ಮಮತಾ ಆಪ್ತನ ವಶಕ್ಕೆ ಕೋರಿ ಸುಪ್ರೀಂ ಮೊರೆ ಹೋದ ಸಿಬಿಐ
ಕೋಲ್ಕತಾ, ಡಿ.28: ಕೋಲ್ಕತಾದ ಮಾಜಿ ಪೊಲೀಸ್ ಆಯುಕ್ತ, ಸಿಎಂ ಮಮತಾ ಬ್ಯಾನರ್ಜಿ ಆಪ್ತ ರಾಜೀವ್ ಕುಮಾರ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲು ಅವಕಾಶ ಕೋರಿ ಸುಪ್ರೀಂಕೋರ್ಟಿಗೆ ಸಿಬಿಐ ಮನವಿ ಸಲ್ಲಿಸಿದೆ.
ಒಂದು ಕಾಲದಲ್ಲಿ ಮಮತಾ ಸರ್ಕಾರಕ್ಕೆ ಮುಳುವಾಗಿದ್ದ ಶಾರದಾ ಚಿಟ್ಫಂಡ್ ಹಗರಣ ಸದ್ಯಕ್ಕೆ ತಣ್ಣಗಾಗಿದೆ. ಆದರೆ, ಚುನಾವಣೆ ಹತ್ತಿರದಲ್ಲರುವಾಗ ಮತ್ತೊಮ್ಮೆ ಪ್ರಕರಣ ಮುನ್ನೆಲೆಗೆ ಬಂದಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜೀವ್ ಅವರನ್ನು ವಿಚಾರಣೆಗೊಳಪಡಿಸಲಾಗಿದ್ದು, ಅವರು ತನಿಖೆಗೆ ಸಹಕಾರ ನೀಡುತ್ತಿಲ್ಲ. ಹಗರಣದಲ್ಲಿ ಇತರ ಆರೋಪಿಗಳು ಸಮಾಜದಲ್ಲಿ ಪ್ರಮುಖರು ಭಾಗಿಯಾಗಿರುವ ಬಗ್ಗೆ ಮಾಹಿತಿಯಿದೆ ಈ ಬಗ್ಗೆ ಪತ್ತೆಹಚ್ಚಲು ರಾಜೀವ್ ಅವರ ವಿಚಾರಣೆ ಅಗತ್ಯ ಎಂದು ಸಿಬಿಐ ತನ್ನ ಅರ್ಜಿಯಲ್ಲಿ ಹೇಳಿದೆ.

ಪ್ರಕರಣ ಒಂದು ವರ್ಷದಿಂದ ಸುಪ್ರೀಂಕೋರ್ಟ್ನಲ್ಲಿ ಬಾಕಿ ಉಳಿದಿದ್ದು ಶೀಘ್ರ ವಿಚಾರಣೆ ನಡೆಸಬೇಕು. ಕಸ್ಟಡಿ ವಿಚಾರಣೆ ನಡೆಸಬೇಕಿರುವುದರಿಂದ ಕುಮಾರ್ ಅವರಿಗೆ ನೀಡಲಾಗಿದ್ದ ಜಾಮೀನು ರದ್ದುಗೊಳಿಸಬೇಕು ಎಂದು ಕೂಡ ಸಿಬಿಐ ಕೋರಿದೆ.
ಶಾರದಾ ಚಿಟ್ ಫಂಡ್ ಹಗರಣದ ತನಿಖೆ ವೇಳೆ ಸಂಗ್ರಹಿಸಿದ ಸಾಕ್ಷ್ಯಗಳನ್ನು ಕುಮಾರ್ ಹಾಳುಗೆಡವಿದ್ದಾರೆ. ಹೀಗಾಗಿ, ಕೋರ್ಟ್ ನೀಡಿದ್ದ ಷರತ್ತು ಮುರಿದಿದ್ದಾರೆ. ಅವರ ಜಾಮೀನು ರದ್ದುಗೊಳಿಸಬೇಕು ಎಂದು ಕೂಡಾ ಸಿಬಿಐ ಕೋರಿದೆ.
1989ರ ಬ್ಯಾಚಿನ ಐಪಿಎಸ್ ಅಧಿಕಾರಿ ರಾಜೀವ್ ಕುಮಾರ್ ಅವರು 2500 ಕೋಟಿ ರು ಮೌಲ್ಯದ ಶಾರಾದ ಚಿಟ್ ಫಂಡ್ ಹಗರಣದಲ್ಲಿ ಸಿಲುಕಿದ್ದಾರೆ. ಶಾರದಾ ಚಿಟ್ ಫಂಡ್ ಹಗರಣದ ತನಿಖೆ ನಡೆಸುತ್ತಿರುವ ಸಿಬಿಐ, ಸಾಕ್ಷ್ಯ ನಾಶಪಡಿಸಿದ ಆರೋಪದಲ್ಲಿ ರಾಜೀವ್ ಕುಮಾರ್ ಅವರನ್ನು ಬಂಧಿಸಲು ಮುಂದಾಗಿತ್ತು. ಕೊಲ್ಕತ್ತಾ ಪೊಲೀಸರು ಅವರನ್ನು ಬಂಧಿಸದಂತೆ ತಡೆದಿದ್ದರು, ಮಾತ್ರವಲ್ಲ ಸಿಬಿಐ ಅಧಿಕಾರಿಗಳನ್ನೇ ಬಂಧಿಸಿ ದೊಡ್ಡ ನಾಟಕೀಯ ಬೆಳವಣಿಗೆಗೆ ಕಾರಣರಾಗಿದ್ದರು.
ರಾಜೀವ್ ಬಂಧನಕ್ಕೆ ತಡೆಯೊಡ್ಡಿ ಕಲ್ಕತ್ತಾ ಹೈಕೋರ್ಟ್ ಆದೇಶ ನೀಡಿತ್ತು. 2019 ಈ ಆದೇಶದ ವಿರುದ್ಧ ಸುಪ್ರೀಂಕೋರ್ಟಿಗೆ ಮನವಿ ಸಲ್ಲಿಸಿರುವ ಬಿಜೆಪಿ ಮತ್ತೊಮ್ಮೆ ವಿಚಾರಣೆಗಾಗಿ ಅರ್ಜಿ ಹಾಕಿದೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ












Click it and Unblock the Notifications