ಪಶ್ಚಿಮ ಬಂಗಾಳ: ಮತ್ತೊಬ್ಬ ಬಿಜೆಪಿ ಕಾರ್ಯಕರ್ತನ ಹತ್ಯೆ
ಕೊಲ್ಕತ್ತ, ಮೇ 31: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರ ಸರಣಿ ಹತ್ಯೆಗಳು ನಿಂತಿಲ್ಲ. ನಿನ್ನೆಯಷ್ಟೆ ಮತ್ತೊಬ್ಬ ಬಿಜೆಪಿ ಕಾರ್ಯಕರ್ತನ ಹತ್ಯೆಯಾಗಿದೆ. ಹತ್ಯೆಯನ್ನು ಟಿಎಂಸಿ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ.
ಪಶ್ಚಿಮ ಬಂಗಾಳ ರಾಜ್ಯದ ಕೇತುಗ್ರಾಮ್ ಜಿಲ್ಲೆಯ ಬುದ್ವಾನ್ ಎಂಬಲ್ಲಿ ಘಟನೆ ನಡೆದಿದ್ದು, ನಿನ್ನೆ ಮೋದಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ ಸಂಭ್ರಮಾಚರಣೆ ಮಾಡುತ್ತಾ, ಬಿಜೆಪಿ ಧ್ವಜಗಳನ್ನು ಕಟ್ಟುತ್ತಿರುವ ಸಂದರ್ಭದಲ್ಲಿ ಗಲಾಟೆ ನಡೆದು ಸುಶೀಲ್ ಮೊಂಡಲ್ ಎಂಬುವರನ್ನು ಹತ್ಯೆ ಮಾಡಲಾಗಿದೆ.
52 ವರ್ಷದ ಸುಶೀಲ್ ಮೊಂಡಲ್ ಅವರು ಬುದ್ವಾನ್ನ ಬಿಜೆಪಿ ಕಾರ್ಯಕರ್ತರಾಗಿದ್ದರು. 2019 ರ ಲೋಕಸಭೆ ಚುನಾವಣೆಯಲ್ಲಿ ಬೂತ್ ಕಾರ್ಯಕರ್ತರಾಗಿಯೂ ಅವರು ಕಾರ್ಯನಿರ್ವಹಿಸಿದ್ದರು.

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರ ಸರಣಿ ಹತ್ಯೆಗಳಾಗಿವೆ. ಅಮಿತ್ ಶಾ, ಮೋದಿ ಅವರು ಈ ಹತ್ಯೆಗಳನ್ನು ಖಂಡಿಸಿದ್ದಾರೆ. ಮತದಾನಕ್ಕೆ ಮುನ್ನಾ ನಡೆದ ಅಮಿತ್ ಶಾ ರ್ಯಾಲಿಯಲ್ಲಿ ಸಹ ಹಿಂಸಾಚಾರ ನಡೆದಿತ್ತು.
ಇತ್ತೀಚೆಗಷ್ಟೆ ಸ್ಮೃತಿ ಇರಾನಿ ಆಪ್ತ ಬಿಜೆಪಿ ಮುಖಂಡರರೊಬ್ಬರನ್ನು ಕೊಲೆ ಮಾಡಲಾಗಿತ್ತು. ಅವರ ಶವಯಾತ್ರೆಯಲ್ಲಿ ಸ್ಮೃತಿ ಇರಾನಿ ಅವರು ಪಾಲ್ಗೊಂಡಿದ್ದರು.
ಅಮಿತ್ ಶಾ ಅವರ ಪ್ರಕಾರ ಈವರೆಗೆ 25 ಬಿಜೆಪಿ ಕಾರ್ಯಕರ್ತರು ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಕಾರಣಕ್ಕೆ ಹತ್ಯೆಯಾಗಿದ್ದಾರೆ. ಆದರೆ ಇದನ್ನು ಮಮತಾ ಬ್ಯಾನರ್ಜಿ ತಳ್ಳಿ ಹಾಕಿದ್ದು, ಬಿಜೆಪಿಯು ಉದ್ದೇಶಪೂರ್ವಕವಾಗಿ ಇದನ್ನು ರಾಜಕೀಯಗೊಳಿಸುತ್ತಿದೆ ಎಂದು ಹೇಳಿದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications