ಚುನಾವಣಾ ನಂತರದ ಹಿಂಸಾಚಾರ: ದೀದಿ ಸರ್ಕಾರದ ವಿರುದ್ದ ಹೈಕೋರ್ಟ್ ತರಾಟೆ
ಕೋಲ್ಕತಾ, ಜು. 02: ಪಶ್ಚಿಮ ಬಂಗಾಳದಲ್ಲಿ ಚುನಾವಣೆಯ ಬಳಿಕ ಭುಗಿಲೆದ್ದ ಹಿಂಸಾಚಾರಕ್ಕೆ ಸಂಬಂಧಿಸಿ ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವನ್ನು ಕೋಲ್ಕತ್ತಾ ಹೈಕೋರ್ಟ್ ಶುಕ್ರವಾರ ತರಾಟೆಗೆ ತೆಗೆದುಕೊಂಡಿದೆ. ಸರ್ಕಾರವು ನಿರಾಕರಣೆ ಮೋಡ್ನಲ್ಲಿದೆ ಎಂದು ನ್ಯಾಯಪೀಠ ಹೇಳಿದೆ.
ವಿಧಾನಸಭೆ ಚುನಾವಣೆಯ ಬಳಿಕ ಹಿಂಸಾಚಾರ ನಡೆದಿದೆ ಎಂಬುವುದಕ್ಕೆ ಸಾಕಷ್ಟು ಪುರಾವೆಗಳಿವೆ. ರಾಜ್ಯವು ಕೆಟ್ಟ ಹಾದಿಯಲ್ಲಿ ಸಿಲುಕಿದೆ ಎಂದು ಕೋಲ್ಕತ್ತಾ ಹೈಕೋರ್ಟ್ ಪೀಠ ಅಭಿಪ್ರಾಯಿಸಿದೆ.
ಈ ವಿಚಾರಣೆಯನ್ನು ಐವರು ನ್ಯಾಯಮೂರ್ತಿಗಳನ್ನು ಒಳಗೊಂಡ ಪೀಠವು ನಡೆಸಿದ್ದು, "ವರದಿಯ ಪರಿಶೀಲನೆಯಿಂದ ಅರ್ಜಿದಾರರು ತೆಗೆದುಕೊಂಡ ನಿಲುವಿನ ಪ್ರಕಾರ ಪಶ್ಚಿಮ ಬಂಗಾಳದಲ್ಲಿ ಚುನಾವಣೆಯ ನಂತರ ಹಿಂಸಾಚಾರ ನಡೆದಿದೆ ಹಾಗೂ ರಾಜ್ಯವು ಕೆಟ್ಟ ಹಾದಿಯಲ್ಲಿ ಸಿಲುಕಿದೆ," ಎಂದಿದೆ.

ಚುನಾವಣೆ ಬಳಿಕದ ಹಿಂಸಾಚಾರದ ಬಗ್ಗೆ ಎನ್ಎಚ್ಆರ್ಸಿ ವರದಿಯನ್ನು ಪರಿಶೀಲಿಸಿದ ಕೋಲ್ಕತ್ತಾ ಹೈಕೋರ್ಟ್ ಎಲ್ಲಾ ವಿಷಯಗಳಲ್ಲಿ ಪ್ರಕರಣಗಳನ್ನು ದಾಖಲಿಸಲು ಅಥವಾ ಎನ್ಎಚ್ಆರ್ಸಿ ಅಥವಾ ಇನ್ನಾವುದೇ ಪ್ರಾಧಿಕಾರ / ಆಯೋಗದ ಮುಂದೆ ಇರಿಸಲು, ಸಿಆರ್ಪಿಸಿಯ ಸೆಕ್ಷನ್ 164 ರ ಅಡಿಯಲ್ಲಿ ದಾಖಲಾದ ಸಂತ್ರಸ್ತರ ಹೇಳಿಕೆಗಳನ್ನು ಪಡೆಯಲು ಪೊಲೀಸರಿಗೆ ನಿರ್ದೇಶನ ನೀಡಿದೆ.
"ಲೈಂಗಿಕ ದೌರ್ಜನ್ಯದ ಪ್ರಕರಣಗಳ ಬಗ್ಗೆ ಉಲ್ಲೇಖ ಮಾಡಿದ ಹೈಕೋರ್ಟ್, ಅಪ್ರಾಪ್ತ ವಯಸ್ಕರ ಮೇಲೂ ಹಲ್ಲೆ ನಡೆಸಲಾಗಿದೆ. ಅಪ್ರಾಪ್ತರು ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ," ಎಂದು ಹೇಳಿದೆ.
ಹಾಗೆಯೇ ರಾಜ್ಯ ಪೊಲೀಸರ ವಿಶೇಷ ಶಾಖೆ / ಗುಪ್ತಚರ ಶಾಖೆಯ ಪತ್ರವ್ಯವಹಾರದ ಸಂರಕ್ಷಣೆ, ವಿವಿಧ ನಿಯಂತ್ರಣ ಕೊಠಡಿಗಳ ದಾಖಲೆಗಳನ್ನು ಖಾತ್ರಿಪಡಿಸಿಕೊಳ್ಳುವಂತೆ ಹೈಕೋರ್ಟ್ ಬಂಗಾಳ ಮುಖ್ಯ ಕಾರ್ಯದರ್ಶಿಗೆ ನಿರ್ದೇಶನ ನೀಡಿದೆ.
ಎನ್ಎಚ್ಆರ್ಸಿ ಸಲ್ಲಿಸಿದ ಮಧ್ಯಂತರ ವರದಿಯನ್ನು ಆಧರಿಸಿ ನ್ಯಾಯಾಲಯ ನಿರ್ದೇಶನ ನೀಡಿದೆ. "ನಾವು ಮಧ್ಯಂತರ ವರದಿಯನ್ನು ಪ್ರಕಟಿಸುವುದಿಲ್ಲ," ಎಂದು ನ್ಯಾಯಾಲಯ ತಿಳಿಸಿದೆ
ಎನ್ಎಚ್ಆರ್ಸಿ ಸಮಿತಿಯ ಶಿಫಾರಸಿನಂತೆ ಪ್ರಕರಣಗಳನ್ನು ದಾಖಲಿಸುವಂತೆ ಪೊಲೀಸರಿಗೆ ಹೈಕೋರ್ಟ್ ನಿರ್ದೇಶನ ನೀಡಿದ್ದು, ಹಿಂಸಾಚಾರದಿಂದ ಬಳಲುತ್ತಿರುವವರಿಗೂ ವೈದ್ಯಕೀಯ ಚಿಕಿತ್ಸೆ ನೀಡುವಂತೆ ನಿರ್ದೇಶಿಸಿದೆ. ಹಾಗೆಯೇ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಅಭಿಜಿತ್ ಸರ್ಕಾರ್ನ ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಮತ್ತೊಮ್ಮೆ ನಡೆಸುವಂತೆ ಆದೇಶಿಸಿದೆ.
(ಒನ್ಇಂಡಿಯಾ ಸುದ್ದಿ)
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications