ಪಶ್ಚಿಮ ಬಂಗಾಳ ಬಿಜೆಪಿ ಘಟಕದ ಅಧ್ಯಕ್ಷರ ವಿಷಾದದ ಟ್ವೀಟ್
ಕೋಲ್ಕತಾ, ಜೂನ್ 13: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರೋಡ್ ಶೋ ವೇಳೆ ಆರಂಭವಾದ, ತೃಣಮೂಲ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವಿನ ಹಿಂಸಾಚಾರ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.
ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಮಾರಾಮಾರಿಯಿಂದ ತೀವ್ರ ನೊಂದಿರುವ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ದಿಲೀಪ್ ಘೋಷ್ ವಿಷಾದದ ಟ್ವೀಟ್ ಒಂದನ್ನು ಮಾಡಿದ್ದಾರೆ. ಅದನ್ನು ತಮ್ಮ ಟ್ವೀಟ್ ನಲ್ಲಿ ಬಿಜೆಪಿಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ಉಲ್ಲೇಖಿಸಿದ್ದಾರೆ.
ದಿಲೀಪ್ ಘೋಷ್ ನೋವಿನ ನುಡಿ ಹೀಗಿದೆ, " ನನ್ನ ರಾಜಕೀಯ ವೃತ್ತಿ ಜೀವನದಲ್ಲಿ ಎದುರಿಸುತ್ತಿರುವ ಅತ್ಯಂತ ಕಠಿಣ ಸಮಯವಿದು. ಪ್ರತೀ ದಿನ ಒಂದಲ್ಲಾ ಒಂದು ನನ್ನ ಕಾರ್ಯಕರ್ತರ ಅಂತ್ಯಕ್ರಿಯೆಯಲ್ಲಿ ಹೂವು ಹಿಡಿದುಕೊಂಡು ಭಾಗವಹಿಸಬೇಕಿದೆ".

ಪ್ರತೀದಿನ ಮಗನನ್ನು ಕಳೆದುಕೊಂಡ ತಾಯಂದಿರನ್ನು ನಾನು ಸಂತೈಸಬೇಕಿದೆ. ನಾನು ಏನೂಂತಾ ಅವರನ್ನು ಸಮಾಧಾನ ಪಡಿಸಲಿ" ಇದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರ ನೋವಿನ ಟ್ವೀಟ್.
The words of BJP WB President @DilipGhoshBJP
— B L Santhosh (@blsanthosh) June 12, 2019
'This is the toughest phase of my political career. Everyday I have to attend multiple funerals & garland my dead workers.Everyday I have to console a mother who has lost his son.What consolation can I give? ‘@BJP4India @amitmalviya
ಮಂಗಳವಾರ (ಜೂ 11) ಕೂಡಾ ಇಬ್ಬರು ಬಿಜೆಪಿ ಕಾರ್ಯಕರ್ತರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಟಿಎಂಸಿ ಕಾರ್ಯಕರ್ತರು ನಮ್ಮ ಮಕ್ಕಳನ್ನು ಕೊಂದಿದ್ದಾರೆಂದು ಅವರ ಕುಟುಂಬಸ್ಥರು ಆರೋಪಿಸುತ್ತಿದ್ದಾರೆ.
ಇವರಿಬ್ಬರೂ, ಬಿಜೆಪಿಯ ಬೂತ್ ಮಟ್ಟದ ಕಾರ್ಯಾಕರ್ತರಾಗಿದ್ದು, ಲೋಕಸಭಾ ಚುನಾವಣೆಯ ವೇಳೆ 'ಜೈಶ್ರೀರಾಂ' ರ್ಯಾಲಿಗಳ ಮುಂದಾಳತ್ವವನ್ನು ವಹಿಸಿಕೊಂಡಿದ್ದವರು ಎಂದು ತಿಳಿದುಬಂದಿದೆ.
-
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ











Click it and Unblock the Notifications