ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರಾರ್ಥನಾ ಮಂದಿರಗಳು ಓಪನ್; ಒಮ್ಮೆ 10 ಜನಕ್ಕೆ ಮಾತ್ರ ಪ್ರವೇಶ

|
Google Oneindia Kannada News

ಕೋಲ್ಕತ್ತಾ, ಮೇ 29 : "ಪಶ್ಚಿಮ ಬಂಗಾಳದಲ್ಲಿನ ಎಲ್ಲಾ ಪ್ರಾರ್ಥನಾ ಮಂದಿರಗಳನ್ನು ಜೂನ್ 1ರಿಂದ ತೆರೆಯಲಾಗುತ್ತದೆ" ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘೋಷಣೆ ಮಾಡಿದರು. 4ನೇ ಹಂತದ ಲಾಕ್ ಡೌನ್ ಮೇ 31ರಂದು ದೇಶದಲ್ಲಿ ಅಂತ್ಯಗೊಳ್ಳಲಿದೆ.

Recommended Video

Amphan, most deadliest cyclone in last 20 years | Oneindia Kannada

ಶುಕ್ರವಾರ ಮಾಧ್ಯಮಗಳ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು ಈ ಕುರಿತು ಮಾಹಿತಿ ನೀಡಿದರು. "ಎಲ್ಲಾ ಪ್ರಾರ್ಥನಾ ಮಂದಿರಗಳು ಬಾಗಿಲು ತೆರೆದ ಬಳಿಕ ಒಂದು ಬಾರಿಗೆ 10ಕ್ಕಿಂತ ಹೆಚ್ಚಿನ ಜನರನ್ನು ಒಳಗೆ ಬಿಡುವುದಿಲ್ಲ" ಎಂದು ಅವರು ಸ್ಪಷ್ಟಪಡಿಸಿದರು.

ಬ್ರೇಕಿಂಗ್ ನ್ಯೂಸ್; ಜೂನ್ 1ರಿಂದ ಬಾಗಿಲು ತೆರೆಯಲಿವೆ ದೇವಾಲಯ ಬ್ರೇಕಿಂಗ್ ನ್ಯೂಸ್; ಜೂನ್ 1ರಿಂದ ಬಾಗಿಲು ತೆರೆಯಲಿವೆ ದೇವಾಲಯ

"ಜೂನ್ 1ರಿಂದ ಟೀ ಮತ್ತು ಜ್ಯೂಸ್ ಅಂಗಡಿಗಳು ಬಾಗಿಲು ತೆರೆಯಲು ಅವಕಾಶ ನೀಡಲಾಗುತ್ತದೆ. ಶೇ 100ರಷ್ಟು ಸಿಬ್ಬಂದಿ ಜೊತೆಗೆ ಅವರು ಕಾರ್ಯ ನಿರ್ವಹಣೆ ಮಾಡಬಹುದು" ಎಂದು ಮಮತಾ ಬ್ಯಾನರ್ಜಿ ಹೇಳಿದರು.

ಎರಡು ದಿನದಲ್ಲಿ ಮಲೆ ಮಹದೇಶ್ವರನ ಆನ್ ಲೈನ್ ದರ್ಶನ!ಎರಡು ದಿನದಲ್ಲಿ ಮಲೆ ಮಹದೇಶ್ವರನ ಆನ್ ಲೈನ್ ದರ್ಶನ!

All Places OF Worship Open From June 1 In West Bengal

"ರಾಜ್ಯದಲ್ಲಿ ಜೂನ್ 1ರ ಸೋಮವಾರಿಂದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಕಚೇರಿಗಳನ್ನು ತೆರೆಯಲು ಅನುಮತಿ ನೀಡಲಾಗುತ್ತದೆ. ಎಲ್ಲಾ ಸಿಬ್ಬಂದಿಗಳು ಕಚೇರಿಯಿಂದ ಕಾರ್ಯ ನಿರ್ವಹಣೆ ಮಾಡಬಹುದಾಗಿದೆ" ಎಂದು ಮಮತಾ ಬ್ಯಾನರ್ಜಿ ತಿಳಿಸಿದರು.

'ದೇವಸ್ಥಾನಗಳ ಜೊತೆ ಮಸೀದಿ, ಚರ್ಚ್‌ಗಳನ್ನೂ ತೆರೆಯುತ್ತೇವೆ''ದೇವಸ್ಥಾನಗಳ ಜೊತೆ ಮಸೀದಿ, ಚರ್ಚ್‌ಗಳನ್ನೂ ತೆರೆಯುತ್ತೇವೆ'

ಪಶ್ಚಿಮ ಬಂಗಾಳದಲ್ಲಿ ಇದುವರೆಗೂ ದಾಖಲಾಗಿರುವ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 4536. 295 ಜನರು ಇದುವರೆಗೂ ಮೃತಪಟ್ಟಿದ್ದಾರೆ. ಜೂನ್ 1ರಿಂದ ವಿವಿಧ ರಾಜ್ಯಗಳಲ್ಲಿ ಪ್ರಾರ್ಥನಾ ಮಂದಿರ ಬಾಗಿಲು ತೆರೆಯುವಂತೆ ಬಂಗಾಳದಲ್ಲಿಯೂ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗಿದೆ.

English summary
West Bengal chief minister Mamata Banerjee said that, all places of worship will open from June 1 and not more than 10 people will be allowed once.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X