದು ಮಮತಾ ಬ್ಯಾನರ್ಜಿ ಹೇಳಿದ್ದು, ಹಿರಿಯ ನಾಯಕರಿಗಾಗಿ ವಿಧಾನ ಪರಿಷತ್ ನಿರ್ಮಿಸುವುದಾಗಿ ಹೇಳಿರುವುದು ಹಲವು ಚರ್ಚೆಗೆ ನಾಂದಿ ಹಾಡಿದೆ.

ಬಿಜೆಪಿಯಲ್ಲಿ 75 ವರ್ಷ ಮೇಲ್ಪಟ್ಟವರಿಗೆ ಟಿಕೆಟ್ ನೀಡುವ ಪದ್ದತಿಯಿಲ್ಲ
ಬಿಜೆಪಿಯಲ್ಲಿ 75 ವರ್ಷ ಮೇಲ್ಪಟ್ಟವರಿಗೆ ಟಿಕೆಟ್ ನೀಡುವ ಪದ್ದತಿಯಿಲ್ಲ. ಈ ಬಾರಿ ತೃಣಮೂಲ ಕಾಂಗ್ರೆಸ್ ಟಿಕೆಟ್ ನೀಡುವಾಗ 80 ವರ್ಷ ಮೇಲ್ಪಟ್ಟವರನ್ನು ಪರಿಗಣಿಸಲಿಲ್ಲ. ಈ ವಿದ್ಯಮಾನ ಪಕ್ಷಕ್ಕೆ ಚುನಾವಣೆಯ ಹೊತ್ತಿಲಲ್ಲಿ ಸಂಕಷ್ಟ ತಂದೊಡ್ಡುವ ಸಾಧ್ಯತೆಯಿದೆ ಎನ್ನುವ ಮಾಹಿತಿಯ ಮೇರೆಗೆ, ಇಂತಹ ನಾಯಕರನ್ನು ಹಿಡಿದಿಟ್ಟುಕೊಳ್ಳಲು ವಿಧಾನ ಪರಿಷತ್ ನಿರ್ಮಿಸುವ ಭರವಸೆಯನ್ನು ಮಮತಾ ನೀಡಿದ್ದಾರೆ.

ಮಮತಾ ಅವರ ಈ ನಿರ್ಧಾರವನ್ನು ಬಿಜೆಪಿ ಮತ್ತು ಎಡಪಕ್ಷಗಳಿಂದ ವ್ಯಂಗ್ಯ
75 ವರ್ಷ ಮೇಲ್ಪಟ್ಟವರಿಗೆ ಬಿಜೆಪಿಯಲ್ಲಿ ಮಾರ್ಗದರ್ಶಕ ಮಂಡಳಿಯಲ್ಲಿ ಸ್ಥಾನ ನೀಡಲಾಗುತ್ತದೆ. ಇದನ್ನು ಬಿಜೆಪಿಯ ವೃದ್ದಾಶ್ರಮ ಎಂದು ಅಣಕವಾಡಲಾಗುತ್ತದೆ. ಟಿಎಂಸಿ ಟಿಕೆಟ್ ವಂಚಿತರಿಗಾಗಿ ವಿಧಾನ ಪರಿಷತ್ ನಿರ್ಮಿಸಿ, ಅದರಲ್ಲಿ ಸದಸ್ಯರನ್ನಾಗಿ ಮಾಡುವ ಭರವಸೆಯನ್ನು ನೀಡಿದ್ದಾರೆ. ಮಮತಾ ಅವರ ಈ ನಿರ್ಧಾರವನ್ನು ಬಿಜೆಪಿ ಮತ್ತು ಎಡಪಕ್ಷಗಳು ವ್ಯಂಗ್ಯವಾಡಲಾರಂಭಿಸಿವೆ.

ವಿಧಾನ ಪರಿಷತ್ ಸ್ಥಾಪಿಸಿ, ಹಿರಿಯ ಮುಖಂಡರಿಗೆ, ಅನುಭವಸ್ಥರಿಗೆ ಸ್ಥಾನ
"ನಾವು ಈ ಚುನಾವಣೆಯಲ್ಲಿ ಗೆದ್ದು ಮತ್ತೆ ಅಧಿಕಾರಕ್ಕೆ ಬಂದ ಮೇಲೆ, ವಿಧಾನ ಪರಿಷತ್ ಸ್ಥಾಪಿಸಿ, ಪಕ್ಷದ ಹಿರಿಯ ಮುಖಂಡರಿಗೆ ಮತ್ತು ಅನುಭವಸ್ಥರಿಗೆ ಅದರಲ್ಲಿ ಸದಸ್ಯರನ್ನಾಗಿ ಮಾಡುತ್ತೇವೆ"ಎಂದು ಮಮತಾ ಬ್ಯಾನರ್ಜಿ ಭರವಸೆಯನ್ನು ನೀಡಿದ್ದಾರೆ.

ವಿಧಾನ ಪರಿಷತ್ ನಿರ್ಮಿಸಲು ಕೋಟ್ಯಾಂತರ ರೂಪಾಯಿ ವೆಚ್ಚ
"ವಿಧಾನ ಪರಿಷತ್ ನಿರ್ಮಿಸಲು ಕೋಟ್ಯಾಂತರ ರೂಪಾಯಿ ವೆಚ್ಚವಾಗುತ್ತದೆ. ತಮ್ಮ ಪಕ್ಷದ ಸದಸ್ಯರನ್ನು ಹಿಡಿದಿಟ್ಟುಕೊಳ್ಳಲು ಮಮತಾ ಇಂತಹ ಭರವಸೆಯನ್ನು ನೀಡುತ್ತಿದ್ದಾರೆಯೇ ಹೊರತು ಜನಸಾಮಾನ್ಯರಿಗೆ ಇದರಿಂದ ಏನೂ ಪ್ರಯೋಜನವಿಲ್ಲ"ಎಂದು ವಿರೋಧ ಪಕ್ಷಗಳು ಆಕ್ಷೇಪ ವ್ಯಕ್ತ ಪಡಿಸಿವೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications