ಮಮತಾಗೆ ಮುನ್ನಡೆ: ಟಿಎಂಸಿಯಿಂದ ಈಗಲೇ ಸಂಭ್ರಮಾಚರಣೆ ಆರಂಭ
ಕೋಲ್ಕತ್ತಾ, ಅಕ್ಟೋಬರ್ 03: ಪಶ್ಚಿಮ ಬಂಗಾಳದಲ್ಲಿ ಇಂದು ಮೂರು ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಭವಾನಿಪುರದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾರೀ ಮುನ್ನಡೆಯಲ್ಲಿ ಇದ್ದಾರೆ.
ಪ್ರಸ್ತುತ 17ನೇ ಸುತ್ತಿನ ಮತ ಎಣಿಕೆ ಪೂರ್ಣವಾಗಿದ್ದು, ಮಮತಾ ಬ್ಯಾನರ್ಜಿ ಒಟ್ಟು ಸರಿ ಸುಮಾರು 45,738 ಮತಗಳ ಮತಗಳ ಮುನ್ನಡೆಯನ್ನು ಸಾಧಿಸಿದ್ದಾರೆ. ಇನ್ನು ಕೇವಲ ನಾಲ್ಕು ಸುತ್ತಿನ ಮತ ಎಣಿಕೆ ಬಾಕಿ ಉಳಿದಿದೆ. ಈ ಹಿನ್ನೆಲೆ ತೃಣಮೂಲ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಈಗಲೇ ಸಂಭ್ರಮಾಚರಣೆ ಆರಂಭ ಮಾಡಿದ್ದಾರೆ ಎಂದು ವರದಿಯಾಗಿದೆ.
15 ನೇ ಸುತ್ತಿನಲ್ಲಿ ಮಮತಾ ಬ್ಯಾನರ್ಜಿ 58,503 ಮತಗಳನ್ನು ಪಡೆದಿದ್ದರೆ, ಬಿಜೆಪಿಯ ಪ್ರಿಯಾಂಕ ಟಿಬ್ರೆವಾಲ್ 18,846 ಮತಗಳನ್ನು ಪಡೆದಿದ್ದರು, ಒಟ್ಟು ಸರಿಸುಮಾರು 40,000 ಅಂತರವಿತ್ತು. 16 ಸುತ್ತಿನ ಮತ ಎಣಿಕೆ ನಡೆಯುವಷ್ಟರಲ್ಲಿ ಈ ಅಂತರ ಮತ್ತಷ್ಟು ಅಧಿಕವಾಗಿದೆ.

ಇನ್ನು 17 ಸುತ್ತಿನಲ್ಲಿ ಮಮತಾ ಬ್ಯಾನರ್ಜಿಗೆ 67,620 ಮತಗಳು ದೊರಕಿದ್ದು, ಬಿಜೆಪಿಯ ಪ್ರಿಯಾಂಕ ಟಿಬ್ರೆವಾಲ್ಗೆ 21,882 ಮತಗಳು ಮಾತ್ರ ಲಭಿಸಿದೆ. ಒಟ್ಟು 45,738 ಮತಗಳ ಮುನ್ನಡೆಯನ್ನು ಮಮತಾ ಬ್ಯಾನರ್ಜಿ ಹೊಂದಿದ್ದಾರೆ.
13 ಹಂತದ ಮತ ಎಣಿಕೆ ಮುಗಿಯುತ್ತಿದ್ದಂತೆ ಟಿಎಂಸಿ ಕಾರ್ಯಕರ್ತರು ಸಂಭ್ರಮಾಚರಣೆ ಆರಂಭ ಮಾಡಿದ್ದಾರೆ. ಮಮತಾ ಬ್ಯಾನರ್ಜಿಯ ಕೋಲ್ಕತ್ತಾದ ನಿವಾಸದ ಹೊರಗಡೆ ಟಿಎಂಸಿ ಬೆಂಬಲಿಗರು ನೆರೆದಿದ್ದು, ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಇನ್ನು ಈಗಾಗಲೇ ಚುನಾವಣಾ ಆಯೋಗವು ಯಾವುದೇ ಸಂಭ್ರಮಾಚರಣೆ ಅಥವಾ ಮೆರವಣಿಗೆಗೆ ಅವಕಾಶವಿಲ್ಲ ಎಂದು ಹೇಳಿದೆ.
ಇನ್ನು ಮಮತಾ ಬ್ಯಾನರ್ಜಿ ಭರ್ಜರಿ ಮುನ್ನಡೆಯನ್ನು ಸಾಧಿಸಿರುವ ಬಗ್ಗೆ ಸಹೋದರ ಕಾರ್ತಿಕ್ ಸಂತಸವನ್ನು ವ್ಯಕ್ತಪಡಿಸಿದ್ದಾರೆ. "ಇಲ್ಲಿ ಟಿಎಂಸಿ ಅಲ್ಲದೇ ಬೇರೆ ಯಾವ ಪಕ್ಷಕ್ಕೂ ಒಂದು ಸ್ಥಾನವಿಲ್ಲ. ತೃಣಮೂಲ ಕಾಂಗ್ರೆಸ್ ಪಕ್ಷ ಹಾಗೂ ದೀದಿ ಜನರಿಗಾಗಿ ಕಾರ್ಯ ನಿರ್ವಹಣೆ ಮಾಡುತ್ತಾರೆ. ದೆಹಲಿಯಲ್ಲಿ (ಕೇಂದ್ರ) 2024 ರಲ್ಲಿ ನಾವು ಸರ್ಕಾರವನ್ನು ರಚನೆ ಮಾಡುತ್ತೇವೆ," ಎಂದು ತಿಳಿಸಿದ್ದಾರೆ.
(ಒನ್ಇಂಡಿಯಾ ಸುದ್ದಿ)
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications