"ಬಂಗಾರದಂತಾ ಬಂಗಾಳ": ಮತದಾರರಿಗೆ ಅಮಿತ್ ಶಾ ಹೊಸ ಭರವಸೆ
ಕೋಲ್ಕತ್ತಾ, ಮಾರ್ಚ್ 15: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವು ಗೆಲುವು ಸಾಧಿಸಿದ ನಂತರ ಬಂಗಾಳವನ್ನು ಬಂಗಾರವನ್ನಾಗಿ ಪರಿವರ್ತಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆಶ್ವಾಸನೆ ನೀಡಿದ್ದಾರೆ.
ಪಶ್ಚಿಮ ಮೇದಿನಿಪುರ್ ಜಿಲ್ಲೆಯ ಖರಗಪುರ್ ನಲ್ಲಿ ಬಿಜೆಪಿ ಅಭ್ಯರ್ಥಿ ಹಿರನ್ ಚಟರ್ಜಿ ಪರ ಅಮಿತ್ ಶಾ ಅವರು ಭರ್ಜರಿ ರೋಡ್ ಶೋ ನಡೆಸಿದರು. ಈ ರೋಡ್ ಶೋನಲ್ಲಿ ನೆರೆದಿರುವ ಜನರು ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಭವ್ಯ ಬದಲಾವಣೆಯನ್ನು ಬಯಸುತ್ತಿದ್ದಾರೆ ಎಂದು ಹೇಳಿದರು.
ಪಶ್ಚಿಮ ಬಂಗಾಳದಲ್ಲಿ ನಿಜವಾದ ಬದಲಾವಣೆ ತರುವಲ್ಲಿ ಭಾರತೀಯ ಜನತಾ ಪಕ್ಷವು ಯಶಸ್ವಿಯಾಗಲಿದೆ. ಬಿಜೆಪಿ ಅಧಿಕಾರಕ್ಕೆ ಬಂದ ನಂತರದಲ್ಲಿ ಬಂಗಾರದಂತಾ ಬಂಗಾಳವನ್ನು ರೂಪಿಸಲಿದೆ ಎಂದು ಭರವಸೆ ನೀಡುತ್ತೇವೆ ಎಂದು ಅಮಿತ್ ಶಾ ಹೇಳಿದರು.

ಪಶ್ಚಿಮ ಬಂಗಾಳದಲ್ಲಿ ಅಮಿತ್ ಶಾ ರೋಡ್ ಶೋ:
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹಿನ್ನೆಲೆ ಖರಗಪುರ್ ದಲ್ಲಿರುವ ಪ್ರೇಮಹರಿ ಭವನದಿಂದ ಮಲಂಚಾ ಪೆಟ್ರೋಲ್ ಬಂಕ್ ವರೆಗೂ ಸರಿಸುಮಾರು ಒಂದು ಕಿಲೋ ಮೀಟರ್ ವರೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ರೋಡ್ ಶೋ ನಡೆಸಿದರು. ಈ ವೇಳೆ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಮತ್ತು ಪಶ್ಚಿಮ ಬಂಗಾಳದ ಚುನಾವಣಾ ಉಸ್ತುವಾರಿ ವಿಜಯ್ ವರ್ಗೀಯಾ, ಪಶ್ಚಿಮ ಬಂಗಾಳ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ ಜೊತೆಗಿದ್ದರು.
#WATCH | Union Home Minister and BJP leader Amit Shah holds a roadshow in Kharagpur ahead of West Bengal Assembly elections. pic.twitter.com/CrPL4GDEGm
— ANI (@ANI) March 14, 2021
8 ಹಂತಗಳಲ್ಲಿ ಪಶ್ಚಿಮ ಬಂಗಾಳ ಚುನಾವಣಾ ಮತದಾನ
ಪಶ್ಚಿಮ ಬಂಗಾಳದಲ್ಲಿ ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್.27, ಏಪ್ರಿಲ್.1, ಏಪ್ರಿಲ್.6, ಏಪ್ರಿಲ್.10, ಏಪ್ರಿಲ್.17, ಏಪ್ರಿಲ್.22, ಏಪ್ರಿಲ್.26 ಮತ್ತು ಏಪ್ರಿಲ್.29ರಂದು ಮತದಾನ ನಡೆಯಲಿದೆ. ಚುನಾವಣೆಯ ಅಂತಿಮ ಫಲಿತಾಂಶ ಮೇ.2ರಂದು ಹೊರ ಬೀಳಲಿದೆ.












Click it and Unblock the Notifications