9 ಪ್ರಧಾನಿ ಅಭ್ಯರ್ಥಿಗಳ ಮಹಾಘಟಬಂಧನ ದುರಾಸೆಯ ಪ್ರತಿರೂಪ: ಶಾ ಕಿಡಿ!
ಕೋಲ್ಕತ್ತಾ, ಜನವರಿ 23: 'ಒಂಬತ್ತು ಪ್ರಧಾನಿ ಅಭ್ಯರ್ಥಿಗಳನ್ನು ಹೊಂದಿರುವ ಮಹಾಘಟಬಂಧನ ದುರಾಸೆ ಮತ್ತು ಅಧಿಕಾರ ದಾಹದ ಪ್ರತಿರೂಪ' ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕಿಡಿಕಾರಿದ್ದಾರೆ.
ಪಶ್ಚಿಮ ಬಂಗಾಳದ ಮಲಾಡ್ ನಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಸಮಾವೇಶದಲ್ಲಿ ಮಾತನಾಡುತ್ತಿದ್ದ ಅಮಿತ್ ಶಾ, ಕಳೆದ ವಾರ ನಡೆದ ಮಹಾಘಟಬಂಧನ ಸಮಾವೇಶವನ್ನು ಅಣಕಿಸಿದರು.
ಲೋಕಸಭಾ ಚುನಾವಣೆಗೆ ಅಧಿಕೃತವಾಗಿ ಪ್ರಚಾರ ಆರಂಭಿಸಿರುವ ಅಮಿತ್ ಶಾ, ಪಶ್ಚಿಮ ಬಂಗಾಳದಲ್ಲಿ ರಣಕಹಳೆ ಮೊಳಗಿಸಿದರು. ಬಿಜೆಪಿಯಲ್ಲಿ ಒಬ್ಬರೇ ಪ್ರಧಾನಿ ಅಭ್ಯರ್ಥಿ ಇರುವುದು. ಆದರೆ ಮಹಾಘಟಬಂಧನದಲ್ಲಿ ಒಂಬತ್ತಕ್ಕೂ ಹೆಚ್ಚು ಜನ ಪ್ರಧಾನಿ ಅಭ್ಯರ್ಥಿಗಳಿದ್ದಾರೆ ಎಂದು ಶಾ ಅಣಕಿಸಿದರು.

9 ಪ್ರಧಾನಿ ಅಭ್ಯರ್ಥಿಗಳು!
"ಕೋಲ್ಕತ್ತಾದ ಬ್ರಿಗೆಡ್ ಪರೇಡ್ ಮೈದಾನದಲ್ಲಿ ಜ.21 ರಂದು ನಡೆದ ವಿಪಕ್ಷಗಳ ಬೃಹತ್ ಸಮಾವೇಶದಲ್ಲಿ ಸುಮಾರು 20-25 ನಾಯಕರು ಭಾಗವಹಿಸಿದ್ದರು. ಅವರಲ್ಲಿ 9 ಜನ ಪ್ರಧಾನಿ ಅಭ್ಯರ್ಥಿಗಳು. ಆದರೆ ಬಿಜೆಪಿಗೆ ನರೇಂದ್ರ ಮೋದಿ ಒಬ್ಬರೇ ಪ್ರಧಾನಿ ಅಭ್ಯರ್ಥಿ"- ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ

ದುರಾಸೆಯ ಪ್ರತಿರೂಪ
ಮಹಾಘಟಬಂಧನವು ದುರಾಸೆ ಮತ್ತು ಅಧಿಕಾರ ದಾಹದ ಪ್ರತೀಕ. ಅವರು ಮೋದಿಯವರನ್ನು ಅಧಿಕಾರದಿಂದ ನಿರ್ಮೂಲನೆ ಮಾಡುವ ಯೋಚನೆಯಲ್ಲಿದ್ದಾರೆ. ನಾವು ಬಡತನ ಮತ್ತು ಭ್ರಷ್ಟಾಚಾರವನ್ನು ನಿರ್ಮೂಲನೆ ಮಾಡುವ ಯೋಚನೆಯಲ್ಲಿದ್ದೇವೆ- ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ

ಯಾವ ಸರ್ಕಾರಬೇಕು?
"ಮಹಾಘಟಬಂಧನದ ನಾಯಕರಿಗೆ ಮಜ್ಬೂರ್ ಸರ್ಕಾರ(ಅಸಹಾಯಕ ಸರ್ಕಾರ) ಬೇಕಾಗಿದೆ. ನಮಗೆ ಮಜ್ಬೂತ್ ಸರ್ಕಾರ(ಬಲಶಾಲಿ ಸರ್ಕಾರ) ಬೇಕಾಗಿದೆ. ಅದರಿಂದ ನಾವು ಪಾಕಿಸ್ತಾನಕ್ಕೆ ತಕ್ಕ ಪ್ರತ್ಯುತ್ತರ ನೀಡಬಹುದು. ಜನರಿಗೆ ಮಜ್ಬೂತ್ ಸರ್ಕಾರ ಬೇಕೆ ಅಥವಾ ಮಜ್ಬೂರ್ ಸರ್ಕಾರ ಬೇಕೆ ಎಂಬ ಆಯ್ಕೆ ಜನರಿಗೇ ಬಿಟ್ಟಿದ್ದು"-ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ

ನೂರುಕೋಟಿ ಜನ ಮೋದಿ ಜೊತೆಗಿದ್ದಾರೆ!
ಒಂದೇ ವೇದಿಕೆಯ ಮೇಲೆ 20-25 ಜನರನ್ನು ಕರೆತಂದ ಮಾತ್ರಕ್ಕೆ ಗುರಿ ತಲುಪಿದಂತಲ್ಲ. ಇದರಿಂದ ಜನರು ನರೇಂದ್ರ ಮೊದಿ ಅವರನ್ನೇ ಪ್ರಧಾನಿಯನ್ನಾಗಿ ಪುನರಾಯ್ಕೆ ಮಾಡುತ್ತಾರೆ. ಈ ದೇಶದ ನೂರು ಕೋಟಿ ಜನ ಮೋದಿಯವರೊಂದಿಗಿದ್ದಾರೆ-ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ

ಮಹಾಘಟಬಂಧನದಲ್ಲಿ ಒಂದೇ ಮಾತರಂ ಸದ್ದಿಲ್ಲ!
ಮಹಾಘಟಬಂಧನದ ಸಮಾವೇಶದಲ್ಲಿ ಒಮ್ಮೆಯೂ ವಂದೇ ಮಾತರಂ ಅಥವಾ ಭಾರತ್ ಮಾತಾ ಕೀ ಜೈ ಎಂಬ ಘೋಷಣೆ ಕೇಳಲಿಲ್ಲ. ಆದರೆ ಮೋದಿ ಮೋದಿ ಎಂಬ ಜಪ ಮಾತ್ರ ಕೇಳುತ್ತಿತ್ತು! ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರ ಕೇವಲ ನುಸುಳುಕೋರರಿಗಾಗಿ ಕೆಲಸ ಮಾಡುತ್ತಿದೆ, ಜನರ ಹಿತಾಸಕ್ತಿಗೆ ಇಲ್ಲಿ ಬೆಲೆ ಇಲ್ಲ-ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications