''ಪ.ಬಂಗಾಳ ಮಾಫಿಯಾದ ಹಿಡಿತದಲ್ಲಿದೆ'': ಬಿಜೆಪಿಯ ಬಿರ್ಭೂಮ್ ಹಿಂಸಾಚಾರ ವರದಿ
ಕೋಲ್ಕತ್ತಾ ಮಾರ್ಚ್ 30: ತೃಣಮೂಲ ಕಾಂಗ್ರೆಸ್ ನೇತೃತ್ವದ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಡಳಿತವಿರುವ ಪಶ್ಚಿಮ ಬಂಗಾಳ ಮಾಫಿಯಾದ ಹಿಡಿತದಲ್ಲಿದೆ. ಮಾಫಿಯಾ ಬಂಗಾಳವನ್ನು ಆಳುತ್ತಿದೆ. ಜೊತೆಗೆ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕುಸಿದಿದೆ ಎಂದು ಬಿಜೆಪಿಯ ಸತ್ಯಶೋಧನಾ ತಂಡ ತನ್ನ ವರದಿಯಲ್ಲಿ ತಿಳಿಸಿದೆ. ಕಳೆದ ವಾರ ಬಿರ್ಭೂಮ್ ಜಿಲ್ಲೆಯಲ್ಲಿ ಎಂಟು ಜನರನ್ನು ಸಜೀವ ದಹನ ಮಾಡಿದ ಘೋರ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಿದ ಬಿಜೆಪಿಯ ಸತ್ಯಶೋಧನಾ ತಂಡ ತನ್ನ ವರದಿಯನ್ನು ನೀಡಿದೆ.
ಬಗ್ತುಯಿ ಗ್ರಾಮದ ಹತ್ಯೆಗಳು ರಾಜ್ಯ ಪ್ರಾಯೋಜಿತ ಸುಲಿಗೆ, ಗೂಂಡಾ ತೆರಿಗೆ, ಪರ್ಸೆಂಟ್ ಮನಿಯ ಪರಿಣಾಮವಾಗಿದೆ ಎಂದು ಬಿಜೆಪಿ ವರದಿ ಹೇಳಿದೆ. ಇದರಲ್ಲಿ ಬಂಗಾಳದ ಆಡಳಿತ ಪಕ್ಷದ ನಾಯಕರು ಲಂಚ ತೆಗೆದುಕೊಳ್ಳಲು ಬಳಸುವ ಪದಗಳನ್ನು ಉಲ್ಲೇಖಿಸಲಾಗಿದೆ. ಹತ್ಯೆಗೆ ಫಲಾನುಭವಿಗಳ ನಡುವಿನ ಲಂಚದ ಮೊತ್ತದ ಪೈಪೋಟಿ ಮತ್ತೊಂದು ಕಾರಣ ಎಂದು ಅದು ಹೇಳಿದೆ.
"ಸ್ಥಳೀಯ ನಿವಾಸಿಗಳು ತಮ್ಮ ಜೀವ ಮತ್ತು ಆಸ್ತಿಯ ಬೆದರಿಕೆಯ ಭಯದಿಂದ ತಮ್ಮ ಮನೆಗಳನ್ನು ತೊರೆದಿದ್ದಾರೆ" ಎಂದು ವರದಿ ಹೇಳಿಕೊಂಡಿದೆ. ಹಿಂದೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮತ್ತು ರಾಷ್ಟ್ರೀಯ ಮಹಿಳಾ ಆಯೋಗದಂತಹ ಸಂಸ್ಥೆಗಳು ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರನ್ನು ಕರೆತರಲು ಆತ್ಮವಿಶ್ವಾಸವನ್ನು ಮೂಡಿಸುವ ಕ್ರಮಗಳನ್ನು ಸ್ಥಾಪಿಸಲು ಶಿಫಾರಸು ಮಾಡಿದೆ.

ಸ್ಥಳೀಯ ತೃಣಮೂಲ ಕಾಂಗ್ರೆಸ್ ನಾಯಕ ಭಾದು ಶೇಖ್ ಕಚ್ಚಾ ಬಾಂಬ್ ದಾಳಿಯಲ್ಲಿ ಹತನಾದ ನಂತರ ಪ್ರತೀಕಾರವಾಗಿ ಸಜೀವ ದಹನ ಮಾಡಲಾಗಿದೆ. ರಾಮ್ಪುರಹತ್ ಪಟ್ಟಣದ ಬಳಿಯ ಬೊಗ್ಟುಯಿ ಗ್ರಾಮದಲ್ಲಿ ಮಾರ್ಚ್ 22 ರಂದು ಆರು ಮಹಿಳೆಯರು ಮತ್ತು ಇಬ್ಬರು ಮಕ್ಕಳನ್ನು ಅವರ ಮನೆಗೆ ಬೀಗ ಹಾಕಿ ಸಜೀವ ದಹನ ಮಾಡಲಾಯಿತು. ಒಂದು ದಿನದ ನಂತರ ಸುಟ್ಟ ಮೃತದೇಹಗಳು ಪತ್ತೆಯಾಗಿದ್ದು, ಬಹುತೇಕ ಒಂದೇ ಕುಟುಂಬಕ್ಕೆ ಸೇರಿದ್ದಾಗಿವೆ.

ಬಿಜೆಪಿ ತಂಡ ಈಗಾಗಲೇ ಕೋಲ್ಕತ್ತಾ ತಲುಪಿದ ನಂತರ ಗ್ರಾಮಕ್ಕೆ ಭೇಟಿ ನೀಡಲು ಮಮತಾ ಬ್ಯಾನರ್ಜಿ ನಿರ್ಧರಿಸಿದ್ದಾರೆ ಎಂದು ಬಿಜೆಪಿ ತಂಡ ಹೇಳಿದೆ. ಮುಖ್ಯಮಂತ್ರಿಯವರ ಬಲವಂತದ ಭೇಟಿಯಿಂದಾಗಿ ತೃಣಮೂಲ ಗೂಂಡಾಗಳು ಸತ್ಯಶೋಧನಾ ತಂಡದ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದರು.
"ತನಿಖಾ ತಂಡದ ತನಿಖೆ ವೇಳೆ ಒಬ್ಬ ಅಧಿಕಾರಿ ಅಥವಾ ಕಾನ್ಸ್ಟೆಬಲ್ ಕೂಡ ಕಾಣಿಸಲಿಲ್ಲ ಮತ್ತು ಸತ್ಯಶೋಧನಾ ತಂಡ ದಾಳಿ ಮಾಡಿದಾಗ ಯಾರೂ ರಕ್ಷಣೆಗೆ ಬಂದಿಲ್ಲ" ಎಂದು ಸಮಿತಿಯ ವರದಿ ಹೇಳಿದೆ. ಮಾತ್ರವಲ್ಲದೇ ಈ ವೇಳೆ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸುವ ಪ್ರಯತ್ನಗಳು ವಿಫಲವಾಗಿವೆ ಎಂದು ವರದಿ ಹೇಳಿದೆ.

ಆದರೆ ಮಮತಾ ಬ್ಯಾನರ್ಜಿ ಅವರು ಬಿಜೆಪಿ ತಂಡದ ವರದಿಯನ್ನು ಖಂಡನೆ ಮಾಡಿದ್ದಾರೆ ಮತ್ತು ಅಂತಹ ವರದಿಗಳು ತನಿಖೆಗೆ ಅಡ್ಡಿಪಡಿಸಿ ಹಳಿತಪ್ಪಿಸುತ್ತವೆ ಎಂದು ಹೇಳಿದ್ದಾರೆ.
"ಇವುಗಳು ರಾಜಕೀಯ ಪ್ರೇರಿತ ವರದಿಗಳು. ಬಿಜೆಪಿ ಮತ್ತು ಕೇಂದ್ರ ಸರ್ಕಾರದ ಈ ಧೋರಣೆಯನ್ನು ನಾನು ಖಂಡಿಸುತ್ತೇನೆ. ತನಿಖೆ ನಡೆಯುತ್ತಿರುವಾಗ ಯಾವುದೇ ಪಕ್ಷದ ಹಸ್ತಕ್ಷೇಪ ಮಾಡಬಾರದು. ಇದು ಸಂಪೂರ್ಣ ಅಧಿಕಾರದ ದುರುಪಯೋಗವಾಗಿದೆ. ಸೇಡಿನ ಮತ್ತು ಪಕ್ಷಪಾತವಾದ ಈ ನಡೆಯನ್ನು ನಾನು ಖಂಡಿಸುತ್ತೇನೆ. ಹೀಗೆ ಮಾಡುವುದರಿಂದ ಅವರು ಮಾತ್ರ ಈ ದೇಶದಲ್ಲಿ ಉಳಿಯುತ್ತಾರೆ ಎಂದು ಬಿಜೆಪಿ ಭಾವಿಸುತ್ತದೆ" ಎಂದು ಮುಖ್ಯಮಂತ್ರಿ ಸುದ್ದಿಗಾರರಿಗೆ ತಿಳಿಸಿದರು.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications